ಅಭಿವೃದ್ಧಿ ಕಾರ್ಯಕ್ಕೆ ತೊಂದರೆ ನೀಡದಂತೆ ಮನವಿ
Team Udayavani, Feb 2, 2019, 9:40 AM IST
ಹೊಳೆಆಲೂರ: ಈ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಹೊಳೆಆಲೂರ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಬೇಕಾದ ಬ್ಯಾರೇಜ್ ಕಂ. ಬ್ರೀಜ್ಗೆ ಕೆಲ ಪ್ರಭಾವಿಗಳು ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ಇದರಿಂದ ಮುಂಬರುವ ದಿನಗಳಲ್ಲಿ ಈ ಭಾಗದ ಗ್ರಾಮಗಳಿಗೆ ಕುಡಿಯುವ ನೀರಿನ ಆತಂಕ ಎದುರಾಗಲಿದೆ. ಕಾರಣ ಸಂಸದರು ಇತ್ತ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಮೊತಿಲಾಲ ರಾವಳ ಹೇಳಿದರು.
ಗ್ರಾಪಂ ಸಭಾಭವನದಲ್ಲಿ ಶುಕ್ರವಾರ ಜರುಗಿದ ಹೊಳೆಆಲೂರ ಹಾಗೂ ಗದಗ ವಾಣಿಜ್ಯೋದ್ಯಮ ಸಂಸ್ಥೆ ಜಂಟಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಬ್ರಾಡ್ಗೇಜ್ ಆರಂಭವಾಗಿ ಕಳೆದ ಐದು ವರ್ಷಗಳಿಂದ ಗದಗ-ಸೊಲ್ಲಾಪುರ ಭಾಗವನ್ನು ನೈರುತ್ಯ ರೈಲ್ವೆ ಸಂಪೂರ್ಣ ನಿರ್ಲಕ್ಷ್ಯ ಮಾಡಿರುವುದರಿಂದ ಗದಗ, ಹೊಳೆಆಲೂರ, ಬದಾಮಿ, ಬಾಗಲಕೋಟೆ, ವಿಜಾಪುರ ವಾಣಿಜ್ಯ ಉದ್ಯಮಗಳು, ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದರು.
ವಾಣಿಜ್ಯೋದ್ಯಮ ಸಂಸ್ಥೆ ಮಾಜಿ ಅಧ್ಯಕ್ಷ ಶಿವಣ್ಣ ಯಾವಗಲ್ಲ ಮಾತನಾಡಿ, ಮುಂಬಯಿ, ಶಿರಡಿ, ವಾರಣಾಸಿ ಗಾಡಿಗಳು ಈ ಭಾಗದಲ್ಲಿ ಸಂಚರಿಸುತ್ತಿದ್ದರೂ ಕೇವಲ ಒಂದು ನಿಮಿಷ ಸಹ ಪ್ರಮುಖ ಪಟ್ಟಣಗಳಲ್ಲಿ ನಿಲುಗಡೆ ಆಗುತ್ತಿಲ್ಲ. ಇದರ ಬಗೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಕ್ಯಾರೇ ಮಾಡದಿರುವುದರಿಂದ ಸಾಕಷ್ಟು ತೊಂದರೆಯಾಗಿದೆ. ಪ್ರತಿವರ್ಷದ ಪದ್ಧತಿಯಂತೆ ಮುಂಬರುವ ಮಾರ್ಚ್ ತಿಂಗಳಿನಲ್ಲಿ ಕಿರುಕುಳ ವ್ಯಾಪಾರಸ್ಥರಿಗೆ ಪರವಾನಗಿ ಹಾಗೂ ಕಾಟಾ, ಕಲ್ಲು ನವೀಕರಣ ಕಾಲಕ್ಕೆ ಬರುವ ಕೆಲ ಅಧಿಕಾರಿಗಳು ಅನಗತ್ಯವಾಗಿ ಕಿರುಕುಳ ನೀಡುವುದು ಎಲ್ಲರಿಗೂ ಬೇಸರದ ಸಂಗತಿಯಾಗಿದೆ. ಅದನ್ನು ಇಲಾಖೆ ಹಿರಿಯ ಅಧಿಕಾರಿಗಳು ಸರಿಪಡಿಸಬೇಕು ಎಂದು ಹೇಳಿದರು.
ಗದಗ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಎಂ.ಬಿ. ಸುರಕೋಡ, ಕಾರ್ಯದರ್ಶಿ ಮದುಸೂಧನ ಪುಣೇಕರ, ಪ್ರೇಮನಾಥ ಬಣ್ಣದ, ಅಶೋಕ ನಿಲೂಗಲ್ಲ, ಶರಣಬಸಪ್ಪ ಕುರಡಗಿ, ಶರಣಬಸಪ್ಪ ಗುಡಿಮನಿ, ಹೊಳೆಆಲೂರ ವಾಣಿಜ್ಯೋದ್ಯಮ ಸಂಸ್ಥೆ ಮಾಜಿ ಅಧ್ಯಕ್ಷ ಎಸ್.ಜಿ. ತೋಟದ, ಶಿವಣ್ಣ ಯಾವಗಲ್ಲ, ಕಾರ್ಯದರ್ಶಿ ಮಾರುತಿ ಮಂಡಸೂಪ್ಪಿ, ನಾಗನಗೌಡ್ರ ಪಾಟೀಲ, ಮಹೇಂದ್ರಗೌಡ ಪಾಟೀಲ, ಸಂಗಪ್ಪ ಅಂಗಡಿ, ಯಚ್ಚರಪ್ಪ ಪತ್ತಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ
ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ
ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ
Gadag; ಇಂಗ್ಲೆಂಡ್ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್
Gadag; ಮತದಾನದ ಮುನ್ನಾ ದಿನ ಬಸ್ಗಳು ಫುಲ್ ರಶ್: ಜನರ ಪರದಾಟ
MUST WATCH
ಹೊಸ ಸೇರ್ಪಡೆ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶುಕ್ತಿಜಾ
KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್