ಮೇವು ಬೇಕ್ರಪ್ಪೋ..ಮೇವು..!


Team Udayavani, Feb 14, 2019, 11:13 AM IST

14-february-14.jpg

ಗಜೇಂದ್ರಗಡ: ಸತತ ಬರದ ಬವಣೆಗೆ ಸಿಲುಕಿ ಒಂದಿಲ್ಲೊಂದು ಸಮಸ್ಯೆಗೆ ಸಿಲುಕಿರುವ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ತಮ್ಮ ಉದರ ತುಂಬಿಕೊಳ್ಳುವುದರ ಜತೆಗೆ ತಮ್ಮ ಜೀವನದ ಒಡನಾಡಿ ಜಾನುವಾರುಗಳಿಗೆ ಮೇವು ಒದಗಿಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಕಳೆದ ನಾಲ್ಕು ವರ್ಷಗಳಿಂದ ಮಳೆ ಪ್ರಮಾಣ ವಾಡಿಕೆಗಿಂತ ಕಡಿಮೆಯಾಗುತ್ತಿರುವುದು ಈ ಭಾಗದ ರೈತರನ್ನು ಚಿಂತೆಗೀಡು ಮಾಡಿದೆ. ಬಹುತೇಕ ರೈತರು ಮಳೆಯಾಶ್ರಿತ ಭೂಮಿ ಹೊಂದಿದ್ದಾರೆ. ಮಳೆ ಸುರಿಯುವ ಪ್ರಮಾಣದ ಆಧಾರದ ಮೇಲೆ ಪಾರಂಪರಿಕ ಬೆಳೆಗಳಾದ ಶೇಂಗಾ, ಜೋಳ, ಬದಲಾಗಿ ಸೂರ್ಯಕಾಂತಿ, ಈರುಳ್ಳಿ, ಮೆಣಸಿನಕಾಯಿ, ಹತ್ತಿ, ಮೆಕ್ಕೆಜೋಳದಂತಹ ವಾಣಿಜ್ಯ ಬೆಳೆ ಬೆಳೆಯಲು ಆರಂಭಿಸಿದ್ದಾರೆ. ಇದರ ಪರಿಣಾಮ ಜಾನುವಾರುಗಳಿಗೆ ಮೇವಿನ ಸಮಸ್ಯೆ ತಲೆದೋರಿದೆ. ಇದರ ಪರಿಣಾಮ ಶೇಂಗಾ ಹೊಟ್ಟು, ಜೋಳದ ಸೊಪ್ಪಿ, ಭತ್ತದ ಹುಲ್ಲಿಗೆ ಬೆಲೆ ಹೆಚ್ಚಳವಾಗಿರುವುದು ರೈತರನ್ನು ಕಂಗೆಡಿಸಿದೆ.

ಈಗಾಗಲೇ ತಾಲೂಕಿನಾದ್ಯಂತ ಬಿಸಿಲಿನ ಪ್ರಖರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಾನುವಾರುಗಳಿಗೆ ಮೇವಿನ ಕೊರತೆ ಜತೆ ನೀರಿನ ತಾಪತ್ರಾಯವೂ   ಎದುರಾಗಿದೆ. ಈ
ಹಿನ್ನೆಲೆಯಲ್ಲಿ ¸ಬೆಲೆ  ಎಷ್ಟೇ ಆದರೂ ಸರಿ ಜಾನುವಾರುಗಳಿಗೆ ಹೊಟ್ಟು, ಮೇವು ಸಂಗ್ರಹಿಸುವಲ್ಲಿ ರೈತರು ನಿರತರಾಗಿದ್ದಾರೆ. ಕಳೆದ ವರ್ಷ ಶೇಂಗಾ ಹೊಟ್ಟು ಟ್ರ್ಯಾಕ್ಟರ್‌ ಒಂದಕ್ಕೆ 4 ಸಾವಿರ ರೂ. ಇತ್ತು. ಆದರೆ, ಪ್ರಸಕ್ತ ವರ್ಷ 6 ರಿಂದ 7 ಸಾವಿರ ರೂ. ಆಗಿದೆ. ಅದರಂತೆ ಜೋಳದ ಮೇವು ಟ್ರ್ಯಾಕ್ಟರ್‌ ಒಂದಕ್ಕೆ 3 ರಿಂದ 4 ಸಾವಿರ ರೂ. ಇತ್ತು. ಆದರೆ, ಈ ವರ್ಷ 5 ರಿಂದ 6 ಸಾವಿರ ರೂ. ಆಗಿದೆ. ಕೆಲ ನೀರಾವರಿ ಆಶ್ರಿತ ಜಮೀನಿನಲ್ಲಿ ಬೆಳೆದ ಜೋಳದ ಮೇವಿಗೆ ಭಾರೀ ಬೇಡಿಕೆ ಬಂದಿದೆ. ಪರಿಣಾಮ ರೈತ ದಿನ ಬೆಳಗಾದರೆ ಯಾವ ಹೊಲದಲ್ಲಿ ಜೋಳ, ಶೇಂಗಾ, ಗೋಧಿ, ಕಡಲೆ ರಾಶಿ ನಡೆದಿದೆ ಎಂದು ಹೊಲದಿಂದ ಹೊಲಕ್ಕೆ ಅಲೆದಾಡಿ ಹೊಟ್ಟು, ಮೇವು ಖರೀದಿಸಿ ಸಂಗ್ರಹಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಶಾಶ್ವತ ಮೇವು ಬ್ಯಾಂಕ್‌ ತೆರೆಯಲಿ
ಬರ ಪೀಡಿತ ಪ್ರದೇಶ ಗಜೇಂದ್ರಗಡ ತಾಲೂಕಿನಲ್ಲಿ ಜಾನುವಾರುಗಳ ರಕ್ಷಣೆಗೆ ಶಾಶ್ವತ ಮೇವು ಬ್ಯಾಂಕ್‌ ಸ್ಥಾಪಿಸಬೇಕು. ಆ ಮೂಲಕ ಹೊಟ್ಟು, ಮೇವು ಸಂಗ್ರಹಿಸಿ ಪ್ರಕೃತಿ ವಿಕೋಪ ಸಂದರ್ಭದಲ್ಲೂ ಪೂರೈಸಬೇಕು. ಸರ್ಕಾರ ಮುಂದಾಲೋಚನೆ ಇಲ್ಲದೆ ಗಡ್ಡಕ್ಕೆ ಬೆಂಕಿ ಬಿದ್ದಾಗ ಬಾವಿ ತೋಡಿದರೆಂಬಂತೆ ಬರದ ಭೀಕರತೆ ಎದುರಾದಾಗಲೇ ಎಲ್ಲವನ್ನೂ ಹುಡುಕಲು ಹೊರಡುವುದು ಅವೈಜ್ಞಾನಿಕ. ಇನ್ನಾದ್ರೂ ಸರ್ಕಾರ ಇಂತಹ ಮುಂದಾಲೋಚನೆ ಮಾಡಿ ಜಾನುವಾರುಗಳ ರಕ್ಷಣೆಗೆ ಮುಂದಾಗುವುದು ಸೂಕ್ತ ಎಂಬುದು ಕೃಷಿ ತಜ್ಞರ ಅಭಿಪ್ರಾಯವಾಗಿದೆ.

ನಾವು ಮನುಷ್ಯರು, ಹೊಟ್ಟೆ ಪಾಡಿಗೆ ಎಲ್ಲಾದ್ರೂ ಹೋಗಿ ಬದುಕಿಕೊಳ್ತೀವಿ ಆದರೆ, ನಮ್ಮ ಭೂಮಿ ಹದಾ ಮಾಡೋ ಬಸವಣ್ಣಗ ಹೊಟ್ಟು, ಮೇವಿಲ್ಲಂದ್ರ ಬದುಕೋದು ಕಷ್ಟ ಆಕ್ಕೈತಿ. ಹಿಂಗಾಗಿ ಹೆಚ್ಚು ರೊಕ್ಕಾ ಕೊಟ್ಟಾದ್ರೂ ಸರಿ ಜೋಳದ ಕಣಕಿ(ಮೇವು) ಖರೀದಿಸೂದು ಅನಿವಾರ್ಯ ಆಗೈತಿ.
 ಮಲ್ಲಪ್ಪ ತಳವಾರ, ರೈತ

ನಾವು ಎಲ್ಲಾದ್ರೂ ತಿಂದು ಬದುಕತೀವಿ. ಆದ್ರ ಭೂತಾಯಿ ಸೇವಾ ಮಾಡೋ ಬಸವಣ್ಣಗ ಹೊಟ್ಟು ಮೇವು ಇಲ್ಲಂದ್ರ ಹ್ಯಾಂಗ ಬದಕ್ತಾವು. ಅದಕ್ಕ ದುಬಾರಿ ರೊಕ್ಕಾ ಕೊಟ್ಟು ಹೊಟ್ಟು ಮೇವು ಖರೀದಿಸೀವಿ.
ಬಸಪ್ಪ ನಡುವಿನಮನಿ, ರೈತ

ಬರ ನಿರ್ವಹಣೆಗೆ ಜಿಲ್ಲಾಧಿಕಾರಿಗಳು ಈಗಾಗಲೇ ಸೂಕ್ತ ನಿರ್ದೇಶನ ನೀಡಿದ್ದಾರೆ. ಅದರ ಭಾಗವಾಗಿ ಜಾನುವಾರುಗಳಿಗೆ ಮೇವೊದಗಿಸಲು ಗಜೇಂದ್ರಗಡ ತಾಲೂಕಿನಲ್ಲಿ ಮೇವು ಬ್ಯಾಂಕ್‌ ತೆರೆಯಲು ಸ್ಥಳಗಳ ಹುಡುಕಾಟದಲ್ಲಿ ತಾಲೂಕಾಡಳಿತ ನಿರತವಾಗಿದೆ.
ಗುರುಸಿದ್ದಯ್ಯ ಹಿರೇಮಠ, ತಹಶೀಲ್ದಾರ್‌

„ಡಿ.ಜಿ ಮೋಮಿನ್‌

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.