ವರ್ಷ ಕಳೆದರೂ ಪ್ರಾರಂಭವಾಗದ ಕಾಮಗಾರಿ


Team Udayavani, Feb 22, 2019, 11:28 AM IST

22-february-16.jpg

ರೋಣ: ತಾಲೂಕಿನ ಹೊಳೆಆಲೂರ ಮಾರ್ಗವಾಗಿ ಬದಾಮಿ ರಸ್ತೆಯ ಮಧ್ಯದಲ್ಲಿರುವ ಮಲಪ್ರಭಾ ನದಿಗೆ ಕರ್ನಾಟಕ ಸರ್ಕಾರ ಮತ್ತು ಸಣ್ಣ ನೀರಾವರಿ ಇಲಾಖೆಯ 2017-18ನೇ ಸಾಲಿನ ಅನುದಾನದಡಿಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಅಡ್ಡವಾಗಿ ಬ್ರೀಜ್‌ ಕಮ್‌ ಬ್ಯಾರೇಜ್‌ ನಿರ್ಮಾಣ ಮಾಡಲು ಭೂಮಿಪೂಜೆ ನೆರವೇರಿಸಿ ವರ್ಷ ಕಳೆದಿದೆ. ಆದರೂ ಕಾಮಗಾರಿ ಪ್ರಾರಂಭವಾಗಿಲ್ಲ. ಮಳೆಗಾಲ ಸುರುವಾದರೆ ಮಲಪ್ರಭ ನದಿ ದಡದಲ್ಲಿ ವಾಸಿಸುವ ಸಂತ್ರಸ್ಥರಿಗೆ ತೀವ್ರ ತೊಂದರೆಯಾಗುತ್ತದೆ.

2018 ಫೆ. 26ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದಾಗ ಕಾಮಗಾರಿ ಟೆಂಡರ್‌ ಪ್ರಕಿಯೆ ಮುಗಿಯದಿದ್ದರೂ ಅಂದಿನ ನರಗುಂದ ಮತಕ್ಷೇತ್ರದ ಶಾಸಕ ಬಿ.ಆರ್‌. ಯಾವಗಲ್‌ ತರಾತುರಿಯಲ್ಲಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದರು. ಬೃಹತ್‌ ಸಮಾರಂಭ ಮಾಡಿದ್ದರು. ಆದರೆ ಭೂಮಿಪೂಜೆ ನೆರವೇರಿಸಿ ವರ್ಷ ಕಳೆದರೂ ಕಾಮಗಾರಿ ಮಾತ್ರ ಪ್ರಾರಂಭವಾಗಿಲ್ಲ. ಇದರಿಂದ ಸಾರ್ವಜನಿಕರಿಗೆ
ತೀವ್ರ ತೊಂದರೆಯಾಗಿದೆ.

ರೈಲ್ವೆ ಪ್ರಯಾಣಿಕರ ಪರದಾಟ
ಹೊಳೆಆಲೂರ ಗ್ರಾಮದಲ್ಲಿ ರೈಲ್ವೆ ನಿಲ್ದಾಣ ಇರುವುದರಿಂದ ಇಲ್ಲಿ ವ್ಯಾಪಾರ ವಹಿವಾಟ ಚೆನ್ನಾಗಿ ನಡೆಯುತ್ತದೆ. ಅಲ್ಲದೆ ಇಲ್ಲಿ ಕೃಷಿ ಉತ್ಪನ ಮಾರುಕಟ್ಟೆ ತಾಲೂಕು ಕೇಂದ್ರ ಕಚೇರಿಯೂ ಇಲ್ಲಿ ಇರುವುದರಿಂದ ಸುತ್ತಮುತ್ತಲಿನ ಜನ ಮತ್ತು ವ್ಯಾಪಾರಸ್ಥರು ಈ ಮಾರ್ಗವಾಗಿ ರೈಲ್ವೆ ಪ್ರಯಾಣ ಮಾಡುತ್ತಾರೆ. ಆದರೆ ಕೆಲವು ಹಳ್ಳಿಯ ಜನರು ಈ ಮಲಪ್ರಭ ನದಿಯನ್ನು ದಾಟಲಾಗದೆ ದೂರದ ಬದಾಮಿ ಅಥವಾ ಕೆರೂರದಿಂದ ಪ್ರಯಾಣ ಬೆಳೆಸುವ ಮೂಲಕ ಪರದಾಡುತ್ತಾರೆ. ಇದಲ್ಲದೆ ಮಳೆಗಾಲ ಬಂತು ಎಂದರೆ ಸಾಕು, ಈ ನದಿ ಉಕ್ಕಿ ಹರಿಯುತ್ತದೆ. ಇದರಿಂದ ಈ ರಸ್ತೆ ದಾಟವುದು ಅವಶ್ಯವಿರುವ ಪ್ರಯಾಣಿಕರು ಅಪಾಯದ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಹೋಗುತ್ತಾರೆ. ಇದರಿಂದ ಇಲ್ಲಿನ ಜನರಿಗೆ ಬ್ಯಾರೇಜ್‌ ನಿರ್ಮಾಣವಾಗುವರೆಗೆ ಸಮಸ್ಯೆ ಜೊತೆಗೆ ಅಪಾಯ ತಪ್ಪಿದ.

ಕಾಮಗಾರಿಯನ್ನು ಪ್ರಾರಂಭ ಮಾಡಬೇಕು ಎನ್ನುವಷ್ಟರಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಬಂತು. ಚುನಾವಣಾ ನೀತಿ ಸಹಿಂತೆ ಇರುವುದರಿಂದ ಟೆಂಡರ್‌ ಹಂತ ಮುಗಿಯದ ಕಾರಣ ಕಾಮಗಾರಿ ಪ್ರಾರಂಭ ಮಾಡಲು ಆಗಲಿಲ್ಲ. ಅಲ್ಲದೆ ಈಗ ಟೆಂಡರ್‌ ಪ್ರಕ್ರಿಯೆ ಮುಗಿದಿದೆ. ಇಷ್ಟು ದಿನ ಗುತ್ತಿಗೆದಾರ ಬೇರೆ ಕೆಲಸದಲ್ಲಿ ತೊಡಗಿದ್ದರಿಂದ ಕಾಮಗಾರಿ ಪ್ರಾರಂಭ ಮಾಡಲು ಆಗಲಿಲ್ಲ. ಸದ್ಯ ನದಿಯಲ್ಲಿ ನೀರು ಇದೆ. ಕಾಲಿಯಾದ ತಕ್ಷಣವೇ ಕಾಮಗಾರಿ ಪ್ರಾರಂಭ ಮಾಡುತ್ತೇವೆ.
 ಗಣಪತಿಸಿಂಗ್‌,
ಗದಗ ಸಣ್ಣ ನೀರಾವರಿ ಇಲಾಖೆ ಅಧಿಕಾರಿ

ಯಚ್ಚರಗೌಡ ಗೋವಿಂದಗೌಡ್ರ 

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.