ಕಾರ್ಮಿಕರ ಅಭಿವೃದ್ಧಿಗೆ ಒತ್ತು
Team Udayavani, Mar 2, 2019, 10:14 AM IST
ಗದಗ: ಕಾರ್ಮಿಕರ ಕಾಯಕ ಪರಿಪೂರ್ಣ ಆಗಿರುವುದರಿಂದ ನಾಗರಿಕ ಸಮಾಜ ಮುಂದುವರಿದಿದೆ ಎಂದು ಜಿಪಂ ಅಧ್ಯಕ್ಷ ಎಸ್.ಪಿ. ಬಳಿಗಾರ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆಶ್ರಯದಲ್ಲಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಶುಕ್ರವಾರ ನಡೆದ ಕಾರ್ಮಿಕ ಸಮ್ಮಾನ ದಿನ ಹಾಗೂ ಕಾರ್ಮಿಕ ಸಮ್ಮಾನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
12ನೇ ಶತಮಾನದಲ್ಲಿ ಬಸವಣ್ಣನವರು ವಿವಿಧ ರಂಗಗಳ ಕಾರ್ಮಿಕರನ್ನು ಕಾಯಕ ಯೋಗಿ ಎಂದು ಕರೆಯುವುದರೊಂದಿಗೆ ಕಾಯಕವೇ ಕೈಲಾಸ ಎಂದು ಸಂದೇಶ ಸಾರಿದರು. ಗಾಂಧಿಧೀಜಿ ಹಾಗೂ ಬಸವಣ್ಣನವರ ಹಾದಿಯಲ್ಲಿ ಎಲ್ಲರೂ ನಡೆಯಬೇಕು. ಕಾರ್ಮಿಕರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಹಲವಾರು
ಯೋಜನೆ ಜಾರಿಗೆ ತಂದಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಅಂಬೇಡ್ಕರ್ ಕಾರ್ಮಿಕ ಸಹಾಯಕ ಹಸ್ತ ಯೋಜನೆಯಡಿಯಲ್ಲಿ ಅಸಂಘಟಿತ ವಲಯಗಳಾದ ಹಮಾಲರು, ಚಿಂದಿ
ಆಯುವವರು, ಗೃಹ ಕಾರ್ಮಿಕರು, ಟೇಲರ್, ಅಗಸರು, ಮೆಕ್ಯಾನಿಕ್, ಅಕ್ಕಸಾಲಿಗರು, ಕಂಬಾರರು, ಕುಂಬಾರರು,
ಕ್ಷೌರಿಕರು, ವಾಹನ ಚಾಲಕರು, ಕಟ್ಟಡ ಕಾರ್ಮಿಕರಿಗೆ ಅಸಂಘಟಿತ ಯೋಜನೆಯಲ್ಲಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು. ಅವರಿಗೆ ದೊರೆಯುವ ಸೌಲಭ್ಯಗಳ ಕುರಿತು ಅರಿವು ಮೂಡಿಸಬೇಕು. ಕಾರ್ಮಿಕರ ಮಕ್ಕಳಿಗೆ
ಸಿಗಬೇಕಾದ ಸೌಲಭ್ಯಗಳು, ಶಿಷ್ಯವೇತನ ಒದಗಿಸಿಕೊಡಬೇಕು ಎಂದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿ.ಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ತಾ.ಪಂ. ಉಪಾಧ್ಯಕ್ಷೆ ಸುಜಾತ ಖಂಡು, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಕಾಂತ ಪಾಟೀಲ ಇದ್ದರು.
ಶ್ರಮಯೋಗಿ ಯೋಜನೆ ಪ್ರಧಾನಮಂತ್ರಿ ಶ್ರಮಯೋಗಿ ಯೋಜನೆಯಡಿ ದೇಶಾದ್ಯಾಂತ 43 ವಲಯಗಳ ಅಸಂಘಟಿತ ಕಾರ್ಮಿಕರ ಆರ್ಥಿಕ ಪ್ರಗತಿಗೆ ವಿವಿಧ ಸೌಲತ್ತುಗಳನ್ನು ಒದಗಿಸಲಾಗುತ್ತದೆ. ವೃತ್ತಿಪರರಿಗೆ ವೃದ್ದಾಪ್ಯ ವೇತನ ನೀಡಲಾಗುವುದು. ಪ್ರಧಾನ ಮಂತ್ರಿ ಜೀವನ್ ಯೋಜನೆ, ಬಿಪಿಎಲ್ ಕಾರ್ಡ್ನವರಿಗೆ ಉಚಿತ
ವೈದ್ಯಕೀಯ ಸೇವೆ ನೀಡಲಾಗುತ್ತದೆ. ಅರ್ಹರು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು.
. ಶಿವಕುಮಾರ ಉದಾಸಿ, ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ