ಪಂಚಲೋಹದ ಶಿವಲಿಂಗಕ್ಕಿಂದು  ಪೂಜೆ


Team Udayavani, Mar 4, 2019, 9:53 AM IST

4-march-12.jpg

ಮುಂಡರಗಿ: ತಾಲೂಕಿನ ವಿಠಲಾಪುರ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಪರೂಪದ ಪಂಚಲೋಹದ ರಸಲಿಂಗ (ಶಿವಲಿಂಗ)ವಿದ್ದು, ಮಹಾಶಿವರಾತ್ರಿ ದಿನ ವಿಶೇಷವಾಗಿ ರಸಲಿಂಗ ಪೂಜೆ ನಡೆಯುತ್ತದೆ. ರಸಲಿಂಗ ಪೂಜೆಯನ್ನು ಶಿವರಾತ್ರಿ ದಿನ ತೊಳೆದು ಸಕಲ ಹೂವುಗಳು,ಬಿಲ್ವಪತ್ರೆಗಳಿಂದ ಪೂಜೆ ನೆರವೇರಿಸಲಾಗುತ್ತದೆ.

ದಕ್ಷಿಣ ಭಾರತದಲ್ಲಿಯೇ ವಿಶೇಷ ಆಗಿರುವ ರಸಲಿಂಗವು ಹಲವು ಕುತೂಹಲಕರ ಸಂಗತಿಗಳಿಂದ ಒಡಗೂಡಿದೆ. ರಸಶಾಸ್ತ್ರವನ್ನು ಅಧ್ಯಯನ ಮಾಡಿದ್ದ ಯೋಗ ಗುರುಗಳು ರಸಲಿಂಗವನ್ನು ರಚನೆ ಮಾಡಿದ್ದರು ಎನ್ನುವ ಮಾತು ಜನಜನಿತವಾಗಿದೆ. ಅಲ್ಲದೇ ಸಾಕ್ಷಾತ್ ಶಿವನ ಕೃಪೆಯಿಂದಲೇ ಬಿಷ್ಟಪ್ಪಯ್ಯನವರು ರಸಲಿಂಗವನ್ನು ಪಡೆದುಕೊಂಡಿದ್ದಾರೆ ಎನ್ನಲಾಗುತ್ತದೆ. ರಸಲಿಂಗದ ಹಿಂದೆ ಐತಿಹಾಸಿಕ ಸಂಗತಿಗಳು ಅಡಕವಾಗಿರುವ ಬಗ್ಗೆಯು ತಿಳಿದು ಬರುತ್ತದೆ.

ಮಹಾಪುರುಷರ ಕುಟುಂಬ: ವಿಠಲಾಪುರದ ಮಹಾಪುರುಷರ ಕುಟುಂಬದ ಮೂಲ ಪುರುಷ ಬಿಷ್ಟಪ್ಪಯ್ಯ. ಅವರೇ ರಸಲಿಂಗವನ್ನು ರಚನೆ ಮಾಡಿರುವ ಪ್ರತೀತಿ ಇದೆ. ಬಿಷ್ಟಪ್ಪಯ್ಯನವರಿಂದ ಬಳುವಳಿಯಾಗಿ ಬಂದಿರುವ ರಸಲಿಂಗದ ಪೂಜೆಯು ಅವ್ಯಾಹತವಾಗಿ ತಲೆಮಾರುಗಳಿಂದ ನಡೆದುಕೊಂಡು ಬರುತ್ತಿದೆ.

ರಸಲಿಂಗದ ರಚನೆ: ವಿಜಯನಗರ ಆಳ್ವಿಕೆಯ ಸಂದರ್ಭದಲ್ಲಿ 16ನೇ ಶತಮಾನದ ಪೂರ್ವಾರ್ಧ ಕಾಲಘಟ್ಟದಲ್ಲಿ ಇದ್ದ ಬಿಷ್ಟಪ್ಪಯ್ಯ ಮಹಾಪುರುಷರು ವಿಠಲಾಪುರದಲ್ಲಿ ನೆಲೆ ನಿಂತು ಯೋಗ, ರಸಶಾಸ್ತ್ರ ವಿದ್ಯೆಯನ್ನು ಪಾರಂಗತ ಮಾಡಿಕೊಂಡಿದ್ದರು. ಯೋಗ ಮತ್ತು ರಸಶಾಸ್ತ್ರ ವಿದ್ಯೆಯ ಮೂಲಕ ಪಂಚಲೋಹದಿಂದ ಕೂಡಿದ ರಸಲಿಂಗವನ್ನು ರಚಿಸಿದರು. ಎರಡರಿಂದ ಮೂರು ಅಡಿ ಎತ್ತರ ಇರುವ ಪಂಚಲೋಹದ ರಸಲಿಂಗದ ಟೊಳ್ಳಾಗಿರುವ ಒಳಭಾಗದಲ್ಲಿ ಪಾದರಸವನ್ನು ತುಂಬಿದರಲ್ಲದೇ, ರಸಲಿಂಗದಿಂದ ಪಾದರಸವು ಹೊರಗೆ ಬಾರದಂತೆ ಬೆಸುಗೆಯು ಹಾಕಿದರು. ರಸಲಿಂಗವು ಮೂವತ್ತು ಕೆಜಿಗಳಷ್ಟು ತೂಕವಿದೆ.

ಕನಿಷ್ಠ ನಾಲ್ಕು ಶತಮಾನಗಳಷ್ಟು ಪುರಾತನ ಆಗಿರುವ ರಸಲಿಂಗವು ಈ ಹೊತ್ತಿಗೂ ಸುಸ್ಥಿತಿಯಲ್ಲಿದ್ದು, ನಿತ್ಯವು ಪೂಜಿಸಲ್ಪಡುತ್ತದೆ. ರಸಲಿಂಗವು ದಿನದ ಸೂರ್ಯ ಕಿರಣಗಳ ಏರಿಳಿತಕ್ಕೆ ಅನುಗುಣವಾಗಿ ಮುಂಜಾನೆ ಕೆಂಪು ಬಣ್ಣದಲ್ಲಿ, ಮಧ್ಯಾಹ್ನ ಹಳದಿ ಬಣ್ಣದಲ್ಲಿ, ಸಂಜೆ ಹೊತ್ತು ಬಂಗಾರ ಛಾಯೆಯ ರೂಪದಲ್ಲಿ ಕಾಣುತ್ತದೆ.

ದೇಶದಲ್ಲಿ ಸುಖ, ಸಮೃದ್ಧಿ ಮೂಡಿ ಬರಲಿ ಎನ್ನುವ ಹಿನ್ನೆಲೆಯಲ್ಲಿ ಮೂವತ್ತು-ನಲವತ್ತು ವರ್ಷಗಳಿಗೆ ಒಮ್ಮೆ ರಸಲಿಂಗದಿಂದ ಪಾದಸರವು ಹರಿದು ಹೊರ ಸೂಸುತ್ತದೆ. ಅಲ್ಲದೇ ವಾತಾವರಣದಲ್ಲಿ ತಾಪಮಾನವು ಹೆಚ್ಚಾದರೂ ಕೂಡಾ ರಸಲಿಂಗದಿಂದ ಪಾದರಸವು ಹೊರ ಸೂಸುತ್ತದೆ.  ರಸಲಿಂಗದಿಂದ ಹೊರಬಂದಿರುವ ಪಾದರಸವನ್ನು ಮಹಾಪುರುಷ ಕುಟುಂಬದವರು ಸಂಗ್ರಹಿಸಿಟ್ಟಿದ್ದಾರೆ. ಈ ಹೊರ ಸೂಸಿರುವ ಪಾದರಸವು ಆಯುರ್ವೇದಿಕ್‌ ಔಷಧಗಳಲ್ಲಿ ವಿಶೇಷವಾಗಿ ಬಳಕೆ ಮಾಡಲಾಗುತ್ತದೆ. ರಸಲಿಂಗವನ್ನು ಪ್ರತಿದಿನವು ಜಲಾಭಿಷೇಕ ಮಾಡಿದಾಗ ದೊರಕುವ ಜಲಾಮೃತವು ಸರ್ವರೋಗಗಳಿಗೆ ದಿವೌಷಧ ಆಗಿದೆ ಎಂದು ವಂಶಸ್ಥರಾದ ಸುನೀಲ್‌ ಮಹಾಪುರುಷ ಹೇಳುತ್ತಾರೆ.

ರಸಲಿಂಗ ರಚನೆ ಮಾಡಿರುವ ಬಿಷ್ಟಪ್ಪಯ್ಯ ಮಹಾಪುರುಷರಿಗೂ ವಿಜಯನಗರ ಸಾಮ್ರಾಜ್ಯಕ್ಕೂ ನಂಟು ಇತ್ತು. ವಿರೂಪಾಕ್ಷೇಶ್ವರ
ದೇವಸ್ಥಾನದ ಗೋಪುರವನ್ನು ಬಿಷ್ಟಪ್ಪಯ್ಯನವರೇ ಕಟ್ಟಿಸಿದ್ದಾರೆ.
 . ವಸುಂಧರಾ ದೇಸಾಯಿ, ಇತಿಹಾಸಕರರು.

„ಹು.ಬಾ. ವಡ್ಡಟ್ಟಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.