ನಿಡೋಣಿಯಲ್ಲಿ ಬಸವೇಶ್ವರ ಪುತ್ಥಳಿಗೆ ಅವಮಾನ: ಆಕ್ರೋಶ


Team Udayavani, Jan 16, 2017, 12:53 PM IST

gul1.jpg

ಕಲಬುರಗಿ: ನೆರೆಯ ವಿಜಯಪುರ ಜಿಲ್ಲೆಯ ನಿಡೋಣಿ ಗ್ರಾಮದಲ್ಲಿ ವಿಶ್ವಗುರು ಬಸವೇಶ್ವರರ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವ ಘಟನೆ ಖಂಡಿಸಿ ಅಖೀಲ ಭಾರತ ವೀರಶೈವ ಮಹಾಸಭಾದ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ, ಟೈರ್‌ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. 

ಮೂರ್ತಿಗೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಧಿಸಬೇಕೆಂದು ಆಗ್ರಹಿಸಿ ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ನಗರದ ಜಗತ್‌ ವೃತ್ತದ ಬಳಿ ರವಿವಾರ ರಸ್ತೆ ತಡೆ ಚಳುವಳಿ ನಡೆಸಲಾಯಿತು. ಪದೇ ಪದೇ ಬಸವೇಶ್ವರ ಮೂರ್ತಿಗೆ ಅವಮಾನವಾಗುತ್ತಿರುವ ಘಟನೆಗಳು ನಡೆಯುತ್ತಿವೆಯಲ್ಲದೇ ಲಿಂಗಾಯಿತರ ಮೇಲೂ ಹಲ್ಲೆಗಳು ನಡೆಯುತ್ತಿವೆ.

ಹೀಗಾಗಿ ಲಿಂಗಾಯಿತರ ತಾಳ್ಮೆ ಮೀರುತ್ತಿದೆ. ಒಂದು ವೇಳೆ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ, ನಿಡೋಣಿಯಲ್ಲಿ ಬಸವೇಶ್ವರರ ಮೂರ್ತಿಗೆ ಆದ ಅವಮಾನ ಖಂಡನೀಯ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. 

ಹಠಾತ್‌ ಪ್ರತಿಭಟನೆಯಿಂದಾಗಿ ಜಗತ್‌ ವೃತ್ತದ ನಾಲ್ಕೂ ರಸ್ತೆಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಯಿತು. ಮಹಾಸಭಾ ಜಿಲ್ಲಾಧ್ಯಕ್ಷ ಅರುಣಕುಮಾರ ಪಾಟೀಲ ಕೊಡಲಹಂಗರಗಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖಂಡರಾದ ಜಂಬನಗೌಡ ಶೀಲವಂತ, ಕಲ್ಯಾಣಪ್ಪ ಪಾಟೀಲ, ಚಂದ್ರಶೇಖರ ತಳ್ಳಳ್ಳಿ,

ಶರಣಗೌಡ ಪಾಟೀಲ, ಅಪ್ಪು ಕಣಕಿ, ಶರಣು ಪಪ್ಪಾ, ಮಂಜುನಾಥ ಹಾಗರಗಿ, ಈರಣ್ಣ ಗೊಳೇದ, ಮಹಾಂತೇಶ ಪಾಟೀಲ, ಮಂಜು ರೆಡ್ಡಿ, ಶಾಂತಕುಮಾರ್‌ ಖ್ಯಾಮ್‌, ರಾಜು ಕೋಟೆ, ರಮೇಶ ಕಡಾಳೆ, ರಾಜು ವಾಡೇಕರ್‌, ಗುರುರಾಜ್‌ ಕೋರವಾರ್‌, ಅಂಬರೀಷ ನೂಲಾ, ಅಪ್ಪಾಸಾಬ್‌ ಪಾಟೀಲ, ನ್ಯಾಯವಾದಿ ಶಿವರಾಜ ಅಂಡಗಿ, ಶಿವು ಕಾಳಗಿ, ನಾಗಭೂಷಣ ಇದ್ದರು. 

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.