ವಿಜ್ಞಾನದ ಚಿಂತನೆ ಮಕ್ಕಳಿಗೆ ತಲುಪಲಿ
Team Udayavani, Mar 28, 2017, 3:43 PM IST
ಕಲಬುರಗಿ: ಸರಕಾರಗಳು ಹಾಗೂ ವಿಜ್ಞಾನಿಗಳು ಮಾಡುತ್ತಿರುವ ವಿಜ್ಞಾನದ ವಿಸ್ತರಣೆ ಮತ್ತು ಹೊಸ ಆವಿಷ್ಕಾರಗಳ ಕುರಿತು ಮಕ್ಕಳಿಗೆ ಮಾಹಿತಿ ತಲುಪಿಸಬೇಕು ಎಂದು ಗುವಿವಿ ಕುಲಸಚಿವ ಪ್ರೊ| ದಯಾನಂದ ಅಗಸರ ಹೇಳಿದರು.
ನಗರದ ರಾಜಾಪುರದ ಸರಕಾರಿ ಮಹಾವಿದ್ಯಾಲಯದಲ್ಲಿ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ವಿಜ್ಞಾನ ಬೆಳಕನ್ನು ಸರಿಯಾದ ದಿಕ್ಕಿನೆಡೆಗೆ ಕೊಂಡೊಯ್ಯುವ ಸಾಧನ ಮಕ್ಕಳು. ಅವರಲ್ಲಿ ಈ ಕುರಿತು ಸರಿಯಾದ ತಿಳಿವಳಿಕೆ ಮತ್ತು ಆಸಕ್ತಿ ಮೂಡಿಸಬೇಕು. ಇವತ್ತು ಪ್ರತಿ ದಿನವೂ ಹೊಸದೊಂದು ಬೆಳವಣಿಗೆ ನಡೆಯುತ್ತಿದೆ. ಇದನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟು ಅವರಲ್ಲಿ ಆಸಕ್ತಿ ಮೂಡಿಸಬೇಕು ಎಂದು ಹೇಳಿದರು.
ಕರಾವಿಪ ಗೌರವ ಕಾರ್ಯದರ್ಶಿ ಗಿರೀಶ ಕಡ್ಲೆàವಾಡ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನದ ತತ್ವಗಳನ್ನು ಸರಿಯಾಗಿ ಬಳಕೆ ಮಾಡಿಕೊಂಡು ಜನಸಾಮಾನ್ಯರಿಗೆ ಉಪಯುಕ್ತವಾದ ತಂತ್ರಜ್ಞಾನ ಅಭಿವೃದ್ಧಿ ಪಡಿಸುವಂತೆ ಮುಂದಡಿ ಇಡಬೇಕು.
ಇದರಿಂದ ಸಮಾಜಕ್ಕೂ ಹಾಗೂ ವಿಜ್ಞಾನ ಕ್ಷೇತ್ರಕ್ಕೂ ಅನುಕೂಲವಾಗಲಿದೆ ಎಂದು ಹೇಳಿದರು. ಹಗರಿಬೊಮ್ಮನಹಳ್ಳಿ ಸರಕಾರಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಅಂಜನಾ ಕೆ. ಕೊಟ್ರಬಸ್ಸಯ್ಯ ಪ್ರಥಮ, ಕಲಬುರಗಿ ಎನ್ವಿ ಪದವಿ ಮಹಾವಿದ್ಯಾಲಯದ ಪ್ರವೀಣಕುಮಾರ ಆನಂದ ದ್ವಿತೀಯ, ಸರಕಾರಿ ಮಹಾವಿದ್ಯಾಲಯದ ಅಕ್ಷತಾ ಎಸ್.ಗೀತಾ ಎಸ್.ಬಿ ಅವರಿಗೆ ತೃತೀಯ ಬಹುಮಾನ ನೀಡಲಾಯಿತು.
ಅಧ್ಯಕ್ಷತೆ ವಹಿಸಿದ್ದ ಡಾ| ನಂದಗಿ ರಾಚಪ್ಪ ಮಾತನಾಡಿದರು. ಪ್ರೊ| ರಾಜಾಸಮರಸೇನ ಮೋದಿ ಸ್ವಾಗತಿಸಿದರು. ಡಾ| ನಾಗರಾಜ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ಡಾ| ರಾಜೇಂದ್ರ ಸಿಂಗ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು