ಕಾಶೀ ಜಗದ್ಗುರು ಅಡ್ಡಪಲ್ಲಕ್ಕಿ ಉತ್ಸವ
Team Udayavani, Apr 12, 2017, 3:31 PM IST
ಜೇವರ್ಗಿ: ಯಡ್ರಾಮಿ ಸಮೀಪದ ಆಲೂರ ಗ್ರಾಮದ ಸದ್ಗುರು ಕೆಂಚಬಸವೇಶ್ವರರ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ಕಾಶೀ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಅಡ್ಡಪಲ್ಲಕಿ ಉತ್ಸವ ಜರುಗಿತು.
ಬೆಳಗ್ಗೆ 10:30 ಗಂಟೆಗೆ ಆಲೂರ ಗ್ರಾಮದ ಬಸ್ ನಿಲ್ದಾಣದಿಂದ ವಿವಿಧ ಬಡಾವಣೆಗಳ ಮೂಲಕ ಸದ್ಗುರು ಕೆಂಚಬಸವೇಶ್ವರ ಸಂಸ್ಥಾನ ಹಿರೇಮಠದ ವರೆಗೆ ಅಡ್ಡಪಲ್ಲಕಿ ಉತ್ಸವ ನಡೆಯಿತು. ನೂರಾರು ಮುತ್ತೆ$çದೆಯರು ಕುಂಭ-ಕಳಸ, ಡೊಳ್ಳು, ಭಾಜಾ ಭಜಂತ್ರಿ ಸೇರಿದಂತೆ ವಿವಿಧ ಕಲಾತಂಡಗಳು ಉತ್ಸವದಲ್ಲಿ ಪಾಲ್ಗೊಂಡಿದ್ದವು.
ಕಲಬುರಗಿ ಜಿಲ್ಲೆ ಸೇರಿದಂತೆ ನೆರೆಯ ಯಾದಗಿರಿ, ಶಹಾಪುರ, ಸಿಂದಗಿ ಕಡೆಯಿಂದ ಭಕ್ತರ ದಂಡೇ ಆಗಮಿಸಿತ್ತು. ಅಡ್ಡಪಲ್ಲಕಿ ಮಹೋತ್ಸವದಲ್ಲಿ ಆಲೂರ-ಕಾಸರಭೋಸಗಾದ ಕೆಂಚವೃಷಬೇಂದ್ರ ಶಿವಾಚಾರ್ಯರು, ಬಾಲತಪಸ್ವಿ ಸಾಂಬ ಶಿವಯೋಗಿ ಶಿವಾಚಾರ್ಯರು, ನಿಡಗುಂದದ ಕರುಣೇಶ್ವರ ಸ್ವಾಮೀಜಿ,
ಹಿಪ್ಪರಗಾ ಎಸ್.ಎನ್. ಸಿದ್ಧಲಿಂಗ ಶಿವಾಚಾರ್ಯರು ಹಾಗೂ ಮುಖಂಡರಾದ ರಾಜಶೇಖರ ಸೀರಿ, ಗೊಲ್ಲಾಳಪ್ಪಗೌಡ ಮಾಗಣಗೇರಾ, ಚಂದ್ರಶೇಖರ ಪುರಾಣಿಕ, ವಿಶ್ವನಾಥ ಸಾಹು ಆಲೂರ, ಸೋಮಶೇಖರ ಮಾಲಿಪಾಟೀಲ, ಎಸ್. ಕೆ. ಹೇರೂರ, ಹಣಮಂತ್ರಾಯ ಹೆಡಗಿಜೋಳ, ಈರಣ್ಣ ಹೆಡಗಿಜೋಳ ಮತ್ತಿತರರು ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಬೆಳಿಗ್ಗೆ 6:00 ಗಂಟೆಗೆ ಕೆಂಚಬಸವೇಶ್ವರರ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ ಹಾಗೂ ಸಂಜೆ 6:00 ಗಂಟೆಗೆ ರಥೋತ್ಸವ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ