ಖಾಸಗಿ ಆಸ್ಪತ್ರೆ ಮೇಲೆ ಸವಾರಿ: ಆಕ್ರೋಶ


Team Udayavani, Jun 17, 2017, 3:34 PM IST

gul4.jpg

ಕಲಬುರಗಿ: ಖಾಸಗಿ ವೈದ್ಯಕೀಯ ಸಂಸ್ಥೆಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ವಿರೋಧಿಸಿ ರಾಜ್ಯವ್ಯಾಪಿ ಖಾಸಗಿ ಆಸ್ಪತ್ರೆಗಳ ವೈದ್ಯರ ಸಂಘದ ಕರೆಯ ಮೇಲೆ ಜಿಲ್ಲಾದ್ಯಂತ ಖಾಸಗಿ ಆಸ್ಪತ್ರೆಗಳನ್ನು ಬಂದ್‌ ಮಾಡಿ ವೈದ್ಯರು ಮುಷ್ಕರಕ್ಕೆ ಬೆಂಬಲಿಸಿ ಪ್ರತಿಭಟನೆ ನಡೆಸಿದರು. 

ಖಾಸಗಿ ಆಸ್ಪತ್ರೆಗಳ ಬಂದ್‌ನಿಂದಾಗಿ ಸಾರ್ವಜನಿಕರು ಪರದಾಡುವಂತಾಯಿತು. ಬಹುತೇಕ ಎಲ್ಲಾ ಖಾಸಗಿ ಆಸ್ಪತ್ರೆಗಳು ಮುಚ್ಚಿದ್ದವು. ಹೀಗಾಗಿ ರೋಗಿಗಳು ಪರದಾಡುವಂತಾಯಿತು. ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ| ಕಿರಣ ದೇಶಮುಖ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. 

ಈಗಾಗಲೇ ಹಲವಾರು ಜಿಲ್ಲೆಯ ವೈದ್ಯರು ಬೆಂಗಳೂರಲ್ಲಿ ನಡೆಯುವ ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ರೋಗಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಮುಷ್ಕರ ನಡೆಸಿದ್ದೆವೆ ಎಂದು ಡಾ| ಕಿರಣ ದೇಶಮುಖ ಸುದ್ದಿಗಾರರಿಗೆ ತಿಳಿಸಿದರು. ಪ್ರತಿಭಟನೆಯಲ್ಲಿ ಡಾ| ಭರತ ಕೋಣಿನ್‌ ಸೇರಿದಂತೆ ಅನೇಕ ಖಾಸಗಿ ಆಸ್ಪತ್ರೆಗಳ ವೈದ್ಯರು ಭಾಗವಹಿಸಿದ್ದರು. 

ಜೇವರ್ಗಿ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ 2017 ವಿರೋಧಿ ಸಿ ಶುಕ್ರವಾರ ಪಟ್ಟಣದಲ್ಲಿ ಖಾಸಗಿ ವೈದ್ಯರ ಸಂಘ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯದ ಖಾಸಗಿ ಆಸ್ಪತ್ರೆಗಳ ಮೇಲೆ ಸವಾರಿ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರದ ನಿರ್ಧಾರ ಖಂಡನೀಯ.

ವಿಧೇಯಕದಿಂದ ಖಾಸಗಿ ವೈದ್ಯಕೀಯ ಸೇವೆಗೆ ಮಾರಾಣಾಂತಿಕ ಶಾಸನವಾಗಿದ್ದು, ಕಾನೂನಿನ ಪ್ರಕಾರ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶದ ರೋಗಿಗಳಿಗೆ ಸೇವೆ ಒದಗಿಸಲು ಅಸಾಧ್ಯವಾಗುತ್ತದೆ. ಆದ್ದರಿಂದ ಈ ಕಾನೂನನ್ನು ಜಾರಿಗೊಳಿಸದೆ ತಕ್ಷಣವೇ ಹಿಂದಕ್ಕೆ ಪಡೆದುಕೊಳ್ಳಬೇಕೆಂದು ಸಂಘದ ಸದಸ್ಯರು ಆಗ್ರಹಿಸಿದರು. 

ಇದಕ್ಕೂ ಮುನ್ನ ಖಾಸಗಿ ಆಸ್ಪತ್ರೆ ಸಂಘದ ಪದಾ  ಧಿಕಾರಿಗಳು ಅರ್ಧ ದಿನದ ಮಟ್ಟಿಗೆ ಆಸ್ಪತ್ರೆಗಳನ್ನು ಬಂದ್‌ ಮಾಡಿ ಪಟ್ಟಣದ ಅಖಂಡೇಶ್ವರ ವೃತ್ತದಿಂದ ಮಿನಿ ವಿಧಾನಸೌಧ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ತಹಶೀಲ್ದಾರ ಯಲ್ಲಪ್ಪ ಸುಬೇದಾರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು. 

ಪ್ರತಿಭಟನೆಯಲ್ಲಿ ಖಾಸಗಿ ವೈದ್ಯರ ಸಂಘದ ಡಾ| ಅಮರೇಶ ಕೋಳಕೂರ, ಡಾ| ನಾರಾಯಣರಾವ್‌ ಪಾಗಾ, ಡಾ| ಪಿ.ಎಂ.ಮಠ, ಡಾ| ಶರಣಗೌಡ ಪಾಟೀಲ, ಡಾ| ಸುಧೀರ ವೇರೆಕರ್‌, ಡಾ| ಪ್ರಶಾಂತ ಪಾಟೀಲ, ಡಾ| ಎಂ.ಡಿ.ಒಡೆಯರ್‌, ಡಾ| ಅಜಿತ್‌ಸಿಂಗ್‌ ಠಾಕೂರ,

-ಡಾ| ರಾಜಶೇಖರ, ಡಾ| ಅಶೋಕ ಗುತ್ತೇದಾರ, ಡಾ| ಜಿ.ಆರ್‌.ಕುಲಕರ್ಣಿ, ಡಾ| ನಬಿ ಪಟೇಲ, ಡಾ| ಎಂ.ಎಸ್‌.ಪಾಟೀಲ, ಡಾ| ಅಲಿಯಾ , ಡಾ| ನಾಗರತ್ನ ಏರಿ, ಡಾ| ನಾಗರಾಜ ಹಿರೇಮಠ, ಡಾ| ಮಹಾಂತೇಶ ಹಿರೇಮಠ, ಡಾ| ಇಂತೇಕಾರ ಪಟೇಲ, ಡಾ| ಫಜಲ್‌ ರಹೀಮ್‌ ಭಾಗವಹಿಸಿದ್ದರು.  

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.