ಖಾಸಗಿ ಆಸ್ಪತ್ರೆ ಮೇಲೆ ಸವಾರಿ: ಆಕ್ರೋಶ
Team Udayavani, Jun 17, 2017, 3:34 PM IST
ಕಲಬುರಗಿ: ಖಾಸಗಿ ವೈದ್ಯಕೀಯ ಸಂಸ್ಥೆಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ವಿರೋಧಿಸಿ ರಾಜ್ಯವ್ಯಾಪಿ ಖಾಸಗಿ ಆಸ್ಪತ್ರೆಗಳ ವೈದ್ಯರ ಸಂಘದ ಕರೆಯ ಮೇಲೆ ಜಿಲ್ಲಾದ್ಯಂತ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಿ ವೈದ್ಯರು ಮುಷ್ಕರಕ್ಕೆ ಬೆಂಬಲಿಸಿ ಪ್ರತಿಭಟನೆ ನಡೆಸಿದರು.
ಖಾಸಗಿ ಆಸ್ಪತ್ರೆಗಳ ಬಂದ್ನಿಂದಾಗಿ ಸಾರ್ವಜನಿಕರು ಪರದಾಡುವಂತಾಯಿತು. ಬಹುತೇಕ ಎಲ್ಲಾ ಖಾಸಗಿ ಆಸ್ಪತ್ರೆಗಳು ಮುಚ್ಚಿದ್ದವು. ಹೀಗಾಗಿ ರೋಗಿಗಳು ಪರದಾಡುವಂತಾಯಿತು. ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ| ಕಿರಣ ದೇಶಮುಖ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಈಗಾಗಲೇ ಹಲವಾರು ಜಿಲ್ಲೆಯ ವೈದ್ಯರು ಬೆಂಗಳೂರಲ್ಲಿ ನಡೆಯುವ ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ರೋಗಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಮುಷ್ಕರ ನಡೆಸಿದ್ದೆವೆ ಎಂದು ಡಾ| ಕಿರಣ ದೇಶಮುಖ ಸುದ್ದಿಗಾರರಿಗೆ ತಿಳಿಸಿದರು. ಪ್ರತಿಭಟನೆಯಲ್ಲಿ ಡಾ| ಭರತ ಕೋಣಿನ್ ಸೇರಿದಂತೆ ಅನೇಕ ಖಾಸಗಿ ಆಸ್ಪತ್ರೆಗಳ ವೈದ್ಯರು ಭಾಗವಹಿಸಿದ್ದರು.
ಜೇವರ್ಗಿ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ 2017 ವಿರೋಧಿ ಸಿ ಶುಕ್ರವಾರ ಪಟ್ಟಣದಲ್ಲಿ ಖಾಸಗಿ ವೈದ್ಯರ ಸಂಘ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯದ ಖಾಸಗಿ ಆಸ್ಪತ್ರೆಗಳ ಮೇಲೆ ಸವಾರಿ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡನೀಯ.
ವಿಧೇಯಕದಿಂದ ಖಾಸಗಿ ವೈದ್ಯಕೀಯ ಸೇವೆಗೆ ಮಾರಾಣಾಂತಿಕ ಶಾಸನವಾಗಿದ್ದು, ಕಾನೂನಿನ ಪ್ರಕಾರ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶದ ರೋಗಿಗಳಿಗೆ ಸೇವೆ ಒದಗಿಸಲು ಅಸಾಧ್ಯವಾಗುತ್ತದೆ. ಆದ್ದರಿಂದ ಈ ಕಾನೂನನ್ನು ಜಾರಿಗೊಳಿಸದೆ ತಕ್ಷಣವೇ ಹಿಂದಕ್ಕೆ ಪಡೆದುಕೊಳ್ಳಬೇಕೆಂದು ಸಂಘದ ಸದಸ್ಯರು ಆಗ್ರಹಿಸಿದರು.
ಇದಕ್ಕೂ ಮುನ್ನ ಖಾಸಗಿ ಆಸ್ಪತ್ರೆ ಸಂಘದ ಪದಾ ಧಿಕಾರಿಗಳು ಅರ್ಧ ದಿನದ ಮಟ್ಟಿಗೆ ಆಸ್ಪತ್ರೆಗಳನ್ನು ಬಂದ್ ಮಾಡಿ ಪಟ್ಟಣದ ಅಖಂಡೇಶ್ವರ ವೃತ್ತದಿಂದ ಮಿನಿ ವಿಧಾನಸೌಧ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ತಹಶೀಲ್ದಾರ ಯಲ್ಲಪ್ಪ ಸುಬೇದಾರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಖಾಸಗಿ ವೈದ್ಯರ ಸಂಘದ ಡಾ| ಅಮರೇಶ ಕೋಳಕೂರ, ಡಾ| ನಾರಾಯಣರಾವ್ ಪಾಗಾ, ಡಾ| ಪಿ.ಎಂ.ಮಠ, ಡಾ| ಶರಣಗೌಡ ಪಾಟೀಲ, ಡಾ| ಸುಧೀರ ವೇರೆಕರ್, ಡಾ| ಪ್ರಶಾಂತ ಪಾಟೀಲ, ಡಾ| ಎಂ.ಡಿ.ಒಡೆಯರ್, ಡಾ| ಅಜಿತ್ಸಿಂಗ್ ಠಾಕೂರ,
-ಡಾ| ರಾಜಶೇಖರ, ಡಾ| ಅಶೋಕ ಗುತ್ತೇದಾರ, ಡಾ| ಜಿ.ಆರ್.ಕುಲಕರ್ಣಿ, ಡಾ| ನಬಿ ಪಟೇಲ, ಡಾ| ಎಂ.ಎಸ್.ಪಾಟೀಲ, ಡಾ| ಅಲಿಯಾ , ಡಾ| ನಾಗರತ್ನ ಏರಿ, ಡಾ| ನಾಗರಾಜ ಹಿರೇಮಠ, ಡಾ| ಮಹಾಂತೇಶ ಹಿರೇಮಠ, ಡಾ| ಇಂತೇಕಾರ ಪಟೇಲ, ಡಾ| ಫಜಲ್ ರಹೀಮ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!