ನಟ ಮಂಡ್ಯ ರಮೇಶ್ಗೆ ಜಂಗಮಶೆಟ್ಟಿ ರಂಗ ಪ್ರಶಸ್ತಿ
Team Udayavani, Jul 4, 2017, 2:53 PM IST
ಕಲಬುರಗಿ: ನಗರದ ರಂಗ ಸಂಗಮ ಕಲಾ ವೇದಿಕೆ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ನಾಲ್ಕನೇ ದಿ| ಎಸ್.ಬಿ.
ಜಂಗಮಶೆಟ್ಟಿ ರಂಗಪ್ರಶಸ್ತಿಗೆ ಹಿರಿಯ ನಟ, ಕಲಾವಿದ ಮಂಡ್ಯ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು
ವೇದಿಕೆ ಕಾರ್ಯದರ್ಶಿ ಡಾ| ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ.
ಪ್ರಶಸ್ತಿಗೆ ಬಂದಿರುವ 66 ಅರ್ಜಿಗಳನ್ನು ಪರಿಶೀಲಿಸಿ, ಪ್ರಸಕ್ತ ಸಾಲಿನ ಪ್ರಶಸ್ತಿಗೆ ಮಂಡ್ಯ ರಮೇಶ ಅವರನ್ನು ಪರಿಗಣಿಸಿ ಆಯ್ಕೆ ಮಾಡಲಾಯಿತು. ಗುಬ್ಬಿ ವೀರಣ್ಣ ರಂಗ ಪುರಸ್ಕೃತ ಎಲ್.ಬಿ.ಕೆ. ಆಲ್ದಾಳ ಅವರ ಅಧ್ಯಕ್ಷತೆಯಲ್ಲಿ ನಡೆದ
ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ರಂಗತಜ್ಞ ಗವೀಶ ಹಿರೇಮಠ, ರಂಗಾಯಣ ಕಲಬುರಗಿ ಅಧ್ಯಕ್ಷ ಮಹೇಶ ಪಾಟೀಲ, ರಂಗಕರ್ಮಿ ಹಾಗೂ ಕಸಾಪ ನಿಕಟಪೂರ್ವ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ, ರಂಗಕರ್ಮಿ ಎಚ್.ಎಸ್. ಬಸವಪ್ರಭು ಹಾಗೂ ರಂಗ ಸಂಗಮ ಕಲಾವೇದಿಕೆ ಕಾರ್ಯದರ್ಶಿ ಡಾ| ಸುಜಾತಾ ಜಂಗಮಶೆಟ್ಟಿ ಅವರನ್ನೊಳಗೊಂಡ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಸಿತು. ಜು. 18ರಂದು ಕಲಬುರಗಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು
ಡಾ| ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ