ವಾಡಿ ರೈಲು ನಿಲ್ದಾಣ ದುಸ್ಥಿತಿಗೆ ಡಿಆರ್‌ಎಂ ಆಕ್ರೋಶ


Team Udayavani, Jul 6, 2017, 3:19 PM IST

GUB-3.jpg

ವಾಡಿ: ಪಟ್ಟಣದ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ರೈಲ್ವೆ ಇಲಾಖೆಯ ಸೊಲ್ಲಾಪುರ ವಿಭಾಗದ ವ್ಯವಸ್ಥಾಪಕ (ಡಿಆರ್‌ಎಂ) ಮುನೀಂದ್ರಸಿಂಗ್‌ ಉಪ್ಪಲ್‌, ಅಶುಚಿತ್ವ ಕಾರಣಕ್ಕೆ ಗಬ್ಬೆದ್ದು ನಾರುತ್ತಿದ್ದ ನಿಲ್ದಾಣದ ಪರಿಸರವನ್ನು ಕಂಡು ಸ್ಥಳೀಯ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ಗಳ ಮೇಲೆ ಅಧಿಕಾರಿಗಳೊಂದಿಗೆ ಪಾದಯಾತ್ರೆ ನಡೆಸಿದ ಡಿಆರ್‌ಎಂ ಸಿಂಗ್‌, ನಿಲ್ದಾಣದ ನಿರ್ವಹಣೆ ವೈಖರಿ ಅರಿತುಕೊಳ್ಳುವ ಪ್ರಯತ್ನ ಮಾಡಿದರು. ಎಲ್ಲೆಡೆ ಹರಡಿಕೊಂಡು ಬಿದ್ದಿದ್ದ ಘನತ್ಯಾಜ್ಯದ ರಾಶಿ ಮತ್ತು ಹಳಿ ಪಕ್ಕದಲ್ಲಿ ಸಂಗ್ರವಾಗಿ ನಿಂತಿದ್ದ ಮಳೆ ನೀರನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು.
ಅಸಮರ್ಪಕ ಸ್ವತ್ಛತಾ ಕಾರ್ಯ ಕಂಡು ಪಟ್ಟಿಮಾಡಿಕೊಂಡರು. ರೈಲು ನಿಲ್ದಾಣ ಪ್ರವೇಶ ದ್ವಾರದ ಆವರಣವನ್ನು ಪರಿಶೀಲಿಸಲು ಮುಂದಾದ ಅಧಿಕಾರಿ ಮುನೀಂದ್ರ ಸಿಂಗ್‌, ಟಿಕೆಟ್‌ ಕಾರ್ಯಾಲಯದ ಹೊರ ಗೋಡೆಯೊಂದು
ಸಾರ್ವಜನಿಕ ಮೂತ್ರಾಲಯವಾಗಿದ್ದ ದೃಶ್ಯ ಕಂಡು ದುರ್ಗಂಧ ಸಹಿಸಿಕೊಳ್ಳಲಾಗದೆ ಮೂಗು ಮುಚ್ಚಿಕೊಂಡರು.

ರೈಲ್ವೆ ನೌಕರರ ವಾಸಕ್ಕಾಗಿ ಮೀಸಲಿಟ್ಟ ಹಳೆಯ ಕಟ್ಟಡಗಳು ಸಾರ್ವಜನಿಕರು  ಬಹಿರ್ದೆಸೆಗೆ ಬಳಕೆ ಮಾಡಿದ್ದನ್ನು
ಗಮನಿಸಿದರು. ಇಡೀ ರೈಲು ನಿಲ್ದಾಣದ ಪರಿಸರ ದುರ್ಗಂಧದಿಂದ ಕೂಡಿದ್ದಕ್ಕೆ ಸ್ಥಳದಲ್ಲಿಯೇ ಅ ಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಟೆಕೆಟ್‌ ಕಾರ್ಯಾಲಯದ ಸುತ್ತಲ ಪರಿಸರ ಶುಚಿಯಾಗಿದ್ದು, ಹಸಿರಿನಿಂದ
ಕಂಗೊಳಿಸಬೇಕು. ಪಾಳುಬಿದ್ದ ಎಲ್ಲ ರೈಲ್ವೆ ಕಟ್ಟಡಗಳನ್ನು ತೆರವುಗೊಳಿಸಬೇಕು. ಸಾರ್ವಜನಿಕ ಶೌಚಾಲಯದ ಹಿಂಬದಿ ಜಾಗ ಬಳೆಸಿಕೊಂಡು ಕ್ರೂಸರ್‌ ಮತ್ತು ಆಟೋ ವಾಹನಗಳ ಪಾರ್ಕಿಂಗ್‌ ನಿರ್ಮಿಸಬೇಕು. ಬೈಕ್‌ ಗಳಿಗೂ ನಿಗದಿತ ಸ್ಥಳ ಗುರುತಿಸಿ ನಿಲ್ದಾಣದ ಹೊರಾಂಗಣ ಸೌಂದರ್ಯ ಕಾಪಾಡಬೇಕು ಎಂದು ಖಡಕ್‌ ಆದೇಶ ನೀಡಿದರು. ನಿಲ್ದಾಣದಲ್ಲಿ ರೈಲಿಗಾಗಿ ಕಾಯುವ ಪ್ರಯಾಣಿಕರ ಅನುಕೂಲಕ್ಕಾಗಿ ಕುಡಿಯುವ ನೀರು, ನೆರಳು, ಶೌಚಾಲಯದ ಸೌಲಭ್ಯ
ನಿರಂತರವಾಗಿರಬೇಕು. ನಿಲ್ದಾಣದ ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ರೈಲು ನಿಲ್ದಾಣ ವ್ಯವಸ್ಥಾಪಕ ಎ.ಎಸ್‌. ಪ್ರಸಾದರಾವ್‌, ಅಧಿಕಾರಿಗಳಾದ ಜೀವನ್‌ ಕದಂ, ಆರ್‌. ಕೆ. ಶರ್ಮಾ, ಪ್ರಭಾಕರ, ವಿಜಯಕುಮಾರ ರೈ, ಐಪಿಎಫ್‌ ಸಂಜಯಕುಮಾರ ಸಿಂಗ್‌, ಸಾಗರ ಗಾಯಕವಾಡ ಹಾಗೂ ಮತ್ತಿತರರು
ಇದ್ದರು.  

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.