ಚಿತ್ರನಟ ಮಂಡ್ಯ ರಮೇಶ್‌ಗೆ ರಂಗಪ್ರಶಸ್ತಿ ಪ್ರದಾನ


Team Udayavani, Jul 19, 2017, 12:39 PM IST

19-GUB-5.gif

ಕಲಬುರಗಿ: ಕಲಬುರಗಿ ಎನ್ನುವ ಬಿಸಿಲು ನಾಡು ರಾಜ್ಯದ ದೊಡ್ಡ ಭಾವೈಕ್ಯದ ಮಹಾಮನೆ. ಇಲ್ಲಿ ಆತ್ಮಾನುಭವದ
ದರ್ಶನ ಸಾಧ್ಯವಾಗುತ್ತದೆ. ಬಸವಣ್ಣನಿಂದ ಹಿಡಿದು ಸಂತರು, ಸೂಫಿಗಳು ಹಾಗೂ ಶರಣರು ಓಡಾಡಿದ ನೆಲ ಸರ್ವಧರ್ಮದ
ನೆಲೆಯಾದ ಮಹಾಮನೆಯ ಅನುಭಾವ ನನಗೆ ನೀಡಿದೆ ಎಂದು ಬಹುಮುಖ ಹಾಸ್ಯ ಕಲಾವಿದ ಹಾಗೂ ರಂಗಭೂಮಿ ಪ್ರತಿಭೆ ಮಂಡ್ಯ ರಮೇಶ್‌ ಹೇಳಿದರು.

ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಮಂಗಳವಾರ ರಂಗಸಂಗಮ ಕಲಾವೇದಿಕೆ ಎಸ್‌.ಬಿ.ಜಂಗಮಶೆಟ್ಟಿ ಸ್ಮರಣಾರ್ಥ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಂಗಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಮಹಾಮನೆಯಲ್ಲಿ ಬಸವಣ್ಣ, ಮಹಾತ್ಮಗಾಂಧಿ, ಅಂಬೇಡ್ಕರ್‌, ಬುದ್ಧನ ಪಾತ್ರಗಳು ನನಗೆ ಅಚ್ಚುಮೆಚ್ಚಾಗಿವೆ. ಇದರ ನೆರಳು ರಂಗಭೂಮಿಯ ಮೇಲೂ ಇದೆ. ಅದನ್ನು ಇನ್ನಷ್ಟು ಎತ್ತರಕ್ಕೆ ಕೊಂಡೋಯ್ಯಲು ಈ ಭಾಗದ ಕಲಾವಿದರು, ರಂಗಕರ್ಮಿಗಳು ಪ್ರಯತ್ನ ಮಾಡುತ್ತಲೇ ಇದ್ದಾರೆ ಎಂದು ಹೇಳಿದರು.

ಚಲನಚಿತ್ರ ಕಲಾ ನಿರ್ದೇಶಕ ಶಶಿಧರ ಅಡಪ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಬಡವರ ಪರ, ಮಹಿಳೆಯರ ಪರ ದುಡಿಯುವ ಮನಸ್ಸುಗಳಿಗೆ ನಮಸ್ಕರಿಸುವೆ. ಸ್ಪಷ್ಟವಾದ ನಿಲುವು ಗಳನ್ನು ಹೊಂದಿರುವ ಸುಜಾತಾ ಜಂಗಮಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಲೇಬೇಕು ಎಂದರು. ಕೇಂದ್ರಿಯ ವಿಶ್ವವಿದ್ಯಾಲಯ ಕುಲಪತಿ ಎಚ್‌.ಎಂ.ಮಹೇಶ್ವರಯ್ಯ ಮಾತನಾಡಿ, ತಂದೆ, ತಾಯಿ ಎಂದರೆ ವೃದ್ಧಾಶ್ರಮಗಳಿಗೆ ಕಳಿಸುವಂತಹ ಇಂದಿನ ತಾಂತ್ರಿಕ ದಿನಗಳಲ್ಲೂ ತಂದೆಯನ್ನು ನೆನೆದು, ಆತ ಕೈ ಹಿಡಿದು ರಂಗಭೂಮಿ ನಡೆಸಿದ ಎನ್ನುವ ಕಾರಣಕ್ಕೆ ಒಂದು ಪ್ರಶಸ್ತಿ ಸ್ಥಾಪಿಸಿ ಅದನ್ನು ರಂಗದಲ್ಲಿ ಕೆಲಸ ಮಾಡುವವರಿಗೆ ಕೊಟ್ಟು ಖುಷಿ ಪಡುವುದು ಇದೆಯಲ್ಲ ಅದು
ನಿಜಕ್ಕೂ ಶ್ಲಾಘಿಸುವ ಕೆಲಸ ಎಂದು ಹೇಳಿದರು. 

ಕಲಬುರಗಿ ರಂಗಾಯಣ ನಿರ್ದೇಶಕ ಮಹೇಶ ಪಾಟೀಲ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕಲೆ ಕೇವಲ ಸಂತೋಷ ಮತ್ತು ಆಸಕ್ತಿಗಾಗಿ ಅಲ್ಲ. ಅದು ಮಾನವೀಯತೆಯ ಪ್ರತೀಕವೂ ಆಗಿದೆ ಎಂದರು. ಪ್ರಶಸ್ತಿ ಪುರಸ್ಕೃತ ಮಂಡ್ಯ ರಮೇಶ್‌ ಕುರಿತಾಗಿ ರಂಗವಿಮರ್ಶಕ ಶಶಿಕಾಂತ ಯಡಹಳ್ಳಿ ವಿಶ್ಲೇಷಿಸಿದರು. ಹಿರಿಯ ಸಾಹಿತಿ ಚನ್ನಣ್ಣ ವಾಲಿಕಾರ ಅಧ್ಯಕ್ಷತೆ ವಹಿಸಿದ್ದರು. ಶಾಂತಾ ಕುಲಕರ್ಣಿ ರಂಗ ಗೀತೆಗಳು ಹಾಡಿದರು. ರಂಗಸಂಗಮ ಕಲಾವೇದಿಕೆ ಕಾರ್ಯದರ್ಶಿ ಡಾ| ಸುಜಾತಾ ಜಂಗಮಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ತಮ್ಮ ಅಪ್ಪ ಹಾಗೂ ಅವರ ಹೆಸರಿನಲ್ಲಿ ಶುರು ಮಾಡಿರುವ ಪ್ರಶಸ್ತಿಯ ಹಿಂದಿನ ಸಾರ್ಥಕ ನಡೆ ವಿವರಿಸಿದರು.

ಜಂಗಮಶೆಟ್ಟಿ ರಂಗಪ್ರಶಸ್ತಿಯ ಆಯ್ಕೆ ಸಮಿತಿ ಸದಸ್ಯರಾದ ಹಿರಿಯ ರಂಗಕರ್ಮಿ ಎಲ್‌.ಬಿ.ಕೆ. ಆಲ್ದಾಳ, ಗವೀಶ ಹಿರೇಮಠ, ಎಚ್‌.ಎಸ್‌. ಬಸವಪ್ರಭು, ಶಾಂತಾ ಕುಲಕರ್ಣಿ, ಮಹೇಶ ಪಾಟೀಲ, ಮಹಿಪಾಲರೆಡ್ಡಿ ಮುನ್ನೂರ್‌ ಅವರನ್ನು ಸನ್ಮಾನಿಸಲಾಯಿತು. ಸಂಜೆ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಶಿಕಾಂತ ಯಡಹಳ್ಳಿ ರಚನೆಯ, ವೈ.ಡಿ. ಬದಾಮಿ ನಿರ್ದೇ ಶನದ ಮಂಜುಳಾ ಬದಾಮಿ ಅಭಿನಯದ ಸೀತಾಂತರಾಳ ಏಕವ್ಯಕ್ತಿ ನಾಟಕ ಪ್ರದರ್ಶನ ಜರುಗಿತು.

ಪತ್ರಕರ್ತ ಮಹಿಪಾಲರಡ್ಡಿ ಮುನ್ನೂರ ನಿರೂಪಿಸಿದರು. ಸುಭದ್ರಾದೇವಿ ಜಂಗಮಶೆಟ್ಟಿ, ರಂಗಸಂಗಮ ಕಲಾವೇದಿಕೆ ಅಧ್ಯಕ್ಷೆ ನಂದಾ ಕೊಲ್ಲೂರ, ಎಚ್‌.ಎಸ್‌.ಬಸವಪ್ರಭು, ಎಲ್‌.ಬಿ.ಕೆ.ಆಲ್ದಾಳ, ಗವೀಶ ಹಿರೇಮಠ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.