ಹಾಲನ್ನು ಹುತ್ತಕ್ಕೆ ಸುರಿಯದೆ ಮಕ್ಕಳಿಗೆ ನೀಡಿ
Team Udayavani, Jul 27, 2017, 3:24 PM IST
ಕಲಬುರಗಿ: ಹಾಲು ಸಂಪೂರ್ಣ ಆಹಾರ. ಅನೇಕ ಪೌಷ್ಟಿಕ ಗುಣ ಹೊಂದಿದೆ. ಮೂಢನಂಬಿಕೆ, ಅವೈಜ್ಞಾನಿಕತೆ ಪರಿಣಾಮವಾಗಿ ಹಾಲನ್ನು ನಾಗರಪಂಚಮಿ ದಿನದಂದು ಹುತ್ತಕ್ಕೆ, ಇಲ್ಲವೇ ಕಲ್ಲಿನ ನಾಗರಕ್ಕೆ ಸುರಿದು ನೆಲದ ಪಾಲು ಮಾಡುತ್ತಿರುವುದನ್ನು ನಿಲ್ಲಿಸಿ ಎಂದು ಸಾರಂಗಮಠದ ಜಗದ್ಗುರು ಪೂಜ್ಯ ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ನುಡಿದರು.
ಬಸವ ಪಂಚಮಿ ಅಂಗವಾಗಿ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ನಗರದ ಅಂಧಮಕ್ಕಳ ಸರ್ಕಾರಿ ಶಾಲಾ ಆವರಣದಲ್ಲಿ ಮಕ್ಕಳಿಗೆ ಹಾಲು, ಹಣ್ಣು ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ವಚನಗಳಲ್ಲಿ ಅಡಗಿರುವ ವೈಚಾರಿಕತೆಯನ್ನು ನಿಜಜೀವನದಲ್ಲಿ ಅಳವಡಿಸಿಕೊಂಡು ಮನೆ ಹಾಗೂ ಮನಗಳನ್ನು ಶುದ್ದಗೊಳಿಸಬೇಕೆಂದು ಹೇಳಿದರು.
ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಚವದಾಪೂರ ಹಿರೇಮಠದ ಪೂಜ್ಯ ರಾಜಶೇಖರ ಶಿವಾಚಾರ್ಯ ಮಹಾಸ್ವಾಮೀಜಿ, ಹಾಗರಗುಂಡಗಿ ಶ್ರೀಮಠದ ಪೂಜ್ಯ ಶಿವಾನಂದ ಸ್ವಾಮೀಜಿ, ಫಿರೋಜಾಬಾದ ಶ್ರೀಗಳು, ಮೇಯರ್ ಶರಣಕುಮಾರ ಮೋದಿ, ಜಿ.ಪಂ. ಉಪಾಧ್ಯಕ್ಷೆ ಶೋಭಾ ಸಿರಸಗಿ, ಪಾಲಿಕೆ ಪ್ರತಿಪಕ್ಷ ನಾಯಕ ಆರ್.ಎಸ್.ಪಾಟೀಲ, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ಚವ್ಹಾಣ, ಆನಂದ ಪಾಟೀಲ ಜವಳಿ, ಕಲ್ಯಾಣಪ್ಪ ಪಾಟೀಲ ಮಳಖೇಡ, ಮಲ್ಲಣ್ಣ ನಾಗರಾಳ, ಶರಣಪ್ಪ ನಿರಗುಡಿ, ನಾಟಕ ನಿರ್ದೇಶಕ ಬಿ.ಸಂದೀಪ,
ಪರಮೇಶ್ವರ ಶೆಟಕಾರ, ಡಾ| ಬಾಬುರಾವ್ ಶೇರಿಕಾರ, ಶ್ರೀಕಾಂತ ಪಾಟೀಲ ತಿಳಗೂಳ, ಡಾ| ನಾಗರತ್ನಾ ದೇಶಮಾನೆ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ