ಹೊಲ ಮಾರಿಯಾದ್ರೂ ಹಣ ಕೊಡ್ತೀದ್ವಿ, ಚಿತ್ರಹಿಂಸೆ ಕೊಟ್ರಾ


Team Udayavani, Aug 2, 2017, 2:38 PM IST

02-GUB-3.jpg

ಕಲಬುರಗಿ: ಮೈ ಮೇಲೆ ಬಾಸುಂಡೆ ಬರುವ ಹಾಗೆ ಹೊಡೆದಿದ್ದಲ್ಲದೇ ಕಾಲಿನ ಉಗುರು ಕಿತ್ತಿದ್ದಾರೆ. ಸಾಕಷ್ಟು ಚಿತ್ರಹಿಂಸೆ ನೀಡಿದ್ದಾರೆ. ಹೊಲ ಮಾರಿಯಾದರೂ  ಅಪಹರಣಕಾರರಿಗೆ ಹಣ ಕೊಡಲು ಮುಂದಾಗಿದ್ದೆವು. ಈ ಮಾತು ಹೇಳಿದ್ದು, ಅಪಹರಣಕ್ಕೆ ಒಳಗಾಗಿ ಪೊಲೀಸರ
ಕಾರ್ಯಾಚರಣೆ ಮೂಲಕ ಸೋಮವಾರ ಬಿಡುಗಡೆಯಾಗಿ ಬಂದು ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ಚಿತ್ತಾಪುರ ತಾಲೂಕಿನ ಸಾವತಖೇಡ ಗ್ರಾಮದ ಶ್ರೀನಾಥ ಮುಚ್ಚಖೇಡ ಹಾಗೂ ಆತನ ಪತ್ನಿ ಮಂಗಳವಾರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದಿದ್ದ ವೈದ್ಯಕೀಯ ಶಿಕ್ಷಣ ಹಾಗೂ ಉಸ್ತುವಾರಿ ಸಚಿವರ ಎದುರು. 

ಬಸನಾಳ ಗ್ರಾಮದಲ್ಲಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಫೈರಿಂಗ್‌ ನಡೆಸಿ ಅಪಹರಣಕಾರರಿಂದ ತಮ್ಮನ್ನು ಬಿಡುಗಡೆ ಮಾಡಿಕೊಂಡು ಬಾರದಿದ್ದಲ್ಲಿ ತಮ್ಮ ಜೀವ ಉಳಿಯುತ್ತಿರಲಿಲ್ಲ ಎಂದು ದುಃಖೀಸಿದರು. ಚಿತ್ತಾಪುರ ತಾಲೂಕಿನ ಸಾವತಖೇಡ ಗ್ರಾಮದ 28 ವರ್ಷದ ಶ್ರೀನಾಥ ಮುಚ್ಚಖೇಡ ಎನ್ನುವನನ್ನು ಜು.28 ರಂದು ಬೆಳಗ್ಗೆ ಬಹಿರ್ದೆಸೆಗೆ ಹೋದಾಗ ಬೈಕ್‌ ಹಾಗೂ ಕಾರಿನಲ್ಲಿ ಬಂದ ಎಂಟತ್ತು ಜನ ಅಪಹರಣಕಾರರು ಅಪಹರಿಸಿಕೊಂಡು ಹೋಗಿದ್ದರು. ಶ್ರೀನಾಥನ ಮೊಬೈಲ್‌ನಿಂದ ಕರೆ ಮಾಡಿದ ಅಪಹರಣಕಾರರು 15 ಲಕ್ಷ ರೂ.ಗಳ ಡಿಮ್ಯಾಂಡ್‌ ಇಟ್ಟಿದ್ದರು.
ಈ ವಿಷಯವನ್ನು ಶ್ರೀನಾಥನ ಪತ್ನಿ ಮಾಡಬೂಳ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಅಪಹೃತನನ್ನು ರಕ್ಷಿಸಬೇಕೆಂಬ ಒಂದೇ ಉದ್ದೇಶವಿಟ್ಟುಕೊಂಡು ಮೊಬೈಲ್‌ನ್ನು ಸರ್ವೇಲನ್ಸ್‌ಗೆ ಹಾಕಿ ಮೊಬೈಲ್‌ ಸಿಗ್ನಲ್‌ನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದರು.

ಅಪಹರಣಕಾರರು ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಮದ ದಾಳಿ ನಡೆಸಿದ್ದರಿಂದ ಕಾಳಗಿ ಸಿಪಿಐ ಕಟ್ಟಿಮನಿ, ಮಾಡಬೂಳ ಪಿಎಸ್‌ಐ ಹುಸೇನ ಬಾಷಾ ಹಾಗೂ ಎಸ್‌ಪಿ ಅಂಗರಕ್ಷಕ ಪ್ರಕಾಶ ಪಾಟೀಲ ಎನ್ನವವರ ಮೇಲೆ ಹಲ್ಲೆ ನಡೆಸಿದ್ದರು. ಪೊಲೀಸರು ಅಪಹರಣಕಾರರ ಮೇಲೆ ಎರಡು ಸುತ್ತು ಗುಂಡು ಹಾರಿಸಿದ್ದರಿಂದ ಅಪಹರಣಕಾರರಾದ ದೀಪಕ ಹಾಗೂ ಕಿರಣಕುಮಾರ ಎನ್ನುವವರ ಕಾಲಿಗೆ ಗುಂಡೇಟು ತಗುಲಿವೆ.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.