ಆರ್‌ಎಸ್‌ಎಸ್‌-ಬಿಜೆಪಿ ದರ್ಪಕ್ಕೆ ದೇಶ ಬಲಿ: ಡಾ| ಸಾಕೆ


Team Udayavani, Aug 5, 2017, 1:11 PM IST

05-GUB-4.jpg

ಸೇಡಂ: ದೇಶದಲ್ಲಿ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ದರ್ಪದ ರಾಜಕೀಯದಿಂದ ಇಡೀ ದೇಶ ಬಲಿಯಾಗುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಜಿಲ್ಲಾ ವಿಭಾಗೀಯ ಉಸ್ತುವಾರಿ ಡಾ| ಸಾಕೆ ಶೈಲಜಾನಾಥ ಆರೋಪಿಸಿದರು.

ಪಟ್ಟಣದ ಕೆ.ಎನ್‌.ಝಡ್‌ ಫಂಕ್ಷನ್‌ ಹಾಲ್‌ ನಲ್ಲಿ ಕಾಂಗ್ರೆಸ್‌ ವತಿಯಿಂದ ಆಯೋಜಿಸಿದ್ದ ವಿಧಾನಸಭಾ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಕೇವಲ ಧರ್ಮದ ಆಧಾರದ ಮೇಲೆ ಜನರನ್ನು ಪರಿವರ್ತಿಸುವ ಬಿಜೆಪಿ ಮತ್ತು ಆರ್‌ ಎಸ್‌ಎಸ್‌ ಹುನ್ನಾರ ಎಂದಿಗೂ ಫಲಿಸದು. ಸಮಾಜದಲ್ಲಿ ಕೋಮುವಾದಿತನ ಸೃಷ್ಟಿಸಿ ದೇಶವನ್ನು ಇಬ್ಟಾಗ ಮಾಡುವ ಮಟ್ಟಿಗೆ ಈ ಸಂಘಟನೆಗಳು ಕೆಲಸ ಮಾಡುತ್ತಿವೆ. ಜಾತಿ- ಜಾತಿಗಳ ನಡುವೆ ಜಗಳ ಸೃಷ್ಟಿಸಿ  ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ ಎಂದು ಗುಡುಗಿದರು.

ನರೇಂದ್ರ ಮೋದಿ ಸರ್ಕಾರ ಎಷ್ಟೇ ಕಾಂಗ್ರೆಸ್‌ ಪಕ್ಷವನ್ನು ಬಗ್ಗು ಬಡಿಯಲು ಯತ್ನಿಸಿದರೂ ಪಕ್ಷ ಮತ್ತಷ್ಟು ಗಟ್ಟಿಯಾಗುತ್ತದೆ. ಕಾಂಗ್ರೆಸ್‌ ಪಕ್ಷಕ್ಕೆ ಬಿಜೆಪಿಯವರಿಂದ ದೇಶಭಕ್ತಿ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ಖಾರವಾಗಿ ನುಡಿದರು. ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ಜನಪರ ಆಡಳಿತ ನೀಡುವ ಮೂಲಕ ಜನರ ಮನಸಲ್ಲಿ ಉಳಿದಿರುವ ಕಾಂಗ್ರೆಸ್‌ ಪಕ್ಷವನ್ನು ಕೇವಲ ಹೆದರಿಸಿ, ಬೆದರಿಸಿ ದೂರ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಈ ರೀತಿಯ ಬೆಳವಣಿಗೆಗಳ ನೆರಳಲ್ಲೇ ಪಕ್ಷವನ್ನು ಮತ್ತಷ್ಟು ಸಂಘಟಿಸಿ, ಬೆಳೆಸುವ ಕೆಲಸವಾಗಬೇಕಿದೆ. ಬಿಜೆಪಿಯವರ ಡೊಂಬರಾಟದ ರಾಜಕೀಯ ಜನರಿಗೆ ತಿಳಿಸಬೇಕಾಗಿದೆ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಸಂತಕುಮಾರ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಮುಖಂಡ ತಿಪ್ಪಣಪ್ಪ ಕಮಕನೂರ, ಜಿಪಂ ಮಾಜಿ ಸದಸ್ಯ ಡಾ| ವೆಂಕಟರೆಡ್ಡಿ ಪಾಟೀಲ ಕೋಲಕುಂದಾ, ಹಿರಿಯ ಮುಖಂಡ ಸತೀಶರೆಡ್ಡಿ ರಂಜೋಳ
ಮಾತನಾಡಿದರು. ಶಂಭುರೆಡ್ಡಿ ಮದ್ನಿ, ಶ್ರೀನಿವಾಸ ದೇಶಪಾಂಡೆ, ಎಪಿಎಂಸಿ ಅಧ್ಯಕ್ಷ ಗುರುನಾಥರೆಡ್ಡಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ನರೇಂದ್ರರೆಡ್ಡಿ, ಜಿಪಂ ಸದಸ್ಯ ದಾಮೋದರೆಡ್ಡಿ ಪಾಟೀಲ, ಟಿಎಪಿಸಿಎಂ ಅಧ್ಯಕ್ಷ ವೆಂಕಟರಾಮರೆಡ್ಡಿ ಹೈಯಾಳ, ಗಣಪತರಾವ ಚಿಮ್ಮನಚೋಡಕರ್‌, ಕರೆಪ್ಪ ಪಿಲ್ಲಿ, ಜೈಭೀಮ ಊಡಗಿ, ರಾಮಯ್ಯ ಪೂಜಾರಿ, ಬಸಮ್ಮ ಪಾಟೀಲ, ರವಿ ಸಾಹು ತಂಬಾಕೆ, ವಿಶ್ವನಾಥ ಪಾಟೀಲ, ಸಿದ್ದು ಬಾನರ್‌,
ಅಬ್ದುಲ್‌ ಗಫೂರ ಹಾಜರಿದ್ದರು. ಮುಧೋಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವೆಂಕಟರಾಮರೆಡ್ಡಿ ಕಡತಾಲ ಸ್ವಾಗತಿಸಿದರು. ನಗರ ಯೋಜನಾ ಪ್ರಾ ಕಾರದ ಅಧ್ಯಕ್ಷ ನಾಗೇಶ್ವರಾವ ಮಾಲಿಪಾಟೀಲ ನಿರೂಪಿಸಿ, ವಂದಿಸಿದರು. 

ದೇಶದಲ್ಲಿ ಅರಾಜಕತೆ ಸೃಷ್ಟಿ
ರಾಜ್ಯದ ಸಚಿವರೊಬ್ಬರ ಮನೆ ಮೇಲೆ ಹುನ್ನಾರ ನಡೆಸುವ ಮೂಲಕ ದಾಳಿ ನಡೆಸಲು ಉಸ್ತುವಾರಿ ಹೊತ್ತಿರುವ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ತಾವೇ ದೊಡ್ಡ ಅಕ್ರಮದಲ್ಲಿ ತೊಡಗಿರುವುದು ಮಾಧ್ಯಮಗಳಿಗೆ ತಿಳಿಯುತ್ತಿಲ್ಲ. ಅಷ್ಟರ ಮಟ್ಟಿಗೆ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ.
ಡಾ| ಸಾಕೆ ಶೈಲಜಾನಾಥ, ಎಐಸಿಸಿ ಕಾರ್ಯದರ್ಶಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.