ರಾಯರ ಭಕ್ತರಿಗೆ ಕಷ್ಟಗಳಿಲ
Team Udayavani, Aug 9, 2017, 11:34 AM IST
ಕಲಬುರಗಿ: ಕಲಿಯುಗದ ಕಾಮಧೇನು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಭಕ್ತರಿಗೆ ಭವದ ಸಮಸ್ಯೆಗಳು ಕಾಡುವುದಿಲ್ಲ,
ಕಷ್ಟುಗಳು ಬರುವುದಿಲ್ಲ ಎಂದು ಗುಂಡಾಚಾರ್ಯ ನರಿಬೋಳ ಹೇಳಿದರು. ಮಂಗಳವಾರ ಪ್ರಶಾಂತ ನಗರದ ಹನುಮಾನ ಮಂದಿರದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾಧನೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಲಿಯುಗದಲ್ಲಿ ಕಲ್ಪವೃಕ್ಷವಾಗಿ ರಾಘವೇಂದ್ರ ಸ್ವಾಮಿಗಳು ಇದ್ದಾರೆ. ಅವರನ್ನು ಯಾರು ಭಕ್ತಿಪೂರ್ವಕವಾಗಿ ಆರಾಧಿಸುತ್ತಾರೋ ಅವರಿಗೆ ಯಾವುದೇ ಕಷ್ಟಗಳು ಬರುವುದಿಲ್ಲ. ಅವರು ಬೇಡಿದ ವರಗಳನ್ನು ನೀಡುವ ಕಾಮಧೇನು ಆಗಿದ್ದಾರೆ. ಆದ್ದರಿಂದ ಪ್ರತಿಯೊಬ್ಬರು ಪೂರ್ವಾರಾಧನೆಯಲ್ಲಿ ಪಾಲ್ಗೊಳ್ಳಬೇಕೆಂದರು. ಈ ಸಂದರ್ಭದಲ್ಲಿ ಅಷ್ಟೋತ್ತರ ಪಾರಾಯಣ, ಪವಮಾನ ಹೋಮ, ಮಹಿಳಾ ಭಜನಾ ಮಂಡಳಿಗಳಿಂದ ಪಲ್ಲಕ್ಕಿ ಸೇವೆ ವೈಭೋಗದಿಂದ ಜರುಗಿತು. ನಂತರ ಪಂಡಿತ ಶ್ರೀನಿವಾಸಚಾರ್ಯ ಪದಕಿ ಅವರಿಂದ ರಾಯರ ಜೀವನ ಚರಿತ್ರೆಯ ಪ್ರವಚನ ಜರುಗಿತು. ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ನವಲಿ ಕೃಷ್ಣಾಚಾರ್ಯ, ಅನಿಲ ಕಕ್ಕೇರಿ,ಲಕ್ಷ್ಮಣರಾವ್ ಮುಗಳನಾಗಾಂವ್, ಶ್ಯಾಮರಾವ ಕುಲಕರ್ಣಿ, ಡಿ.ವಿ. ಕುಲಕರ್ಣಿ ಹಾಗೂ ಕಾಲೋನಿ ನಾಗರಿಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ