ಮುಲ್ಲಾಮಾರಿ ಜಲಾಶಯದಿಂದ ಮುಖ್ಯ ಕಾಲುವೆಗೆ ನೀರು
Team Udayavani, Aug 11, 2017, 9:37 AM IST
ಚಿಂಚೋಳಿ: ತಾಲೂಕಿನಲ್ಲಿ ಮಳೆ ಅಭಾವದಿಂದಾಗಿ ಮುಂಗಾರು ಹಂಗಾಮಿನ ಹೆಸರು, ಉದ್ದು, ತೊಗರಿ ಬೆಳೆಗಳು ಬಾಡುತ್ತಿರುವುದರಿಂದ ಶಾಸಕ ಡಾ| ಉಮೇಶ ಜಾಧವ್ ಹಾಗೂ ರೈತರ ಬೇಡಿಕೆಯಂತೆ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಮುಖ್ಯ ಕಾಲುವೆಗೆ ನೀರು ಹರಿದು ಬಿಡಲಾಗಿದೆ ಎಂದು ಯೋಜನೆ ಎಇಇ ಕೃಷ್ಣ ಅಗ್ನಿಹೋತ್ರಿ ತಿಳಿಸಿದ್ದಾರೆ. ತಾಲೂಕಿನ ಮುಲ್ಲಾಮಾರಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ, ಕನಕಪುರ, ನಿಮಾಹೊಸಳ್ಳಿ, ಚಿಂಚೋಳಿ, ಗೌಡನಹಳ್ಳಿ, ಅಣವಾರ, ಖೋದಂಪುರ, ಹೂಡದಳ್ಳಿ, ಚಿಮ್ಮಾಇದಲಾಯಿ, ಪರದಾರ ಮೋತಕಪಳ್ಳಿ, ದೋಟಿಕೊಳ, ಸುಲೇಪೇಟ, ಬೆಡಕಪಳ್ಳಿ, ರಾಮತೀರ್ಥ, ಯಾಕಾಪುರ ಗ್ರಾಮಗಳ ರೈತರ ಹೊಲಗಳಲ್ಲಿ ಇರುವ ಬೆಳೆಗಳಿಗೆ ನೀರು ಹರಿಸಬೇಕಾಗಿದೆ.
ಕೆಳದಂಡೆ ಮುಲ್ಲಾಮಾರಿ ಜಲಾಶಯದಲ್ಲಿ ರೈತರ ಜಮೀನುಗಳಿಗೆ ನೀರು ಹರಿದು ಬಿಡಲು ಸಾಕಷ್ಟು ನೀರಿನ ಸಂಗ್ರಹಣೆ ಇದೆ. ಒಟ್ಟು 80 ಕಿಮೀ ಉದ್ದ ಎಡದಂಡೆ ಮುಖ್ಯಕಾಲುವೆಗೆ ಈಗಾಗಲೇ 40 ಕಿಮೀ ವರೆಗೆ ನೀರು ಹರಿದು ಹೋಗಿದೆ. ರೈತರ ಮುಂಗಾರಿನ
ಬೆಳೆಗಳಿಗೆ ನೀರು ಅವಶ್ಯಕತೆ ಮತ್ತು ರೈತರ ಬೇಡಿಕೆಯಂತೆ ಆ.6 ರಂದು ಮುಖ್ಯಕಾಲುವೆಗೆ ನೀರು ಹರಿದು ಬಿಡಲಾಗಿದೆ ಎಂದು ಎಇಇ ತಿಳಿಸಿದ್ದಾರೆ. ಕೆಳದಂಡೆ ಮುಲ್ಲಾಮಾರಿ ಜಲಾಶಯ ಗೇಟಿನ ಬಳಿ ಎರಡೂ ದಂಡೆಗೆ ಸಿಮೆಂಟ್ ತಡೆಗೋಡೆ ನಿರ್ಮಿಸಲಾಗುತ್ತಿದೆ. ಸರಕಾರದಿಂದ 37ಕೋಟಿ ರೂ.ಮಂಜೂರಿ ಆಗಿದೆ. ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ