ಜೀವ ರಕ್ಷಣೆಗೆ ಸುರಕ್ಷತೆ ಅವಶ್ಯ
Team Udayavani, Sep 18, 2017, 10:05 AM IST
ಕಲಬುರಗಿ: ಜೀವ ಜೀವನ ತುಂಬಾ ಅತ್ಯಮೂಲ್ಯ. ಅದರ ಸುರಕ್ಷತೆಗೆ ಎಚ್ಚರಿಕೆ ವಹಿಸಬೇಕು. ರಕ್ಷಣೆ ಭಾಗವಾಗಿ ಉತ್ತಮವಾಗಿ ಪ್ರಯಾಣಿಸಬೇಕು ಎಂದು ಈಶಾನ್ಯ ವಲಯ ಐಜಿಪಿ ಅಲೋಕಕುಮಾರ ಹೇಳಿದರು.
ರವಿವಾರ ಸಂಜೆ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಸುಗಮ, ಸುರಕ್ಷಿತ ಟ್ರಾಫಿಕ್ ಡ್ರೈವ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇತ್ತಿಚಿನ ವರ್ಷಗಳಲ್ಲಿ ರಸ್ತೆ ಅಫಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಫಘಾತಗಳಲ್ಲಿ ಬಹುತೇಕವು ನಿರ್ಲಕ್ಷ ಮತ್ತು ಹೆಚ್ಚು ವೇಗದ ಕಾರಣದಿಂದಾಗಿ ನಡೆಯುತ್ತವೆ. ಅವುಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಸುರಕ್ಷಿತ ಪ್ರಯಾಣಕ್ಕಾಗಿ ಮನವಿ ಮಾಡುತ್ತ ಜಾಗೃತಿ ಮೂಡಿಸುವ ಯತ್ನ ಮಾಡುತ್ತಿದೆ. ಅಪಘಾತದ ಸಂದರ್ಭದಲ್ಲಿ ತಲೆಗೆ ಹೆಚ್ಚು ಪೆಟ್ಟಾಗುವುದರಿಂದ ಹೆಲ್ಮೆಟ್ ಕಡ್ಡಾಯವಾಗಿ ಹಾಕಿಕೊಳ್ಳಿ ಎಂದು ಮನವಿ ಮಾಡಿದರು.
ರಸ್ತೆಗಳಲ್ಲಿ ಓಡಾಡುವವರೆಲ್ಲ ಸಹ ಪ್ರಯಾಣಿಕರ ಪ್ರಾಣದ ಕುರಿತು ಎಚ್ಚರಿಕೆ ವಹಿಸುವುದು ಉತ್ತಮ. ಆಟೋ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಇದರಿಂದ ಅವರನ್ನು ಗುರುತಿಸಲು ಸಹಾಯವಾಗುತ್ತದೆ. ಆಟೋಗಳಲ್ಲಿ ಮುಂದಿನ ಸೀಟುಗಳಲ್ಲಿ ಪ್ರಯಾಣಿಕರನ್ನು ಕೂಡಿಸಿಕೊಳ್ಳಬಾರದು. ಇದರಿಂದ ಉತ್ತವಾಗಿ ಆಟೋ ಓಡಿಸಲು ಚಾಲಕರಿಗೆ ಸಹಾಯವಾಗುತ್ತದೆ. ಬೀದಿಗಳಲ್ಲಿ ವ್ಯಾಪಾರ ಮಾಡಿಕೊಂಡಿರುವರು ಸುಗಮ ಸಂಚಾರಕ್ಕೆ ಅಡ್ಡಿ ಪಡಿಸದೆ ಸಹಕಾರ ನೀಡಬೇಕು ಎಂದರು.
ಪಾಲಿಕೆ ಆಯುಕ್ತ ಪಿ.ಸುನೀಲಕುಮಾರ ಹಾಗೂ ಎಸ್ಪಿ ಶಶಿಕುಮಾರ ಮಾತನಾಡಿದರು. ಪ್ರೊಬೆಷನರಿ ಐಪಿಎಸ್ ಅಧಿಕಾರಿ ಲೋಕೇಶ ಬಿ.ಜಿ, ಡಿವೈಎಸ್ಪಿ ಉದಯಕುಮಾರ ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೊಲೀಸರು, ಮಹಿಳಾ ಪೇದೆಗಳು ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ