ಗ್ರಾಮೀಣ ಮಕ್ಕಳು ಬಲು ಗಟ್ಟಿ: ಖರ್ಗೆ


Team Udayavani, Oct 3, 2017, 9:49 AM IST

gul-1.jpg

ಕಲಬುರಗಿ: ಈಗಿನ ದಿನಮಾನಗಳಲ್ಲಿ ಪಟ್ಟಣಕ್ಕಿಂತ ಗ್ರಾಮೀಣ ಮಕ್ಕಳು ತುಂಬಾ ಗಟ್ಟಿ. ಅವರು ಎಲ್ಲ ಕೆಲಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಬಲಿಷ್ಠವಾಗಿ ಬೆಳೆಯುತ್ತಾರೆ. ಅದಕ್ಕೆ ತಾಯಂದಿರ ಆರೈಕೆಯೇ ಕಾರಣ ಎಂದು ಲೋಕಸಭೆ ಕಾಂಗ್ರೆಸ್‌ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಗರದ ಎಸ್‌.ಎಂ. ಪಂಡಿತ ರಂಗಮಂದಿರಲ್ಲಿ ಸೋಮವಾರ ನಡೆದ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಮಾತೃಪೂರ್ಣ ಯೋಜನೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿನ ತಾಯಂದಿರು ಮಕ್ಕಳಿಗೆ ಎದೆ ಹಾಲು ಕುಡಿಸುತ್ತಾರೆ. ಪಟ್ಟಣದವರು ಸೌಂದರ್ಯದ ಕಾರಣ ನೀಡಿ ಡಬ್ಬಿ ಹಾಲು ಕುಡಿಸುತ್ತಾರೆ. ಇದರಿಂದ ಮಕ್ಕಳು ದಷ್ಠಪುಷ್ಠವಾಗಿ ಬೆಳೆಯುವುದಿಲ್ಲ. ಇದರಿಂದಾಗಿ ಅಪೌಷ್ಟಿಕತೆ ಕಾಡುತ್ತಿದೆ. ಆದರೆ, ಈಗೀಗ ಆಹಾರದಲ್ಲಿ ಪೋಷಕಾಂಶಗಳ ಕೊರತೆಯಿಂದಾಗಿ ಗ್ರಾಮೀಣ ಭಾಗದಲ್ಲೂ ಮಕ್ಕಳು ಅಪೌಷ್ಟಿಕತೆಗೆ ತುತ್ತಾಗುತ್ತಿದ್ದಾರೆ.

ಹಾಗಾಗಿ ಮಾತೃಪೂರ್ಣ ಯೋಜನೆ ಮೂಲಕ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಮತ್ತು ಪ್ರೋಟೀನ್‌ಯುಕ್ತ ಊಟ ನೀಡಿ ಅವರ ಭಾವಿ ಭವಿಷ್ಯ ಉಜ್ವಲಗೊಳಿಸಲು ಸಿದ್ದರಾಮಯ್ಯ ಅವರ ಸರಕಾರ ಯೋಜಿಸಿದೆ. ಇದು ನಿಜಕ್ಕೂ ಉತ್ತಮವಾದ ಉದ್ದೇಶವಾಗಿದೆ. ಆದ್ದರಿಂದ ತಾಯಂದಿರು ಚೆನ್ನಾಗಿ ಊಟ ಮಾಡಿ ರಾಣಿ ಚನ್ನಮ್ಮ, ಒನಕೆ ಓಬವ್ವ, ಝಾನ್ಸಿರಾಣಿ ಲಕ್ಷಿ¾ಬಾಯಿ ಅಂತಹ ಮಕ್ಕಳನ್ನು ಹೆತ್ತು ನಾಡಿನ ಭವಿಷ್ಯ ಉಜ್ವಲಗೊಳಿಸಿ ಎಂದು ಕರೆ ನೀಡಿದರು.

ಹೊಸ ಯೋಜನೆ ಅಡಿ ಜಿಲ್ಲೆಯಲ್ಲಿ 61 ಸಾವಿರ ಗರ್ಭಿಣಿಯರನ್ನು ಗುರುತಿಸಲಾಗಿದೆ. ಅವರಿಗೆ ಸರಿಯಾಗಿ ಊಟ ನೀಡುವ ಹೊಣೆ ಅಧಿಕಾರಿಗಳದ್ದಾಗಿದೆ ಎಂದು ಹೇಳಿದರು. ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ
ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಮಾತೃಪೂರ್ಣ ಯೋಜನೆ ಮೂಲಕ ಆರೋಗ್ಯವಂತ ರಾಜ್ಯದ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಾನರ್ಹರು.

ಯೋಜನೆಯನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಬೇಕಾದ ಗುರುತರವಾದ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಪ್ರಸವದ ಬಳಿಕ ಉಂಟಾಗಿರುವ ತಾಯಂದಿರ, ಶಿಶುಗಳ ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಹಾಗೂ ಪ್ರಸವ ಪೂರ್ವದ ಸಾವುಗಳನ್ನು ತಡೆಯುವ ನಿಟ್ಟಿನಲ್ಲಿ ಹೊಸ ಯೋಜನೆ ಮಹತ್ವ ಹೊಂದಿದೆ. ಯೋಜನೆಗೆ ಯಾವುದೇ ರೀತಿಯಲ್ಲಿ ಅಪಸ್ವರ ಬಾರದಂತೆ ಗರ್ಭಿಣಿಯರು, ಗ್ರಾಮಸ್ಥರು ಹಾಗೂ ಅಂಗನವಾಡಿ ಮೇಲ್ವಿಚಾರಕಿಯರು ಶ್ರಮಿಸಬೇಕು. ಎಲ್ಲ ಸಂದರ್ಭದಲ್ಲಿ ಊಟ ನೀಡುವಂತೆ ಅಂಗನವಾಡಿಗಳಿಗೆ ತಿಳಿಸಲಾಗಿದೆ. ಅದಲ್ಲದೆ, ಜಿಲ್ಲೆಯಲ್ಲಿ 3ಸಾವಿರ ಅಂಗನವಾಡಿಗಳು ಇದರ ವ್ಯಾಪ್ತಿಯಲ್ಲಿವೆ. ಆದಷ್ಟು ಬೇಗ ಕೆಲಸ ಆಗಬೇಕಿದೆ ಎಂದು ಹೇಳಿದರು.

ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ ಅವರು ಗರ್ಭಿಣಿಯರಿಗೆ ಉಡಿ ತುಂಬಿ ಹರಸಿದರು. ಪೌಷ್ಟಿಕ ಆಹಾರ ಬಡಿಸಿದರು. ಎನ್‌ಇಕೆಆರ್‌ಟಿಸಿ ಅಧ್ಯಕ್ಷ ಇಲಿಯಾಸ್‌ ಸೇಠ ಬಾಗವಾನ್‌, ಎಸಿ ರಾಚಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಕಾಂತ ಕುಲಕರ್ಣಿ, ಮಹಾಪೌರ ಶರಣಕುಮಾರ ಮೋದಿ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್‌ ಇದ್ದರು .

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.