ಅನುಭವ ಮಂಟಪ ಉತ್ಸವ ಭಿತ್ತಿ ಪತ್ರ ಬಿಡುಗಡೆ
Team Udayavani, Oct 21, 2017, 10:01 AM IST
ಭಾಲ್ಕಿ: ಬಸವಕಲ್ಯಾಣದ ಅನುಭವ ಮಂಟಪ ಪರಿಸರದಲ್ಲಿ ನ.25, 26 ರಂದು ನಡೆಯಲಿರುವ 38ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಹಾಯ ಸಹಕಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್ ಅನುಭವ ಮಂಟಪ ವತಿಯಿಂದ ಶುಕ್ರವಾರ ನಡೆದ 38ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವದ ಭಿತ್ತಿಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕಿದೆ. ಈ ನಿಟ್ಟಿನಲ್ಲಿ ತಾವು ಸಚಿವರಾದ ಮೇಲೆ ಬಸವಕಲ್ಯಾಣದಲ್ಲಿ ಶರಣರ ಸ್ಮಾರಕ, ಗುಹೆಗಳ ಸಂರಕ್ಷಣೆ ಹಾಗೂ ನೂತನ ಅನುಭವ ಮಂಟಪ ನಿರ್ಮಾಣಕ್ಕಾಗಿ ಅಂದಾಜು 600 ಕೋಟಿ ವೆಚ್ಚದ ಯೋಜನೆ ರೂಪಿಸಲಾಗಿದ್ದು, ಹಿರಿಯ ಸಾಹಿತಿ ಗೋರಚ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಮಾರ್ಚ್ ಒಳಗೆ ಮುಖ್ಯಮಂತ್ರಿಗಳನ್ನು ಕರೆಸಿ ಕಾಮಗಾರಿಗಳಿಗೆ ಚಾಲನೆ
ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಪವಿತ್ರ ಭೂಮಿಯಲ್ಲಿ ಅನುಭವ ಮಂಟಪ ಉತ್ಸವ ನಡೆಯುತ್ತಿರುವುದು ಸಂತಸ ತಂದಿದೆ. 21ನೇ ಶತಮಾನದಲ್ಲಿ ಅನುಭವ ಮಂಟಪ ಅಭಿವೃದ್ಧಿಯಲ್ಲಿ ಡಾ| ಚನ್ನಬಸವ ಪಟ್ಟದ್ದೇವರು, ಭೀಮಣ್ಣ ಖಂಡ್ರೆ ಸೇರಿದಂತೆ ಹಲವರ ಕೊಡುಗೆ ಮಹತ್ವದ್ದಾಗಿದೆ. 37 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಶರಣ ಕಮ್ಮಟದಂತಹ ಕಾರ್ಯಕ್ರಮಗಳಿಂದ ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದೆ ಎಂದು ಹೇಳಿದರು.
ಅನುಭವ ಮಂಟಪ ಉತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಬಾಬು ವಾಲಿ ಮಾತನಾಡಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ಸವ ಯಶಸ್ವಿಗೊಳಿಸುವುದಾಗಿ ಭರವಸೆ ನೀಡಿದರು. ಸಾನ್ನಿಧ್ಯ ವಹಿಸಿದ್ದ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಬಸವಕಲ್ಯಾಣದ ಅನುಭವ ಮಂಟಪ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕಿದೆ. ಅದರ ಭಾಗವಾಗಿ ನಡೆಯುತ್ತಿರುವ ಶರಣ ಕಮ್ಮಟ, ಅನುಭವ ಮಂಟಪ ಉತ್ಸವಕ್ಕೆ ಎಲ್ಲರ ಸಹಾಯ, ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಶ್ರೀ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದರು. ಅನುಭವ ಮಂಟಪ ಉತ್ಸವ ಗೌರವಾಧ್ಯಕ್ಷ ಜಯರಾಜ ಖಂಡ್ರೆ, ಕಾರ್ಯಾಧ್ಯಕ್ಷ ಶಿವರಾಜ ನರಶೆಟ್ಟೆ, ಪುರಸಭೆ ಅಧ್ಯಕ್ಷ ವಿಶಾಲ ವಿಶ್ವಂಬರ ಪುರಿ, ಹಣಮಂತರಾವ್ ಚವ್ಹಾಣ, ಶಶಿಧರ ಕೋಸಂಬೆ ಇದ್ದರು. ಚಂದ್ರಕಾಂತ ಬಿರಾದಾರ ರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
MUST WATCH
ಹೊಸ ಸೇರ್ಪಡೆ
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ