ಜಯಂತಿಗಳು ಸರ್ವರಿಂದಾಗಲಿ
Team Udayavani, Nov 6, 2017, 11:25 AM IST
ಸೇಡಂ: ಮಹಾತ್ಮರ ಮತ್ತು ದೇಶಕ್ಕೆ ಸೇವೆ ಸಲ್ಲಿಸಿದವರ ಜಯಂತಿಗಳಲ್ಲಿ ಸರ್ವ ಜನಾಂಗದವರು ಪಾಲ್ಗೊಂಡು
ಸಮಾನತೆ ಸಾರಬೇಕು ಎಂದು ಎಸ್ಪಿ ಎನ್. ಶಶಿಕುಮಾರ ಹೇಳಿದರು. ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಟಿಪ್ಪು ಸುಲ್ತಾನ ಜಯಂತಿ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸರ್ಕಾರ ಅನೇಕ ಮಹನಿಯರ ಜಯಂತಿಗಳನ್ನು ಘೋಷಿಸಿದೆ. ಆದರೆ ಮಹನಿಯರನ್ನು ಒಂದು ಜಾತಿ, ಕೋಮಿಗೆ ಸೀಮಿತಗೊಳಿಸುತ್ತಿರುವುದು ದುರ್ದೈವದ ಸಂಗತಿ.
ಪ್ರತಿಯೊಬ್ಬರೂ ಜಾತಿ, ಬೇಧ ಮರೆತು ಜಯಂತಿಗಳಲ್ಲಿ ಪಾಲ್ಗೊಳ್ಳುವ ಮೂಲಕ ಕೋಮು ಸೌಹಾರ್ದತೆ ಮೂಡಿಸಬೇಕು. ಅಲ್ಲದೆ ನ.10 ರಂದು ಜರುಗುವ ಟಿಪ್ಪು ಸುಲ್ತಾನ ಜಯಂತಿ ಹಿನ್ನೆಲೆಯಲ್ಲಿ ಕಳೆದ ವರ್ಷದ ರಾಜ್ಯದಲ್ಲಿ ಸಂಭವಿಸಿದ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಹೆಚ್ಚಿನ ನಿಗಾವಹಿಸಲಿದೆ. ಅದರನ್ವಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಉಪ ವಿಭಾಗಾಧಿಕಾರಿ ಡಾ| ಸುಶೀಲಾ ಮಾತನಾಡಿ, ಶಾಂತಿಯುತವಾಗಿ ಜಯಂತಿಗಳನ್ನು ಆಚರಿಸುವ ಮೂಲಕ
ದೇಶದ ಗೌರವ ಎತ್ತಿ ಹಿಡಿಬೇಕು ಎಂದು ಸಲಹೆ ನೀಡಿದರು. ಮಜ್ಲೀಸೆ ಟಿಪ್ಪು ಸುಲ್ತಾನ ಸಂಘದ ಅಧ್ಯಕ್ಷ ಬಶೀರ ಖಾನ್, ಟಿಪ್ಪು ಸುಲ್ತಾನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸೈಯ್ಯದ್ ಆದಮ್, ತುರಾಬ ಉಲ್ ಹಕ್ ಮಾತನಾಡಿದರು.
ಡಿವೈಎಸ್ಪಿ ಯು. ಶರಣಪ್ಪ ಸ್ವಾಗತಿಸಿದರು. ಸಿಪಿಐ ಪಂಚಾಕ್ಷರಿ ಸಾಲಿಮಠ ನಿರೂಪಿಸಿದರು. ತಹಶೀಲ್ದಾರ ಸುಬ್ಬಣ್ಣ ಜಮಖಂಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು