ನಾಡಿನ ಹೆಸರು ಜಗತ್ತಿನಾದ್ಯಂತ ಹರಡಲಿ


Team Udayavani, Nov 21, 2017, 10:32 AM IST

gul-2.jpg

ಕಲಬುರಗಿ: ಕರುನಾಡಿನ ಹೆಸರು ಜಗತ್ತಿನಾದ್ಯಂತ ಹರಡುವಂತೆ ನಮ್ಮ ಕ್ರೀಡಾಪಟುಗಳು ಮಾಡಬೇಕು. ಅದಕ್ಕಾಗಿ ಇಂತಹ ವೇದಿಕೆಗಳನ್ನು ನಿರ್ಮಾಣ ಮಾಡಿ ಅವರಿಗೆ ತಮ್ಮ ಪ್ರತಿಭೆ ಗಟ್ಟಿಗಳಿಸಿಕೊಳ್ಳಲು ಉತ್ತಮ ಅವಕಾಶಗಳನ್ನು ನೀಡಲಾಗುತ್ತಿದೆ ಎಂದು ಪಾಲಿಕೆ ಮಹಾಪೌರ ಶರಣಕುಮಾರ ಮೋದಿ ಹೇಳಿದರು.

ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರದಿಂದ ಆರಂಭವಾದ ರಾಜ್ಯ ಮಟ್ಟದ 14 ಮತ್ತು 17 ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಲಾನ್‌ ಟೆನಿಸ್‌ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡಾಕೂಟದಲ್ಲಿ ಸೋಲು- ಗೆಲುವು ಪ್ರಮುಖ ಪಾತ್ರ ವಹಿಸುವುದಿಲ್ಲ. ತಮ್ಮ ಕ್ರೀಡೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸದೇ ಮುಂದುವರಿಸಿದಲ್ಲಿ ಒಂದಲ್ಲ ಒಂದು ದಿನ ಜಯಸಿಕ್ಕೆ ಸಿಗುತ್ತದೆ. ಅಲ್ಲಿಯವರೆಗೂ ಪರಿಶ್ರಮ ಪಡಬೇಕು.
ತರಬೇತಿ, ಏಕಾಗ್ರತೆ ಮತ್ತು ಶ್ರಮದಿಂದ ಉತ್ತಮ ಕ್ರೀಡಾಪಟು ಹೊರಬರುತ್ತಾನೆ ಎಂದು ಹೇಳಿದರು. ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾರ ಮಲಾಜಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಾಂತಗೌಡ ಪಾಟೀಲ, ಕ್ರೀಡೆಗಳು ಶಿಕ್ಷಣದ ಒಂದು ಪ್ರಮುಖ ಭಾಗವಾಗಿದೆ. ಈ ಕ್ಷೇತ್ರಕ್ಕೆ ಶಿಕ್ಷಣ ಇಲಾಖೆ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿದೆ. ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳಿಗೆ ಅಗತ್ಯ ಮೂಲ ಸೌಕರ್ಯಕಲ್ಪಿಸಲಾಗುತ್ತಿದ್ದು, ಕ್ರೀಡಾಪಟುಗಳನ್ನು ಕ್ರೀಡಾಂಗಣಕ್ಕೆ ಕರೆ ತರಲು ವಾಹನದ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಹೇಳಿದರು.

ಕ್ರೀಡಾಪಟುಗಳ ಯೋಗಕ್ಷೇಮ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಣ ಇಲಾಖೆ ಮೇಲಿದೆ. ಯಾವುದೇ ಕುಂದು-ಕೊರತೆಗಳನ್ನು ನೋಡಿಕೊಳ್ಳಲು 40 ಜನ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜಿಸಲಾಗಿದೆ. ರಾಜ್ಯದ 34 ಜಿಲ್ಲೆಗಳನ್ನು ಸಂಪರ್ಕಿಸಿ ಇಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಕೋರಲಾಗಿತ್ತು. ಆದರೆ, ಕ್ರೀಡಾಕೂಟದಲ್ಲಿ ಹೆಚ್ಚು ತಂಡಗಳು ಭಾಗವಹಿಸಿಲ್ಲ ಎಂದು ಹೇಳಿದರು.

ಜಿಲ್ಲಾ ಕ್ರೀಡಾಧಿಕಾರಿ ಟಿ. ರವೀಂದ್ರಕುಮಾರ, ದೈಹಿಕ ಶಿಕ್ಷಣಾಧಿಕಾರಿ ವಿಜಯಕುಮಾರ, ತಾಲೂಕು ಮಟ್ಟದ ದೈಹಿಕಶಿಕ್ಷಣಾ ಧಿಕಾರಿಗಳಾದ ಎಂ.ಜಿ. ಬಿರಾದಾರ, ಎ.ಎಸ್‌. ವಗ್ಗಿ, ವೀರಭದ್ರಪ್ಪ ದೊಡ್ಡಮನಿ, ಎಸ್‌.ಎಂ. ಚೌಧರಿ, ನೀಲಕಂಠಪ್ಪ, ಜಿಲ್ಲಾ ಗ್ರೇಡ್‌ ಒನ್‌ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಡಾ| ಶಿವಲಿಂಗಪ್ಪ ಗೌಳಿ, ರಾಜ್ಯ ಉಪಾಧ್ಯಕ್ಷ ಚನ್ನಬಸಪ್ಪ ಕೊಲ್ಲೂರ, ಶಿವಶರಣಪ್ಪ ಮಂಠಾಳೆ ಪಾಲ್ಗೊಂಡಿದ್ದರು.

ದೈಹಿಕ ಶಿಕ್ಷಣಾಧಿಕಾರಿ ಬಸವರಾಜ ರಟಕಲ್‌ ಕಾರ್ಯಕ್ರಮ ನಿರೂಪಿಸಿದರು. ಎಂ.ಜಿ. ಬಿರಾದಾರ ವಂದಿಸಿದರು. ಕ್ರೀಡಾ
ಕೋಚ್‌ ತರಬೇತಿದಾರ ವಿಶ್ವನಾಥ ಮತ್ತಿತರರು ಕ್ರೀಡಾಕೂಟ ನಡೆಸಿಕೊಟ್ಟರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

1——-saads

HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

1-wewewqe

Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ

1-sadsadsad

Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.