ಪತ್ನಿ ಕತ್ತು ಹಿಸುಕಿ ಕೊಲೆ
Team Udayavani, Nov 24, 2017, 10:39 AM IST
ಚಿಂಚೋಳಿ: ತಾಲೂಕಿನ ಇರಗಪಳ್ಳಿ ಗ್ರಾಮದಲ್ಲಿ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬುಧವಾರ ನಡೆದಿದೆ ಎಂದು ಸುಲೇಪೇಟ ಪೊಲೀಸರು ತಿಳಿಸಿದ್ದಾರೆ. ಇರಗಪಳ್ಳಿ ಗ್ರಾಮದ ನವವಿವಾಹಿತೆ ಸವಿತಾ ರವಿಶಂಕರ ಕಲಶೆಟ್ಟಿ (20) ಮೃತಪಟ್ಟವಳು. ಒಂದೂವರೆ ವರ್ಷಗಳ ಹಿಂದೆಯಷ್ಟೆ ತಾಲೂಕಿನ ಪೋತಂಗಲ್ ಗ್ರಾಮದ ಬಸಣ್ಣ ಕಲಶೆಟ್ಟಿ ಎನ್ನುವರ ಮಗಳಾದ ಸವಿತಾ ಎನ್ನಾಕೆಯನ್ನು ಇರಗಪಳ್ಳಿ ಗ್ರಾಮದ ರವಿಶಂಕರ ಎಂಬಾತನೊಂದಿಗೆ ಮದುವೆ ಮಾಡಿಕೊಡಲಾಗಿತ್ತು.
ಪತಿ, ಪತ್ನಿ ಮಧ್ಯೆ ಕಳೆದ ಆರು ತಿಂಗಳಿಂದ ಸಂಸಾರದಲ್ಲಿ ಹೊಂದಾಣಿಕೆ ಇರಲಿಲ್ಲ. ನನ್ನ ಮೇಲೆ ಸಂಶಯಪಟ್ಟು ಅನಾವಶ್ಯಕವಾಗಿ ದೈಹಿಕ ಮತ್ತು ಮಾನಸಿಕ ಹಿಂಸೆ ನನ್ನ ಪತಿ ನೀಡುತ್ತಿದ್ದಾನೆಂದು ಮೃತಳು ತನ್ನ ತಂದೆ ತಾಯಿಗೆ ತಿಳಿಸಿದ್ದಳು. ಅಲ್ಲದೇ ತನ್ನ ತವರು ಮನೆಯಲ್ಲಿಯೇ ವಾಸವಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ
ನ. 20ರಂದು ಗ್ರಾಮಸ್ಥರು ಪತಿ ರವಿಶಂಕರ ಹಾಗೂ ನೆರೆಹೊರೆಯವರು ಎರಡು ಕುಟುಂಬಗಳ ಮಧ್ಯೆ ರಾಜಿ ಸಂಧಾನ ಮಾಡಿದ್ದರಿಂದ ಕುಟುಂಬ ಹಿರಿಯರೊಂದಿಗೆ ಗಂಡನ ಮನೆಗೆ ಬಂದಿದ್ದಳು. ಮತ್ತೆ ಗಂಡ ಹೆಂಡತಿ ಮಧ್ಯೆ ಮಾತಿಗೆ ಮಾತು ಬೆಳೆದು ಇಬ್ಬರು ಜಗಳವಾಡಿದ್ದರು.
ಸಿಟ್ಟಿಗೆದ್ದ ಪತಿ ರವಿಶಂಕರ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆಯ ಕುರಿತು ಮೃತಳ ತಂದೆ ಬಸಣ್ಣ ನೀಡಿದ ದೂರಿನ ಮೇರೆಗೆ ಸುಲೇಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ರವಿಶಂಕರನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸ್ಐ ಪ್ರಭು ದುದ್ದಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು