ಪಾನಮುಕ್ತ ನಿಂಬಾಳವೀಗ ಸುಕನ್ಯಾ ಸಮೃದ್ಧಿ ಗ್ರಾಮ
Team Udayavani, Nov 30, 2017, 10:36 AM IST
ಕಲಬುರಗಿ: ಈಗಾಗಲೇ ಪಾನಮುಕ್ತವಾಗಿ ನಾಲ್ಕು ವರ್ಷಗಳನ್ನು ಪೂರೈಸಿದ್ದಲ್ಲದೇ ಬಹಿರ್ದೆಸೆಮುಕ್ತ ಗ್ರಾಮದತ್ತ ಹೆಜ್ಜೆ ಹಾಕುತ್ತಾ ಆದರ್ಶ ಗ್ರಾಮ ಎಂಬುದಾಗಿ ಹೆಸರು ಗಳಿಸಿರುವ ಆಳಂದ ತಾಲೂಕಿನ ನಿಂಬಾಳ ಗ್ರಾಮ ಈಗ ಮತ್ತೂಂದು ಆದರ್ಶ ಕಾಯಕದತ್ತ ಹೆಜ್ಜೆ ಹಾಕಿದೆ.
ಇಡೀ ಗ್ರಾಮದ ಹೆಣ್ಣು ಮಕ್ಕಳಿಗೆ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಅಳವಡಿಸಿದ್ದರಿಂದ ಮಂಗಳವಾರ ಭಾರತೀಯ ಅಂಚೆ ಇಲಾಖೆ ಕಲಬುರಗಿ ವಿಭಾಗದ ವತಿಯಿಂದ ನಿಂಬಾಳ ಗ್ರಾಮವನ್ನು ಸಂಪೂರ್ಣ ಸುಕನ್ಯಾ ಸಮೃದ್ಧಿ ಗ್ರಾಮ ಎಂಬುದಾಗಿ ಘೋಷಣೆ ಮಾಡಲಾಯಿತು.
ಘೋಷಣೆ ಮಾಡುವ ಕಾರ್ಯಕ್ರಮವು ಗ್ರಾಮದ ಶಾಂತಲಿಂಗೇಶ್ವರ ವಿರಕ್ತ ಮಠದ ಆವರಣದಲ್ಲಿ ಮೌನ ತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ಈಗಾಗಲೇ ಪೂಜ್ಯರು ಇಡೀ ನಿಂಬಾಳ ಗ್ರಾಮವನ್ನು ಪಾನಮುಕ್ತರನ್ನಾಗಿ ಮಾಡಿ ದೇಶದ ಗಮನ ಸೆಳೆಯುವಂತೆ ಮಾಡಿದ್ದಾರೆ.
ಅಲ್ಲದೇ ಅವರ ಇಚ್ಚೆ ಮೇರೆಗೆ ಸಂಪೂರ್ಣ ಬಯಲುದೆಸೆಮುಕ್ತ ಗ್ರಾಮದತ್ತ ಹೆಜ್ಜೆ ಹಾಕಿದೆ. ಈಗ ಮತ್ತೂಂದು ಹೆಜ್ಜೆ ಹಾಕುವ ನಿಟ್ಟಿನಲ್ಲಿ ಸುಕನ್ಯಾ ಸಮೃದ್ಧಿ ಗ್ರಾಮವಾಗಿ ಹೊರಹೊಮ್ಮಿರುವುದು ಕಳಸಪ್ರಾಯವಾಗಿದೆ ಎಂದು ಶ್ಲಾಘಿಸಲಾಯಿತು.
ನಿಂಬಾಳ ಗ್ರಾಮದಲ್ಲಿ ಒಟ್ಟು 235 ಹೆಣ್ಣು ಮಕ್ಕಳು 0-10 ವಯಸ್ಸಿನ ಒಳಗಿದ್ದು, ಎಲ್ಲಾ ಹೆಣ್ಣು ಮಕ್ಕಳ ಹೆಸರಿನಲ್ಲಿ ಅಂಚೆ ಕಚೇರಿಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಆರಂಭಿಸಲಾಗಿದೆ. ಹೀಗಾಗಿ ನಿಂಬಾಳ ಗ್ರಾಮವನ್ನು ಸುಕನ್ಯಾ ಸಮೃದ್ಧಿ ಗ್ರಾಮ
ಎಂದು ಘೋಷಣೆ ಮಾಡಿ, ನಾಲ್ಕು ವರ್ಷದ ಭಾಗ್ಯಶ್ರೀ ಎನ್ನುವ ಬಾಲಕಿಯ ಜನ್ಮದಿನವನ್ನು ಮೌನಯೋಗಿಗಳ ಉಪಸ್ಥಿತಿಯಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಇದೇ ಸಮಯದಲ್ಲಿ ಶಾಂತಲಿಂಗೇಶ್ವರ ಸ್ವಾಮಿಜೀಯವರು ಹಾಗೂ ಅಂಚೆ ಇಲಾಖೆ ಅಧಿಕಾರಿಗಳು ಸುಕನ್ಯಾ ಸಮೃದ್ಧಿ ಖಾತೆ ತೆಗೆದ ಎಲ್ಲಾ ಹೆಣ್ಣು ಮಕ್ಕಳಿಗೆ ಅಂಚೆ ಕಚೇರಿ ಪಾಸ್ಬುಕ್ ಅನ್ನು ವಿತರಿಸಲಾಯಿತು.
ಅಂಚೆ ಇಲಾಖೆಯ ಹಿರಿಯ ಅಧೀಕ್ಷಕ ಶಿವಾನಂದ ಎಸ್.ಪಾಟೀಲ ಅಧ್ಯಕ್ಷತೆ ವಹಿಸಿ, ಯೋಜನೆಯ ಲಾಭವನ್ನು ಪಡೆದು ಎಲ್ಲರು ತಮ್ಮ ಮಕ್ಕಳ ಆರ್ಥಿಕ ಹಾಗೂ ಶೆ„ಕ್ಷಣಿಕ ಭದ್ರತೆಯನ್ನು ಪಡೆಯಬೇಕೆಂದು ವಿವರಣೆ ನೀಡಿದರು.
ಸಹಾಯಕ ಅಂಚೆ ಅಧೀಕ್ಷಕ ಶಿವಾನಂದ ಆರ್. ಹೀರಾಪುರ ಸುಕನ್ಯಾ ಸಮೃದ್ಧಿ ಯೋಜನೆ ಕುರಿತು ಮಾತನಾಡಿ, ಸುತ್ತಮುತ್ತಲಿನ ಎಲ್ಲ ಗ್ರಾಮದವರು ತಮ್ಮ ಮಕ್ಕಳ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಆರಂಭಿಸಬೇಕೆಂದು ವಿನಂತಿಸಿಕೊಂಡರು. ಸಹಾಯಕ ಅಂಚೆ ಅಧೀಕ್ಷಕ ವಿ.ಎಲ್ ಚಿತ್ತಕೋಟೆ ಮಾತನಾಡಿ, ಎಸ್.ಬಿ, ಆರ್.ಡಿ, ಟಿ.ಡಿ, ಪಿಪಿಎಫ್ ಮುಂತಾದ ಉಳಿತಾಯ ಖಾತೆಗಳ ಬಗ್ಗೆ ತಿಳಿ ಹೇಳಿದರು.
ಸಹಾಯಕ ಅಂಚೆ ಅಧೀಕ್ಷಕ ಆರ್.ಕೆ ಉಮ್ರಾಣಿ, ಅಂಚೆ ನಿರೀಕ್ಷಕ ರಾಮಕೃಷ್ಣ ವಂಶಿ ಪ್ರಧಾನ ಮಂತ್ರಿಯವರ ಸುರಕ್ಷಾ ಭೀಮಾ ಯೋಜನೆ, ಜೀವನ ಜ್ಯೋತಿ ಯೋಜನೆ ಹಾಗೂ ಅಟಲ್ ಪೆನ್ ಷನ್ ಯೋಜನೆ ಕುರಿತು ಮಾತನಾಡಿದರು. ಸಿದ್ದಣ್ಣ ಬೋಲಾ ನಿರೂಪಿಸಿದರು. ಸುಶೀಲ ಕುಮಾರ ತಿವಾರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು