ಐಟಿಐ ಕಾಲೇಜು ಕಟ್ಟಡ ತೆರವಿಗೆ ನ್ಯಾಯಾಲಯ ಆದೇಶ


Team Udayavani, Jan 22, 2018, 11:55 AM IST

gul-8.jpg

ವಾಡಿ: ಅಧಿಕಾರಿಗಳು ಮಾಡಿದ ಸಣ್ಣ ಎಡವಟ್ಟಿ ನಿಂದ ನಿರ್ಮಾಣ ಹಂತದಲ್ಲಿರುವ ಸರಕಾರಿ ಕಾಲೇಜು ಕಟ್ಟಡವೊಂದನ್ನು ಧರೆಗುರುಳಿಸಬೇಕಾದ ಪ್ರಸಂಗ ಎದುರಾಗಿದ್ದು, ಸರಕಾರದ ಕೋಟ್ಯಂತರ ರೂ. ಅನುದಾನ
ನೀರುಪಾಲಾಗಲಿದೆ.

ರಾವೂರ-ಲಕ್ಷ್ಮೀಪುರವಾಡಿ ಗ್ರಾಮಗಳ ಮಧ್ಯೆ ನಿರ್ಮಿಸಲಾಗುತ್ತಿರುವ ವಾಡಿ ಸರಕಾರಿ ಕೈಗಾರಿಕಾ ತರಬೇತಿ
ಕೇಂದ್ರ (ಐಟಿಐ) ಕಾಲೇಜು ಕಟ್ಟಡವನ್ನು ಅನಧಿಕೃತ ಜಾಗದಲ್ಲಿ ಕಟ್ಟಲಾಗುತ್ತಿದ್ದು, ಅದನ್ನು ತೆರವುಗೊಳಿಸಿ ಜಮೀನು ಮಾಲೀಕರಿಗೆ ಭೂಮಿ ಬಿಟ್ಟುಕೊಡಬೇಕು ಎಂದು ಕೋರ್ಟ್‌ ಆದೇಶ ನೀಡಿರುವುದರಿಂದ ಅಲ್ಲಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಚಿಂತೆಗೀಡು ಮಾಡಿದೆ.

ರಾವೂರ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ ಸರ್ವೇ ನಂ. 177ರಲ್ಲಿನ 116.38 ಎಕರೆ ಸರಕಾರಿ
ಜಾಗದಲ್ಲಿ 4 ಎಕರೆಯನ್ನು ಕಾಲೇಜು ಕಟ್ಟಡ ಕಟ್ಟಲು ಸರಕಾರ ನೀಡಿತ್ತು. ನಬಾರ್ಡ್‌ ಯೋಜನೆಯಡಿ ಮಂಜೂರಾದ ಒಟ್ಟು 3 ಕೋಟಿ ರೂ. ಅನುದಾನದಲ್ಲಿ ವಾಡಿ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರದ ನೂತನ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿತ್ತು. ದಾಖಲೆಗಳ ಸಮೇತ ಜಾಗ ಪರಿಶೀಲನೆ ಮಾಡಿ ಕಟ್ಟಡ ಪರವಾನಿಗೆ ನೀಡಬೇಕಾದ ಅಧಿಕಾರಿಗಳು, ಉದ್ದೇಶಿತ ಜಾಗದ ಬದಲು ಗಾಂಧಿನಗರದ ಪಟ್ಟಾ ಸರ್ವೇ ನಂ. 56.57 ರಲ್ಲಿ ರೈತರೊಬ್ಬರಿಗೆ ಸೇರಿದ ಜಾಗೆ ತೋರಿಸಿದ್ದರು ಎನ್ನಲಾಗಿದೆ.

ಕಾಮಗಾರಿ ಆರಂಭವಾದ ವೇಳೆ ಎಚ್ಚೆತ್ತ ಜಮೀನು ಮಾಲೀಕರಾದ ಕಮಲಾಬಾಯಿ ಶರಣಪ್ಪ, ಬಸಣ್ಣ ನಾಗಪ್ಪ ಹಾಗೂ ಅಮರೇಶ ಸಿದ್ರಾಮಪ್ಪ ಎನ್ನುವರು ತಮ್ಮ ಮೂಲ ದಾಖಲೆಗಳೊಂದಿಗೆ ಬಂದು ಅಧಿಕಾರಿಗಳೊಂದಿಗೆ ತಕರಾರು
ತೆಗೆದಿದ್ದರು ಎನ್ನಲಾಗಿದೆ. ಈ ವೇಳೆ ಶೇ.50ರಷ್ಟು ಕಾಮಗಾರಿ ಪೂರ್ಣಗೊಂಡಿತ್ತು. ಅನ್ಯಾಯ ಪ್ರಶ್ನಿಸಿ ರೈತರು ಕೋರ್ಟ್‌ ಮೊರೆ ಹೋಗಿದ್ದರು.

ಸುದೀರ್ಘ‌ ವಿಚಾರಣೆ ನಡೆಸಿದ ನ್ಯಾಯಾಲಯ 2017 ಡಿಸೆಂಬರ್‌ 6ರಂದು ಅಂತಿಮ ತೀರ್ಪು ನೀಡಿದ್ದು, ಎರಡು ತಿಂಗಳೊಳಗಾಗಿ ಕಟ್ಟಡ ತೆರವುಗೊಳಿಸಿ ಜಮೀನು ಬಿಟ್ಟುಕೊಡಬೇಕು ಎಂದು ಸಂಬಂಧಿಸಿದ ಸರಕಾರಿ ಅಧಿಕಾರಿಗಳಿಗೆ ಆದೇಶ ನೀಡಿದೆ. ಜಮೀನು ಉಳಿಸಿಕೊಳ್ಳಲು ಕಳೆದ ಮೂರ್‍ನಾಲ್ಕು ವರ್ಷಗಳಿಂದ ನ್ಯಾಯಾಲಕ್ಕೆ ಅಲೆಯುತ್ತಿದ್ದ ರೈತರಿಗೆ ಕೊನೆಗೂ ನ್ಯಾಯ ಸಿಕ್ಕಿದೆ. ಆದರೆ ಬೇಜವಾಬ್ದಾರಿ ಅಧಿಕಾರಿಗಳ ದೋರಣೆಗೆ ಸರಕಾರದ ಕೋಟ್ಯಂತರ ರೂ. ಅನುದಾನ ಮಣ್ಣುಪಾಲಾಗಿದೆ. ಜತೆಗೆ ಸಮಯ ಹಾಳಾಗಿ ವಿದ್ಯಾರ್ಥಿಗಳು ಮತ್ತಷ್ಟು ಸಮಸ್ಯೆಗೆ ಸಿಲುಕುವಂತಾಗಿದೆ.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.