ಭಾರತ ಭಾರತವಾಗೇ ಉಳಿಯುತ್ತೆ: ಡಾ| ಅಂಧಾರೆ


Team Udayavani, Jan 23, 2018, 11:09 AM IST

gul-3.jpg

ಕಲಬುರಗಿ: ಯಾರು ಏನೇ ಬೊಗಳಲಿ. ಕಚ್ಚಲಿ ಹಾಗೂ ಬೊಬ್ಬಿಡಲಿ ಭಾರತ ಎಂದೆಂದಿಗೂ ಭಾರತವಾಗಿಯೇ ಇರುತ್ತದೆ. ಇದನ್ನು ಹಿಂದೂ ರಾಷ್ಟ್ರವಾಗಿ ಮಾಡಲು ಆಗಲಿ. ಅಂಬೇಡ್ಕರ್‌ ಅವರು ಬರೆದ ಸಂವಿಧಾನ ಬದಲಾಯಿಸುವುದಾಗಲಿ ಸಾಧ್ಯವಿಲ್ಲದ ಮಾತು ಎಂದು ಮಹಾರಾಷ್ಟ್ರದ ಅಂಬೇಡ್ಕರ್‌ ವಾದಿ ಹಾಗೂ ಚಿಂತಕಿ ಡಾ| ಸುಷ್ಮಾ ಅಂಧಾರೆ ಹೇಳಿದರು.

ನಗರದ ದೀಕ್ಷಾಭೂಮಿ ಎಂ.ಎಸ್‌.ಕೆ ಮಿಲ್‌ ಮೈದಾನದಲ್ಲಿ ಭೀಮಾ ಕೋರೆಗಾಂವ ವಿಜಯೋತ್ಸವ 200ನೇ ವರ್ಷಾಚರಣೆ ಅಂಗವಾಗಿ ಏರ್ಪಡಿಸಿದ್ದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೆಲವು ಕೇಂದ್ರ ಮಂತ್ರಿಗಳು ಸಂವಿಧಾನ ಬದಲಿಸುವ ಕುರಿತು ಸುದ್ದಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವಿಚಾರವಾದಿಗಳ ರಕ್ತ ಮತ್ತು ನಾಯಕರ ಪ್ರಾಮಾಣಿಕತೆ ಪ್ರಶ್ನಿಸುತ್ತಾರೆ. ಆದರೆ, ಅದಕ್ಕೊಂದು ಕ್ರಮ ಇರಬೇಕು. ಬೇಕಾಬಿಟ್ಟಿಯಾಗಿ ಸಿಕ್ಕಸಿಕ್ಕಲೆಲ್ಲ ಹೇಳಿಕೊಂಡು ಓಡಾಡುವುದು ಆಂತರ್ಯದ ಸಂಸ್ಕೃತಿ ಬಯಲಾಗುತ್ತದೆ ಎಂದು ಹೇಳಿದರು.

ಯುಗ ಪುರುಷ ಡಾ| ಬಿ.ಆರ್‌. ಅಂಬೇಡ್ಕರ ಅವರ ಸ್ಮಾರಕಗಳ ರಕ್ಷಣೆ ಮಾಡುವುದು ನಮ್ಮನ್ನಾಳುವ ಸರಕಾರದ ರಾಷ್ಟ್ರೀಯ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಪಂಚಾಯತ ರಾಜ್‌ ಯೋಜನಾ ವಿಭಾಗ ಕಾರ್ಯಪಾಲಕ ಅಭಿಯಂತರ ಸುರೇಶ ಶರ್ಮಾ ಸಮ್ಮೇಳನ ಉದ್ಘಾಟಿಸಿದರು. ಮುಖ್ಯ ಅತಿಥಿ ಬೆಂಗಳೂರಿನ ಅಂಬೇಡ್ಕರವಾದಿ ಬಿ.ಆರ್‌ .ಭಾಸ್ಕರ ಪ್ರಸಾದ ಮಾತನಾಡಿ, 1818ರಲ್ಲಿ ಕೋರೆಗಾಂವ ಯುದ್ಧ ಅಸ್ಪೃಶ್ಯರು ಮತ್ತು ಮನುವಾದದ ವಿರುದ್ಧ ನಡೆದಂತದ್ದು, ಅಲ್ಲಿಂದ ಹಿಡಿದು ಇಲ್ಲಿಯವರೆಗೂ ಯಾವ ಬದಲಾವಣೆ ಕಂಡಿಲ್ಲ. ಆದರೆ ಅದರ ಸ್ವರೂಪಗಳು ಮಾತ್ರ
ಬದಲಾಗಿವೆ. ಆದ್ದರಿಂದ ಇವತ್ತು ನಾವೆಲ್ಲರೂ ಇಂದಿನ ಆಧುನಿಕ ಪೇಶ್ವೆಗಳ ವಿರುದ್ಧ ಒಗ್ಗಟ್ಟಾಗಿ ನಿಜವಾದ ಹೋರಾಟ ಕಟ್ಟಬೇಕಾಗಿದೆ ಎಂದು ಹೇಳಿದರು.

ಭಂತೆ ಜ್ಞಾನಸಾಗರ ಮತ್ತು ಪೂಜ್ಯ ಭಂತೆ ಧಮ್ಮದೀಪ ಸಮಾವೇಶದ ಸಾನ್ನಿಧ್ಯ ಮತ್ತು ದಲಿತ ಹಿರಿಯ ಮುಖಂಡ ಡಾ| ವಿಠ್ಠಲ ದೊಡ್ಡಮನಿ ಅಧ್ಯಕ್ಷತೆ ವಹಿಸಿದ್ದರು. ಯುವ ಮುಖಂಡ ಸಂತೋಷ ಮೇಲ್ಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿನೇಶ ದೊಡ್ಡಮನಿ ಸ್ವಾಗತಿಸಿದರು.

ನೂತನವಾಗಿ ಕೆ.ಎ.ಎಸ್‌. ಅಧಿಕಾರಿಗಳಾಗಿ ನೇಮಕವಾದ ಸುರೇಶ ವರ್ಮಾ, ವರ್ಷಾ ಡಿ. ಒಡೆಯಾರ, ನೀಲಗಂಗಾ ಎಸ್‌. ಬಬಲಾದ, ನೀಲಪ್ರಭಾ ಎಸ್‌. ಬಬಲಾದ, ಪಲ್ಲವಿ ಹರಸೂರಕರ್‌, ನಾಗಮ್ಮ ಕಟ್ಟಿಮನಿ ಮತ್ತು ಮಹೇಂದ್ರ ಮದರಕಲ್‌ ಅವರನ್ನು ಸನ್ಮಾನಿಸಲಾಯಿತು.

ಧಾರವಾಡದ ಗಣಕರಂಗ ಪ್ರಸ್ತುತಪಡಿಸಿದ ಆಯುಧ ನಾಟಕ ಪ್ರದರ್ಶನಕ್ಕೆ ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ ಮತ್ತು ಮಹಾನಗರ ಪಾಲಿಕೆ ಸದಸ್ಯ ಸಿದ್ಧಾರ್ಥ ಪಟ್ಟೇದಾರ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು.

ಮಾಜಿ ಮಹಾಪೌರರಾದ ಸೋಮಶೇಖರ ಮೇಲಿನಮನಿ, ಪ್ರಕಾಶ ಔರಾದಕರ್‌, ಜೈಭಾರತ ಕಾಂಬ್ಳೆ, ದೇವಿಂದ್ರ ಸಿನೂರ, ಸಂತೋಷ ಹಾದಿಮನಿ, ಪ್ರಕಾಶ ಕಪನೂರ, ಲಕ್ಷ್ಮೀಕಾಂತ ಹುಬಳಿ, ಹಣಮಂತ ಇಟಗಿ, ರಾಣೊಜಿ ದೊಡ್ಡಮನಿ ಸೇರಿದಂತೆ ಸಾವಿರಾರು ಜನರು ಸಮಾವೇಶದಲ್ಲಿ ಭಾಗವಹಿಸಿದ್ದರು. ಕುಮಾರಿ ಶೃತಿ ಕೆಂಬಾವಿ ನಿರೂಪಿಸಿದರು. ಅನೀಲ ಟೆಂಗಳಿ ವಂದಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.