ಬ್ಯಾಂಕಲ್ಲಿ ಉತ್ತಮ ಸಿಸಿ ಕ್ಯಾಮರಾವಿರಲಿ


Team Udayavani, Jan 26, 2018, 12:14 PM IST

gul-4.jpg

ಚಿತ್ತಾಪುರ: ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಎಲ್ಲ ಬ್ಯಾಂಕಿನ ಅಧಿಕಾರಿಗಳು ತಮ್ಮ ಬ್ಯಾಂಕಿನ ಆವರಣದಲ್ಲಿ ಗುಣಮಟ್ಟದ ಸಿಸಿ ಕ್ಯಾಮರಾಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಿಪಿಐ ಶಂಕರಗೌಡ ಪಾಟೀಲ ಬ್ಯಾಂಕಿನ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪೊಲೀಸ್‌ ಠಾಣೆಯಲ್ಲಿ ಆಯೋಜಿಸಿದ್ದ ಬ್ಯಾಂಕ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳ್ಳರು ಯಾವಾಗ
ಬೇಕಾದರೂ ಕಳ್ಳತನ ಮಾಡುತ್ತಾರೆ. ಅವರಿಗೆ ಇದೇ ಸಮಯ ಎನ್ನೋದು ಇರುವುದಿಲ್ಲ. ಬ್ಯಾಂಕ್‌ನವರು ಕಳಪೆಮಟ್ಟದ ಸಿಸಿ ಕ್ಯಾಮರಾಗಳನ್ನು ಅಳವಡಿಸಿದರೆ ಆರೋಪಿಗಳ ಭಾವಚಿತ್ರ ಗುರುತಿಸಲು ಕಷ್ಟಕರವಾಗುತ್ತದೆ. ಆದ್ದರಿಂದ ಬ್ಯಾಂಕ್‌ ಒಳಗೆ ಹಾಗೂ ಹೊರಗೆ ಗುಣಮಟ್ಟದ ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ಹೇಳಿದರು.

ಪಟ್ಟಣ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯತ್ತಿದೆ. ಎಸ್‌ಬಿಎಚ್‌, ಎಸ್‌ಬಿಐ, ಕೆನರಾ, ಐಸಿಐಸಿಐ, ಕೆ.ಜಿ.ಬಿ, ಮೈಸೂರು ಬ್ಯಾಂಕ್‌, ಮಣಿಪುರಂ ಗೋಲ್ಡ್‌ ಲೋನ್‌ ಸೇರಿದಂತೆ ಇತರೆ ಬ್ಯಾಂಕಗಳು ಇವೆ. ಕೆಲವು ಬ್ಯಾಂಕ್‌ಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅವರ ಅನುಕೂಲಕ್ಕಾಗಿ ಅಳವಡಿಸಿಕೊಂಡಿರುತ್ತಾರೆ. 

ಆದರೆ ಅದು ಗುಣಮಟ್ಟದಿಂದ ಕೂಡಿದೆಯೋ ಇಲ್ಲವೋ ಎನ್ನುವುದನ್ನು ನೋಡಿರುವುದಿಲ್ಲ. ಅದರಲ್ಲಿ ಮುಖಗಳನ್ನು
ಗುರುತಿಸಲು ಸಾಧ್ಯವೋ, ಇಲ್ಲವೋ ಎನ್ನುವ ಪರಿಜ್ಞಾನವೂ ನಿಮ್ಮಲ್ಲಿ ಇರುವುದಿಲ್ಲ.ಏನಾದರೂ ಅನಾಹುತ ಸಂಭಿಸಿದರೆ ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡುತ್ತಿರಿ. ನಾವು ಸಿಸಿ ಕ್ಯಾಮರಾಗಳಲ್ಲಿ ಮುಖ ಗುರುತಿಸಲು ಸಾಧ್ಯವಾಗದೇ ಆರೋಪಿಗಳು ಕೂಡಲೇ ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬ್ಯಾಂಕ್‌ಗಳಲ್ಲಿ ಬ್ಲಿಗರ್‌ ಅಲಾರಂಗಳನ್ನು ಅಳವಡಿಸಿಕೊಳ್ಳಬೇಕು. ಅಲಾರಾಂ ಬಗ್ಗೆ ಅಕ್ಕ ಪಕ್ಕದ ಮನೆಗಳು ಅಥವಾ ಹೋಟೆಲ್‌ಗ‌ಳು ಸೇರಿದಂತೆ ಯಾವುದೇ ಅಂಗಡಿಗಳು ಇರಲಿ. ಅವರಿಗೆ ಮಾಹಿತಿ ನೀಡಿ. ಏನಾದರೂ ಅನಾಹುತ ಸಂಭವಿಸಿದರೆ ಅಕ್ಕ ಪಕ್ಕದವರು ಅಲಾರಾಂ ಶಬ್ದ ಕೇಳಿ ತಕ್ಷಣ ಜಾಗೃತರಾಗಿ ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುತ್ತಾರೆ. ಅಲಾರಾಂನಲ್ಲಿ ಪೊಲೀಸ್‌ ಠಾಣೆಯ ಸಿಪಿಐ ಹಾಗೂ ಪಿಎಸ್‌ಐ ನಂಬರ್‌ಗಳನ್ನು ಅಳವಡಿಸಿ. ಇದರಿಂದ ಪೊಲೀಸರಿಗೆ ಮೆಸೇಜ್‌ ಬಂದ ಕೂಡಲೇ ಆರೋಪಿಗಳನ್ನು ಹಿಡಿಯುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು. ಪಿಎಸ್‌ಐ ಜಗದೇವಪ್ಪ ಪಾಳಾ, ಪ್ರೊಬೆಷನರಿ ಪಿಎಸ್‌ಐ ತಮ್ಮಯ್ಯ, ಸಿಬ್ಬಂದಿಗಳಾದ ಮಲ್ಲಿಕಾರ್ಜುನ ಉಕ್ಲಿ, ವೀರಭದ್ರ, ಚಂದ್ರಶೇಖರ, ಮುಜಾಹೀದ್‌ ಸೇರಿದಂತೆ ಬ್ಯಾಂಕಿನ ಸಿಬ್ಬಂದಿ ಇದ್ದರು.

ಅಧಿಕಾರಿಗಳಿಗೆ ನೀಡಿದ ಸೂಚನೆಗಳು ಬ್ಯಾಂಕ್‌ ರಜೆ ಇರಲಿ ಅಥವಾ ಇಲ್ಲದೇ ಇರಲಿ ಇಬ್ಬರು ವಾಚ್‌ಮನ್‌ಗಳನ್ನು  ನೇಮಿಸಿಕೊಳ್ಳಿ.
 ಹಗಲು-ರಾತ್ರಿ ಎನ್ನುವ ಅಲಾರಾಂಗಳು ಇವೆ. ಅವುಗಳನ್ನು ಅಳವಡಿಸಿಕೊಳ್ಳಿ.
 ಪ್ಯಾನಿಕ್‌ ಬಟನ್ಸ್‌ ಸೇರಿದಂತೆ ಸೆನ್ಸಾರ್‌ ಅಳವಡಿಸಿಕೊಳ್ಳಿ.
 ಪ್ರತಿಯೊಂದು ಎಟಿಎಂಗಳಲ್ಲಿ ಸಿಸಿ ಕ್ಯಾಮರಾ ಹಾಗೂ ಬೆಳಕು ಇರಲಿ.
 ಗ್ರಾಹಕರಿಗೆ ಕರೆ ಮಾಡಿ ನಿಮ್ಮ ಖಾತೆ ಸಂಖ್ಯೆ ನೀಡಿ ಅಥವಾ ನಿಮ್ಮ  ಎಟಿಎಂ ಪಾಸ್‌ ವರ್ಡ್‌ ನೀಡಿ ಎಂದು ಕೇಳುತ್ತಿದ್ದಾರೆ. 
ಅಂತಹವರಿಂದ  ದೂರವಿರುವ ಕುರಿತು ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಬ್ಯಾಂಕ್‌ಗಳಲ್ಲಿ  ಹಾಕಿಸಿ.
 ಗ್ರಾಹಕರನ್ನು ಸತಾಯಿಸದೆ ಕೂಡಲೇ ಅವರ ಕೆಲಸಗಳನ್ನು ಮಾಡಿಕೊಡಿ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.