ಸ್ತ್ರೀಶಕ್ತಿ ಸಜ್ಜುಗೊಳಿಸಿದ್ದರು ನೇತಾಜಿ


Team Udayavani, Feb 3, 2018, 12:15 PM IST

gul-11.jpg

ವಾಡಿ: ಭಾರತ ಸ್ವಾತಂತ್ರ ಚಳವಳಿ ಗೆಲ್ಲಲು ನೇತಾಜಿ ಸುಭಾಶ್ಚಂದ್ರ ಬೋಸ್‌ ಸ್ತ್ರೀಶಕ್ತಿಯನ್ನು ಸಜ್ಜುಗೊಳಿಸುವ ಮೂಲಕ ಕ್ರಾಂತಿಗೆ ಕರೆನಿಡಿದ್ದರು ಎಂದು ಎ.ಐ.ಡಿ.ವೈ.ಒ ರಾಜ್ಯಾಧ್ಯಕ್ಷೆ ಎಂ. ಉಮಾದೇವಿ ಹೇಳಿದರು.

ಪಟ್ಟಣದ ಉರುಸ್‌ ಮಹಲ್‌ನಲ್ಲಿ ಎಐಡಿಎಸ್‌ಒ, ಎಐಡಿವೈಒ ಹಾಗೂ ಆವಿಷ್ಕಾರ ಸಂಘಟನೆಗಳು ಏರ್ಪಡಿಸಿದ್ದ ನೇತಾಜಿ ಸುಭಾಶ್ಚಂದ್ರ ಬೋಸ್‌ ಅವರ 121ನೇ ಜಯಂತಿ ನಿಮಿತ್ತದ ಸಾಂಸ್ಕೃತಿಕ ಜನೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳವಳಿಯಲ್ಲಿ ಮಹಿಳೆಯರನ್ನು ಹುರಿದುಂಬಿಸಲು ಮಹಿಳೆಯರಿಗಾಗಿ ಝಾನ್ಸಿ ರಾಣಿ ರೆಜಿಮೆಂಟ್‌ ಸ್ಥಾಪಿಸಿದ್ದು ಹೋರಾಟಕ್ಕೆ ದೊಡ್ಡ ಶಕ್ತಿ ತಂದು ಕೊಟ್ಟಿತ್ತು ಎಂದರು.

ಇವತ್ತು ನಮ್ಮ ದೇಶದಲ್ಲಿ ಧರ್ಮ ಮತ್ತು ಜಾತಿ ಗಡಿಗಳನ್ನು ಮೀರಿ ಎಲ್ಲ ಜನರನ್ನು ಕಾಡುವ ಆರ್ಥಿಕ ಸಮಸ್ಯೆಗಳ ಬಗ್ಗೆ ಒತ್ತಿ ಹೇಳಬೇಕಾದ ಅವಶ್ಯಕತೆ ಇದೆ. ಬಡತನ, ಹಸಿವು, ನಿರುದ್ಯೋಗ, ಅನಕ್ಷರತೆ, ಅನಾರೋಗ್ಯ, ದುಬಾರಿ ತೆರಿಗೆ ಮತ್ತು ಸಾಲಬಾಧೆಯಂತ ಜ್ವಲಂತ ಸಮಸ್ಯೆಗಳು ಬಗೆಹರಿಯಬೇಕೆಂದರೆ ರಾಜಕೀಯ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕೆಂಬ ನೇತಾಜಿಯವರ ಚಿಂತನೆ ಸಾಕಾರಗೊಳಿಸಬೇಕಾಗಿದೆ ಎಂದು ಹೇಳಿದರು.

ನಮ್ಮನ್ನು ನವಯುಗದ ಗುಲಾಮರನ್ನಾಗಿಟ್ಟುಕೊಳ್ಳಲು ದೇಶದ ಬಂಡವಾಳಶಾಹಿಗಳು, ಆಳ್ವಿಕರು ನಡೆಸುತ್ತಿರುವ ಕುತಂತ್ರಗಳನ್ನು ಮೀರಿ, ಅನ್ಯಾಯಗಳ ವಿರುದ್ಧ ನಿರಂತರ ಹೋರಾಟ ಬೆಳೆಸುತ್ತ, ನೇತಾಜಿ, ಭಗತ್‌ಸಿಂಗ್‌, ಖುದಿರಾಮ ಭೋಸ್‌ ಮುಂತಾದ ಲಕ್ಷಾಂತರ ಕ್ರಾಂತಿಕಾರಿಗಳು ಕಂಡ ಶೋಷಣಾರಹಿತ ಸಮಾಜದ ಕನಸನ್ನು ನನಸು ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಎಐಡಿಎಸ್‌ಒ ಕಾರ್ಯದರ್ಶಿ ಮಲ್ಲಿನಾಥ ಹುಂಡೆಕಲ್‌ ಮಾತನಾಡಿದರು.

ಪಟ್ಟಣದ ಹಿರಿಯ ವೈದ್ಯ ಡಾ| ಎಸ್‌.ವಿ. ಇಂಗಳೇಶ್ವ ಮುಖ್ಯಅತಿಥಿಯಾಗಿದ್ದರು. ಎ.ಡಿ.ವೈ.ಒ ಕಾರ್ಯದರ್ಶಿ ಶರಣು ವಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಎ.ಐ.ಡಿ.ಎಸ್‌.ಒ ಸ್ಥಳೀಯ ಕಾರ್ಯದರ್ಶಿ ಮಲ್ಲಿನಾಥ ಹುಂಡೆಕಲ್‌ ಮಾತನಾಡಿದರು. ಎ.ಐ.ಡಿ.ವೈ.ಒ ಸ್ಥಳೀಯ ಕಾರ್ಯದರ್ಶಿ ಶರಣು ವಿ.ಕೆ. ಅಧ್ಯಕ್ಷತೆ ವಹಿಸಿದ್ದರು.

ಎಸ್‌ಯುಸಿಐ ಸ್ಥಳೀಯ ಸಮಿತಿ ಕಾರ್ಯದರ್ಶಿ ಆರ್‌. ಕೆ. ವೀರಭದ್ರಪ್ಪ, ಎಐಡಿಎಸ್‌ಒ ಅಧ್ಯಕ್ಷ ಶರಣು ಹೇರೂರ, ಗುಂಡಣ್ಣ ಎಂ.ಕೆ., ರಾಘವೇಂದ್ರ ಅಲ್ಲಿಪುರ, ವೀರಭದ್ರಪ್ಪ ಕೇಶ್ವರ, ಶಿವಕುಮಾರ ಆಂದೋಲಾ, ಮಲ್ಲಣ್ಣ ದಂಡಬಾ, ಶರಣು ದೋಶಟ್ಟಿ. ಶ್ರೀ ಶರಣ ಹೊಸಮನಿ, ಗೌತಮ ಪರತೂರಕರ, ಆರ್‌.ಜಿ. ವೆಂಕಟೇಶ, ರಾಜು ಒಡೆಯರ, ದೌಲಪ್ಪ ದೊರೆ, ಶ್ರೀಶೈಲ ಕೆಂಚಗುಂಡಿ ಪಾಲ್ಗೊಂಡಿದ್ದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶರತ್‌ ಚಂದ್ರ ಚಟರ್ಜಿಯವರ ಕಥೆಯಾಧಾರಿತ ಮಹೇಶ ನಾಟಕ, ನೇತಾಜಿ ಜೀವನ ಹೋರಾಟ ರೂಪಕ, ಕೋಲಾಟ ಪ್ರದರ್ಶನವಾಯಿತು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.