ಜೀವನ ಸಂದೇಶ ಶ್ರವಣಕ್ಕೆ ಜನಸಾಗರ


Team Udayavani, Feb 5, 2018, 10:27 AM IST

gul-3.jpg

ಕಲಬುರಗಿ: ನಡುಗುವ ಚಳಿ ನಡುವೆ ಬೆಳಗಿನ ಜಾವ 5.30ರ ಸುಮಾರಿಗೆ ಬಹುತೇಕ ಎಲ್ಲ ರಸ್ತೆಗಳು ಕಳೆದ ಜ. 16ರಿಂದ ನೂತನ ವಿದ್ಯಾಲಯಕ್ಕೆ ಬಂದು ಸೇರುತ್ತಿವೆ. ಇಷ್ಟು ಬೆಳಗಿನ ಜಾವ ಅದು ನಡುಗುವ ಚಳಿ ನಡುವೆ ಜನರು ನಗರದ ಬಹುತೇಕ ಎಲ್ಲ ರಸ್ತೆಗಳ ಮೂಲಕ ಆಗಮಿಸಿ ಬಂದು ಸೇರುತ್ತಿದ್ದಾರೆ.

ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಾತ್ಮಿಕ ಗುರು ಸಿದ್ದೇಶ್ವರ ಸ್ವಾಮೀಜಿ ಅವರಿಂದ ಪ್ರತಿದಿನ ಬೆಳಗ್ಗೆ 6:00ಕ್ಕೆ ಆಧ್ಯಾತ್ಮಿಕ ಚಿಂತನ, ಬದುಕಿನ ಮೌಲ್ಯಗಳ ಕುರಿತು ಪ್ರವಚನ ನಡೆಯುತ್ತಿರುವುದರಿಂದ ಜನರು ಅತ್ಯಂತ ಉತ್ಸುಕತೆಯಿಂದ ಪಾಲ್ಗೊಳ್ಳುತ್ತಿರುವುದು ಕಂಡು ಬರುತ್ತಿದೆ. 10-15ನೇ ನಿಮಿಷದ ಅವಧಿಯಲ್ಲಿ ಮೈದಾನ ತುಂಬುವಷ್ಟು ಜನರು ಬಂದು ಪೂಜ್ಯರ ಸಂದೇಶ ಆಲಿಸುತ್ತಿದ್ದಾರೆ. ಸಿದ್ದೇಶ್ವರ ಪೂಜ್ಯರ ಪ್ರವಚನ ಜನರಲ್ಲಿ ಬಾರಿ ಪರಿಣಾಮ ಬೀರಿದೆ.

ರಾಜ್ಯಸಭಾ ಸದಸ್ಯ ಡಾ| ಬಸವರಾಜ ಪಾಟೀಲ ಸೇಡಂ, ಸಮಾಜ ಸೇವಕ ಉಮೇಶ ಶೆಟ್ಟಿ ಅವರ ಆಸಕ್ತಿ ಹಾಗೂ ಆಧ್ಯಾತ್ಮಿಕ ಪ್ರವಚನಾ ಸೇವಾ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಆರ್‌. ಗರೂರ, ಸದಸ್ಯರಾದ ಜಂಬನಗೌಡ ಶೀಲವಂತರ, ಶಿವಾನಂದ ಪಾಟೀಲ ಅಷ್ಠಗಿ, ಅಪ್ಪು ಕಣಕಿ, ಈರಣ್ಣ ಗೋಳೆದ, ಅಂಬಾರಾಯ ಡಿಗ್ಗಿಕರ್‌, ಪೂಜಾರಿ ಸೇರಿದಂತೆ ಮುಂತಾದವರ ಸತತ ಪ್ರಯತ್ನ ಮೇರೆಗೆ ಈಗ ಮೂರನೇ ಬಾರಿಗೆ ಕಲಬುರಗಿ ಮಹಾನಗರದಲ್ಲಿ ಜ್ಞಾನಯೋಗಿಗಳ ಪ್ರವಚನ ನಡೆಯುತ್ತಿದೆ. ಈ ಹಿಂದೆ 2008ರ ಅಕ್ಕೋಬರ್‌ನಲ್ಲಿ ಮೊದಲ ಬಾರಿಗೆ ಹಾಗೂ 2010 ಡಿಸೆಂಬರ್‌ರಲ್ಲಿ ಎರಡನೇ ಸಲವೂ ಇದೇ ನೂತನ ವಿದ್ಯಾಲಯ ಮೈದಾನದಲ್ಲಿ ಪ್ರವಚನ ನಡೆದಿತ್ತು. ಈಗ ಜನವರಿ ತಿಂಗಳಿನಿಂದ ನಡೆದು ಬರುತ್ತಿದೆ.

ಬದುಕಿನ ಮೌಲ್ಯ: ಸಿದ್ದೇಶ್ವರ ಶ್ರೀಗಳ ಪ್ರವಚನ ವಿಷಯ ಬಹುತೇಕವಾಗಿ ಪರಿಸರ ಹಾಗೂ ಬದುಕಿಗೆ ಸಂಬಂಧಿಸಿರುತ್ತದೆ. ನೆಮ್ಮದಿಯಿಂದ ಬದುಕು ಸಾಗಿಸಲು ಅನುಸರಿಸಬೇಕಾದ ಸರಳ ಗುಣತ್ವವನ್ನು ಒತ್ತಿ ಹೇಳುತ್ತಿರುವುದು ಹಾಗೂ ನೆಮ್ಮದಿ ಜೀವನ ಸಾಗಿಸುವ ನಿಟ್ಟಿನ ವಾಸ್ತವಾಂಶಗಳನ್ನು ಮನಸ್ಸಿಗೆ ನಾಟುವಂತೆ ಹೇಳುವುದು ಸಹಸ್ರಾರು ಮನ ಸೆಳೆಯಲು ಪ್ರಮುಖ ಕಾರಣವಾಗಿದೆ. ಸಿದ್ದೇಶ್ವರ ಪ್ರವಚನ ಆಲಿಸಲು ಜಿಲ್ಲೆಯ ವಿವಿಧ ಮಠಾಧೀಶರು ಸಹ ನಿತ್ಯ ಆಗಮಿಸುತ್ತಿದ್ದಾರೆ.

ರವಿವಾರ ಮೌನಯೋಗಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳು ಸಹ ಪ್ರವಚನ ಶ್ರವಣಕ್ಕೆ ಆಗಮಿಸಿದ್ದರು.
ಇದಲ್ಲದೇ ಜನಪ್ರತಿನಿಧಿಗಳು, ವೈದ್ಯರು, ನ್ಯಾಯವಾದಿಗಳು ಸೇರಿದಂತೆ ಸಮಾಜದ ಇತರ ವಿವಿಧ ಕ್ಷೇತ್ರಗಳ ಗಣ್ಯರು ಪ್ರವಚನಕ್ಕೆ ತಪ್ಪದೇ ಆಗಮಿಸುತ್ತಿದ್ದು, ದಿನೇ-ದಿನೇ ಜನರ ಪಾಲ್ಗೊಳ್ಳುವಿಕೆ ಹೆಚ್ಚಾಗುತ್ತಿರುವುದು ಆಯೋಜಕರ ಉತ್ಸಾಹ ಇಮ್ಮಡಿಗೊಳಿಸುವಂತಾಗಿದೆ.

ಬೆಳಗ್ಗೆ ನೂತನ ವಿದ್ಯಾಲಯದಲ್ಲಿ ಪ್ರವಚನವಲ್ಲದೇ ಗುಲಬರ್ಗಾ ವಿವಿ ಕೈಲಾಸ ಅತಿಥಿಗೃಹದ ಹೊರಾಂಗಣದಲ್ಲಿ
ಪ್ರತಿದಿನ ಸಂಜೆ 6:00ಕ್ಕೆ ವಿಷಯವೊಂದರಕ್ಕೆ ಸಂಬಂಧಿಸಿದಂತೆ ಚರ್ಚೆಯೂ ನಡೆಯುತ್ತದೆ. ಇದಕ್ಕೂ ಮಹಾನಗರ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದೆ. ಪ್ರತಿ ರವಿವಾರವಂತೆ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಆಂಗ್ಲ ಭಾಷೆಯಲ್ಲಿ ಪ್ರವಚನ ಮಂಡಿಸುತ್ತಾರೆ.

ಒಟ್ಟಾರೆ ಸಿದ್ದೇಶ್ವರ ಪ್ರವಚನ ಕಲಬುರಗಿ ಮಹಾನಗರದಲ್ಲಿ ಸಂಚಲನ ಮೂಡಿಸಿದ್ದು, ಜನ ಜೀವನದಲ್ಲಿ ಬದಲಾವಣೆಯಾದರೆ ಪ್ರವಚನ ಮತ್ತಷ್ಟು ಸಾರ್ಥಕತೆ ಪಡೆದಂತಾಗುತ್ತದೆ. ಫೆ. 16ರವರೆಗೆ ಮಾತ್ರ ಪ್ರವಚನ ನಡೆಯಲಿದ್ದು, ಇನ್ನುಳಿದ ನಾಗರಿಕರು ಆಧ್ಯಾತ್ಮಿಕ ಪ್ರವಚನ ಶ್ರವಣ ಮಾಡಿ ಅದನ್ನು ಜೀವನದಲ್ಲಿ ಅಳವಡಿಸಿಕೊಂಡರೆ
ಅದರಕ್ಕಿಂತ ದೊಡ್ಡದು ಮತ್ತೂಂದಿಲ್ಲ ಏನಿಸುತ್ತದೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.