ಒಬ್ಬರಿಗೆ ಯಜಮಾನಿಕೆ ಕೊಡಿ: ಬಾಬುರಾವ್‌ ಚಿಂಚನಸೂರ


Team Udayavani, Feb 5, 2018, 10:34 AM IST

gul-4.jpg

ಶಹಾಬಾದ: ಕೋಲಿ ಸಮಾಜವನ್ನು ಎಸ್‌ ಟಿಗೆ ಸೇರಿಸುವುದಾಗಿ ಬಹಳಷ್ಟು ನಾಯಕರು ಮುಂದೆ ಬಂದು ದಾರಿ ತಪ್ಪಿಸುತ್ತಿದ್ದಾರೆ. ಇಂಥವರಿಂದ ಎಚ್ಚರಿಕೆಯಿಂದ ಇರಬೇಕು. ಸಮಾಜವನ್ನು ಎಸ್‌ಟಿಗೆ ಸೇರಿಸುವುದಕ್ಕೆ ಒಬ್ಬರಿಗೆ ಯಜಮಾನಿಕೆ ಕೊಡಿ ಎಂದು ಗಡಿನಾಡ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ ಹೇಳಿದರು.

ಗ್ರಾಮೀಣ ಕೋಲಿ ಸಮಾಜದ ವತಿಯಿಂದ ನಗರದ ಪಾರ್ವತಿ ಸಭಾಗೃಹದಲ್ಲಿ ಆಯೋಜಿಸಲಾಗಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತೋತ್ಸವದಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರದ ಒಪ್ಪಿಗೆ ಪಡೆದು ಕೇಂದ್ರಕ್ಕೆ ಶಿಫಾರಸ್ಸು ಮಾಡಿಸುವಲ್ಲಿ ಯಶಸ್ವಿಯಾಗಿದ್ದೇನೆ. ಕೇಂದ್ರದಿಂದ ಕಡತ ನೂರು ಬಾರಿ ಹಿಂದಕ್ಕೆ ಬಂದರೂ ನೂರು ಬಾರಿ ಮತ್ತೆ ಮತ್ತೆ ಕಳುಹಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಗತ್ಯವಿದ್ದಲ್ಲಿ ರಾಷ್ಟ್ರಪತಿ ಅವರನ್ನು ಭೇಟಿಯಾಗುವುದಾಗಿ ಹೇಳಿದರು. 

ಶಾಸಕ ಜಿ.ರಾಮಕೃಷ್ಣ ಮಾತನಾಡಿ, ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೋಲಿ ಸಮಾಜಕ್ಕೆ 20 ಸಮುದಾಯ ಭವನ ನೀಡಲಾಗಿದೆ ಎಂದು ಹೇಳಿದರು. ತೊನಸನಳ್ಳಿ (ಎಸ್‌) ಅಲ್ಲಮ ಪ್ರಭು ಸಂಸ್ಥಾನ ಪೀಠದ ಮಲ್ಲಣ್ಣಪ್ಪ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವನ ನೀಡಿದರು. 

ಸ್ನೇಹ ವಾಹಿನಿ ಕಾರ್ಯಾಧ್ಯಕ್ಷ ಡಾ| ಮಲ್ಲಿಕಾರ್ಜುನ ಮುಕ್ಕಾ, ಉಪನ್ಯಾಸಕ ಡಾ| ಮಲ್ಲಿನಾಥ ತಳವಾರ ಉಪನ್ಯಾಸ ನೀಡಿದರು, ಹೈ.ಕ. ಕೋಲಿ ಸಮಾಜದ ಅಧ್ಯಕ್ಷ ಬಸವರಾಜ ಬೂದಿಹಾಳ, ಯಾದಗಿರಿ ಜಿಲ್ಲಾ ಅಧ್ಯಕ್ಷ ಉಮೇಶ ಮುದ್ನಾಳ, ಜಿಲ್ಲಾ ಟೋಕರೆ ಕೋಳಿ ಸಮಾಜದ ಅಧ್ಯಕ್ಷ ಬಸವರಾಜ ಹರವಾಳ, ಈಕರಸಾ ಸಂಸ್ಥೆ ಮಾಜಿ ಅಧ್ಯಕ್ಷ ಭೀಮಣ್ಣ ಸಾಲಿ, ತಮ್ಮಣ್ಣ ಡಿಗ್ಗಿ, ನಗರಸಭೆ ಮಾಜಿ ಅಧ್ಯಕ್ಷ ಶರಣಪ್ಪ ಹದನೂರ ಮಾತನಾಡಿದರು.

ಡಿಸಿಸಿ ಕಾರ್ಯದರ್ಶಿ ಶ್ಯಾಮ ನಾಟೀಕಾರ, ಬಿಜೆಪಿ ಮುಖಂಡ ನೀಲಕಂಠ ಪಾಟೀಲ, ನಗರಸಭೆ ಅಧ್ಯಕ್ಷೆ ಗೀತಾ ಎಸ್‌. ಬೊಗುಂಡಿ, ವೀರಶೈವ ಸಮಾಜದ ಅಧ್ಯಕ್ಷ ಅನೀಲ ಮರಗೋಳ, ನಿವೃತ್ತ ಡಿವೈಎಸ್‌ಪಿ ಸಿದ್ರಾಮಪ್ಪ ಸಣ್ಣೂರಕರ್‌, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಡಾ| ಅಹ್ಮದ್‌ ಪಟೇಲ್‌, ಸದಸ್ಯರಾದ ಸಾಬಣ್ಣ ಬೆಳಗುಂಪಿ, ಸೂರ್ಯಕಾಂತ ಕೋಬಾಳ, ತಾಪಂ ಸದಸ್ಯ ಮಲ್ಲಣ್ಣ ಸಣಮೋ, ಅಂಜನಕುಮಾರ ಜೀವಣಗಿ, ಸುರೇಶ ಮೆಂಗನ್‌, ನಾಗರಾಜ
ಮೇಲಗಿರಿ, ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೇಗನೂರ, ಜೆಡಿಎಸ್‌ ಕಾರ್ಯದರ್ಶಿ ಲೋಹಿತ ಕಟ್ಟಿ,  ಯವಾದಿಗಳಾದ
ರಘುವೀರಸಿಂಗ್‌ ಠಾಕೂರ, ಭೀಮಾಶಂಕರ ದಂಡಗುಲಕರ್‌, ಸಮಾಜದ ತಾಲೂಕ ಯುವ ಅಧ್ಯಕ್ಷ ಶಿವುಕುಮಾರ ಸುಣಗಾರ, ಸಾಬಣ್ಣ ಜಾಲಗಾರ ಪಾಲ್ಗೊಂಡಿದ್ದರು. ನಿಂಗಣ್ಣ ಹುಳಗೋಳ ಅಧ್ಯಕ್ಷತೆ ವಹಿಸಿದ್ದರು. ಸಿದ್ದಲಿಂಗಪ್ಪ ಖಣದಾಳ ಸ್ವಾಗತಿಸಿದರು. ಅಂಬರೀಷ ಪಾಟೀಲ ನಿರೂಪಿಸಿದರು. ಶಿವುಕುಮಾರ ತಳವಾರ ವಂದಿಸಿದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.