ಸದೃಢ ವ್ಯಕ್ತಿತ್ವಕ್ಕೆ ಕರಾಟೆ ಪೂರಕ: ಬಿಇಒ ದೊಡ್ಡರಂಗಪ್ಪ
Team Udayavani, Feb 5, 2018, 12:07 PM IST
ಚಿತ್ತಾಪುರ: ಪ್ರೌಢಶಾಲೆ ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ, ಆತ್ಮಸ್ಥೈರ್ಯ, ಶಿಸ್ತು, ಸಂಯಮ, ಏಕಾಗ್ರತೆ ವೃದ್ಧಿಯಾಗಿ ಸದೃಢ ವ್ಯಕ್ತಿತ್ವ ರೂಪಿಸಿಕೊಳ್ಳಲು ಕರಾಟೆ ತರಬೇತಿ ಪೂರಕವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡರಂಗಪ್ಪ ಹೇಳಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಕಲಬುರಗಿ ಮತ್ತು ಟೆಂಕ್ವಾಂಡೋ ಕರಾಟೆ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೌಢಶಾಲೆ
ವಿದ್ಯಾರ್ಥಿನಿಯರ ಕರಾಟೆ ಪ್ರದರ್ಶನ ಮತ್ತು ಬಹುಮಾನ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ
ಪ್ರತಿಕೂಲ ಸನ್ನಿವೇಶಗಳಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಮರ್ಥರನ್ನಾಗಿಸಲು ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಕರಾಟೆ ಮೂಲಕ ಸ್ವಯಂ ರಕ್ಷಣಾ ತರಬೇತಿ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಜ್ಜಾಗಿದೆ. ಆದ್ದರಿಂದ ವಿದ್ಯಾರ್ಥಿನಿಯರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಸಿಪಿಐ ಶಂಕರಗೌಡ ಪಾಟೀಲ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ದಬ್ಟಾಳಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಲು
ಸಾರ್ವಜನಿಕರ ಶಿಕ್ಷಣ ಇಲಾಖೆ ಹಾಕಿಕೊಂಡಿರುವ ಹೊಸ ಆಯಾಮವಾಗಿದೆ ಎಂದು ಹೇಳಿದರು.
ಅಸೋಸಿಯೇಷನ್ ಅಧ್ಯಕ್ಷ ಕಾಶಿನಾಥ ಗುತ್ತೇದಾರ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಹೊತಿನಮಡಿ, ಪಿಎಸ್ಐ ಜಗದೇವಪ್ಪ ಪಾಳಾ, ದೈಹಿಕ ಶಿಕ್ಷಣಾಧಿಕಾರಿ ದೇವಿಂದ್ರರೆಡ್ಡಿ ದುಗನೂರ, ಮುಖ್ಯಶಿಕ್ಷಕ ನಾಗೇಂದ್ರಪ್ಪ ಕಾಶಿ, ಅಡತ್ ಬಜಾರ ಎಸ್ಡಿಎಂಸಿ ಅಧ್ಯಕ್ಷ ರಾಮು ಹರವಾಳ, ಉದ್ಯಮಿ ಸತೀಶ ಕಾಂತಾ, ಕರಾಟೆ ತರಬೇತಿದಾರರಾದ ಸಾಬಯ್ಯ ಭೋಸಗಿ, ರಮೇಶ ಭೋಸಗಿ, ಮಾರುತಿ ಭೋಸಗಿ, ಚಂದ್ರಕಾಂತ ಟಲಾಕುಂಟಿ, ಸಂಜುಕುಮಾರ ಚೌದ್ರಿ, ರಾಘವೇಂದ್ರ ಭಜಂತ್ರಿ, ಗಂಗಾಧರ ಹೊಟ್ಟಿ ಹಾಗೂ ಚಿತ್ತಾಪುರ, ದಿಗ್ಗಾಂವ, ಅಳ್ಳೋಳ್ಳಿ, ಡೋಣಗಾಂವ, ಅಲ್ಲೂರ ಬಿ., ಭೀಮನಳ್ಳಿ, ಯಾಗಾಪುರ, ಭಾಗೋಡಿ, ವಾಡಿ ಪ್ರೌಢಶಾಲೆಗಳ ವಿದ್ಯಾರ್ಥಿನಿಯರು, ಶಿಕ್ಷಕರು ಭಾಗವಹಿಸಿದ್ದರು.
ಕರಾಟೆ ಮುಖ್ಯ ತರಬೇತುದಾರ ವಿಜಯಕುಮಾರ ಹರವಾಳ ಪ್ರಾಸ್ತಾವಿಕ ಮಾತನಾಡಿದರು. ಸಿದ್ರಾಮ ಭೋವಿ ಸ್ವಾಗತಿಸಿದರು, ಅಯ್ಯಣ್ಣ ಅಲ್ಲಂ ನಿರೂಪಿಸಿದರು. ಬಸವರಾಜ ಯಂಬತ್ನಾಳ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್