ಜೇವರ್ಗಿಯಲ್ಲಿ ಗಿಡಗಳು ದಿಢೀರ್ ಪ್ರತ್ಯಕ್ಷ
Team Udayavani, Feb 10, 2018, 11:58 AM IST
ಜೇವರ್ಗಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫೆ.12ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ತರಾತುರಿಯಲ್ಲಿ
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಶುಕ್ರವಾರ ಪಟ್ಟಣದ ಜನರಿಗೆ ಅಚ್ಚರಿಯೊಂದು ಕಾದಿತ್ತು. ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮುಖ್ಯ ರಸ್ತೆ ವಿಭಜಕಗಳ ಮಧ್ಯೆ ದಿಢೀರ್ ಗಿಡಗಳು ಪ್ರತ್ಯಕ್ಷವಾಗಿದ್ದವು. ಪಟ್ಟಣದ ರಿಲಾಯನ್ಸ್ ಪೆಟ್ರೋಲ್ ಬಂಕ್ನಿಂದ ಬಸವೇಶ್ವರ ವೃತ್ತದ ವರೆಗೆ ಗಿಡ ನೆಡಲಾಗಿದೆ.
ತರಾತುರಿಯಲ್ಲಿ ಗಿಡ ನೆಡುವುದರ ಜತೆಗೆ ಹೈದ್ರಾಬಾದ-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 1.08 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ವಿದ್ಯುತ್ ಕಂಬಗಳೊಂದಿಗೆ ಎಲ್ಇಡಿ ಬಲ್ಬ್ ಅಳವಡಿಸುವ ಕಾರ್ಯಕ್ಕೂ ಚಾಲನೆ ನೀಡಲಾಗಿದೆ. ಕಳೆದ 4 ವರ್ಷಗಳಲ್ಲಿ ನಡೆಯದ ಕಾಮಗಾರಿಗಳನ್ನು ದಿಢೀರ್ ಕೈಗೆತ್ತಿಕೊಂಡ ಶಾಸಕರ ನಡೆಗೆ ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಹಾಗೂ ಬಿಜೆಪಿ ಜಿಪಂ ಸದಸ್ಯ ಶಿವರಾಜ ಪಾಟೀಲ ರದ್ದೇವಾಡಗಿ ಆಕ್ಷೇಪವ್ಯಕ್ತ ಪಡಿಸಿದ್ದಾರೆ. ರಾಹುಲ್ ಗಾಂಧಿ ಆಗಮನಕ್ಕೂ ಗಿಡ ನೆಡುತ್ತಿರುವುದಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ನಗರ ಸೌಂದರ್ಯಿಕರಣವಾಗಬೇಕು ಎಂಬ ಉದ್ದೇಶದಿಂದ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಯಾವುದೇ ಸರ್ಕಾರದ ಅನುದಾನದಲ್ಲಿ ಈ ಕೆಲಸ ಮಾಡುತ್ತಿಲ್ಲ. ಬದಲಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಗಿಡ ನೆಡಲಾಗುತ್ತಿದೆ ಎಂದು ಶಾಸಕ ಡಾ| ಅಜಯಸಿಂಗ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್