ರಾಹುಲ್‌ ಸ್ವಾಗತಕ್ಕೆ ಕಲಬುರಗಿ ಸಜ್ಜು


Team Udayavani, Feb 12, 2018, 10:02 AM IST

gul-1.jpg

ಕಲಬುರಗಿ: ಅಖೀಲ ಭಾರತ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ, ಸಂಸದ ರಾಹುಲ್‌ ಗಾಂಧಿ ಸ್ವಾಗತಕ್ಕೆ ಕಲಬುರಗಿ ಜಿಲ್ಲೆ ಸಜ್ಜಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಜಿಲ್ಲೆಯ ಜೇವರ್ಗಿ ಪಟ್ಟಣ ಹಾಗೂ ನಗರದ ನೂತನ ಮಹಾವಿದ್ಯಾಲಯದಲ್ಲಿ ಫೆ. 12ರಂದು ಜನಾಶೀರ್ವಾದ ಯಾತ್ರೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಎಐಸಿಸಿ ಅಧ್ಯಕ್ಷರಾದ ನಂತರ ಪ್ರಥಮ ಬಾರಿಗೆ ಹೈದ್ರಾಬಾದ್‌ ಕರ್ನಾಟಕ ಭಾಗದ ಮೂಲಕ ಪ್ರವೇಶಿಸಿ ಜನಾಶೀರ್ವಾದ ಆರಂಭಿಸಿದ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ತೀವ್ರ ಸಂಚಲನ ಮೂಡಿದೆ. ಹೀಗಾಗಿ ರಾಹುಲ್‌ ಸ್ವಾಗತಕ್ಕೆ ಕಾತರದಿಂದ ಎದುರು ನೋಡುವಂತಾಗಿದೆ. 

ರಾಹುಲ್‌ ಗಾಂಧಿ ಸ್ವಾಗತಕ್ಕಾಗಿ ಜೇವರ್ಗಿ ಹಾಗೂ ಮಹಾನಗರದಲ್ಲಿ ಬೃಹದಾಕಾರದ ಸ್ವಾಗತ ಕಮಾನು ಹಾಗೂ ಕಟೌಟ್‌ ನಿಲ್ಲಿಸಲಾಗಿದೆ.  ಒಂದು ತರಹ ಹಬ್ಬದಂತೆ ವಾತಾವರಣ ನಿರ್ಮಾಣಗೊಂಡಿದೆ. ರಾಹುಲ್‌ ಗಾಂಧಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಾ| ಜಿ. ಪರಮೇಶ್ವರ, ಕರ್ನಾಟಕದ ಉಸ್ತುವಾರಿ ಕೆ.ಸಿ. ವೇಣುಗೋಪಾಲ, ಲೋಕಸಭೆಯಲ್ಲಿನ ಕಾಂಗ್ರೆಸ್‌ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ್‌ ಖರ್ಗೆ, ಸಚಿವರಾದ ಡಿ.ಕೆ. ಶಿವಕುಮಾರ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ.
 
ಇದೇ ನೂತನ ವಿದ್ಯಾಲಯ ಮೈದಾನದಲ್ಲಿ 2009ರಲ್ಲಿ ರಾಹುಲ್‌ ಗಾಂಧಿ ಅವರು ಹೈದ್ರಾಬಾದ್‌ ಕರ್ನಾಟಕ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವ ಸಂವಿಧಾನ 371ನೇ (ಜೆ) ವಿಧಿ ಜಾರಿ ಮಾಡುವುದಾಗಿ ಹೇಳಿದ್ದರು. ಅವರ ನಡೆಯಂತೆ ಮುಂದಿನ ದಿನಗಳಲ್ಲಿ ಸಂವಿಧಾನ 371ನೇ(ಜೆ) ವಿಧಿ ಜಾರಿಗೆ ಬಂತು. ಈಗ ಏನು ಭರವಸೆ ಕೊಡ್ತಾರೆ ಎಂಬುದನ್ನು ಜನ ಕಾತರದಿಂದ ಕಾಯುತ್ತಿದ್ದಾರೆ. 

ಈ ಹಿಂದೆ 1978-79ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಜೇವರ್ಗಿಗೆ ಆಗಮಿಸಿದ್ದರು. ಆಗ ತಮ್ಮ ತಂದೆ ಧರ್ಮಸಿಂಗ್‌ ಅವರು ಪ್ರಥಮ ಸಲ ಶಾಸಕರಾಗಿದ್ದರು. 40 ವರ್ಷಗಳ ನಂತರ ಈಗ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಅವರು ಆಗಮಿಸುತ್ತಿದ್ದಾರೆ. ತಾವೂ ಈಗ ಪ್ರಥಮ ಸಲ ಶಾಸಕರಾಗಿದ್ದು, ಆವಾಗ ಇಂದಿರಾಗಾಂಧಿ ಅವರು ಜೇವರ್ಗಿಗೆ ಬಂದ ನಂತರ ರಾಜಕೀಯದಲ್ಲಿ ಮತ್ತೆ ಅಧಿಕಾರ ಗದ್ದುಗೆ ಏರಿದರು. ಈಗಲೂ ರಾಹುಲ್‌ ಗಾಂಧಿ ಅವರು ಭವಿಷ್ಯದ ನಾಯಕರಾಗಲಿದ್ದಾರೆ ಎಂದು ಜೇವರ್ಗಿ ಶಾಸಕ ಡಾ| ಅಜಯಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಜೇವರ್ಗಿ ಪಟ್ಟಣಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರು ಸೋಮವಾರ ಆಗಮಿಸುತ್ತಿರುವುದು ಕ್ಷೇತ್ರದ ಸೌಭಾಗ್ಯವಾಗಿದೆ. ವೈಯಕ್ತಿಕವಾಗಿ ನನಗೆ ಸಂಭ್ರಮ ತಂದಿದೆ. ತಂದೆ, ಮಾಜಿ ಮುಖ್ಯಮಂತ್ರಿ ದಿ| ಧರ್ಮಸಿಂಗ್‌ ಅವರು ಶಾಸಕರಿದ್ದ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ನಂತರ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು 1977-1978ರಲ್ಲಿ ರಸ್ತೆ ಮೂಲಕವೇ ಕಲಬುರ್ಗಿಗೆ ಆಗಮಿಸಿ, ಅಲ್ಲಿಂದ ಜೇವರ್ಗಿ, ಶಹಾಪುರ, ಹತ್ತಿಗುಡೂರ, ರಾಯಚೂರಿಗೆ ತೆರಳಿದ್ದರು.

ಸೋಮವಾರ ರಾಹುಲ್‌ಗಾಂಧಿ ಅವರು ಭೇಟಿ ನೀಡುವ ಮೂಲಕ ಗತವೈಭವ ನೆನಪಿಸುತ್ತಿದ್ದಾರೆ ಎಂದು ಶಾಸಕರು ವಿವರಿಸಿದರು. ರಾಹುಲ್‌ ಗಾಂಧಿ ಅವರ ಬಹಿರಂಗ ಸಭೆಗೆ 40 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಶಾಸಕ ಡಾ| ಅಜಯಸಿಂಗ್‌ ಧರ್ಮಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.