ಅಚ್ಚೆದಿನ್ ಹೆಸರಲ್ಲಿ ಬಿಜೆಪಿ ಸುಳ್ಳು
Team Udayavani, Feb 19, 2018, 10:55 AM IST
ವಾಡಿ: ಮೇಕಿನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಕಿಲ್ ಇಂಡಿಯಾ ಎಂದು ಹೇಳುತ್ತಾ ಬಿಜೆಪಿಯವರು ದೇಶದ
ಜನರಲ್ಲಿ ಭ್ರಮೆ ಸೃಷ್ಟಿಸಿದ್ದಾರೆ. ಅಚ್ಚೆದಿನ್ ಹೆಸರಿನಲ್ಲಿ ಪ್ರಧಾನಿ ಮೋದಿ ಅವರು ಸುಳ್ಳು ಸಾರಿದ್ದಾರೆ ಎಂದು ಐಟಿಬಿಟಿ
ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ 32 ಕೋಟಿ ರೂ. ಅನುದಾನದ 76 ಅಭಿವೃದ್ಧಿ ಕಾಮಗಾರಿ
ಉದ್ಘಾಟನೆ ಹಾಗೂ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು. ಬುದ್ಧ, ಬಸವ ಹಾಗೂ ಅಂಬೇಡ್ಕರ್ ತತ್ವಗಳ ಮೇಲೆ ನಡೆಯುತ್ತಿರುವ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದು ಜನರಿಗೆ ಸಚ್ಚೆದಿನ್ ಕೊಟ್ಟಿದೆ. ಬಿಜೆಪಿ ಸುಳ್ಳಿನ ರಾಜಕೀಯ ಮಾಡುತ್ತಿದೆ. ವಾಡಿ ಅಭಿವೃದ್ಧಿಗೆ ನಾನು 83 ಕೋಟಿ ಅನುದಾನ ನೀಡಿದ್ದೇನೆ ಎಂದು ಹೇಳಿದರು.
ಆರ್ಎಸ್ಎಸ್ನವರು ದೇಶದ ತ್ರಿವರ್ಣ ಧ್ವಜ ಮತ್ತು ಸಂವಿಧಾನ ಒಪ್ಪಿಕೊಂಡಿಲ್ಲ. ಸ್ವಾತಂತ್ರ್ಯಕ್ಕಾಗಿ ರಕ್ತ ಹರಿಸುವುದಿರಲಿ ಹನಿ ಬೆವರು ಸುರಿಸಿಲ್ಲ. ಪ್ರತಿಯೊಬ್ಬರ ಖಾತೆಯಲ್ಲಿ 15 ಲಕ್ಷ ರೂ. ಹಾಕುವುದಾಗಿ ಹೇಳಿ 15 ರೂ. ಹಾಕಿಲ್ಲ. ಜನರು ಕೂಡಿಟ್ಟ ಹಣವನ್ನೆಲ್ಲ ಉದ್ಯಮಿಪತಿಗಳಿಗೆ ಕೊಟ್ಟಿದ್ದಾರೆ ಎಂದು ದೂರಿದ ಪ್ರಿಯಾಂಕ್, ಬಿಜೆಪಿಯವರಿಗೆ ಜಾತಿ ಅಸ್ಪೈಶ್ಯತೆ ನೋವಿನ ಅರಿವಿಲ್ಲ. ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಕೊಲೆ-ಹಿಂಸಾ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ದೂರಿದರು.
ಮುಖಂಡರಾದ ಟೋಪಣ್ಣ ಕೋಮಟೆ, ಪುರಸಭೆ ಸದಸ್ಯ ದೇವಿಂದ್ರ ಕರದಳ್ಳಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ
ಮೈನಾಬಾಯಿ ಗೋಪಾಲ ರಾಠೊಡ, ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಮುಖ್ಯಾಧಿಕಾರಿ ಕೆ. ಮಲ್ಲೇಶ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಜಿಪಂ ಸದಸ್ಯರಾದ ಶಿವುರುದ್ರ ಭೀಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೆಮೂದ್ ಸಾಹೇಬ, ಭೀಮಣ್ಣ ಸಾಲಿ, ಜಾಫರ್ ಪಟೇಲ, ಶಂಕ್ರಯ್ಯಸ್ವಾಮಿ, ಶರಣು ನಾಟೀಕಾರ, ಬಶೀರ್ ಖುರೇಶಿ, ಭೀಮಶಾ ಜಿರೊಳ್ಳಿ, ವೀರಣ್ಣಗೌಡ ಪರಸರೆಡ್ಡಿ, ಅಣ್ಣಾರಾಯಗೌಡ ಪಾಟೀಲ ಪಾಲ್ಗೊಂಡಿದ್ದರು.
ಕಾಶೀನಾಥ ಧನ್ನಿ ಸ್ವಾಗತಿಸಿದರು. ಇದಕ್ಕೂ ಮೊದಲು ಬಳಿರಾಮ ವೃತ್ತದಿಂದ ಸಚಿವ ಖರ್ಗೆ ಅವರನ್ನು ಸಾರೋಟಿನಲ್ಲಿ ಮೆರವಣಿಗೆ ಮಾಡಲಾಯಿತು. 543 ಆಶ್ರಯ ನಿವೇಶನಗಳ ಅಡಿಗಲ್ಲು ಜತೆಗೆ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಲಾಯಿತು.
ಪ್ರತಿಭಟನೆ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರು ದಲಿತ
ಸೇನೆ ಕಾರ್ಯಕರ್ತರ ಪ್ರತಿಭಟನೆ ಎದುರಿಸಬೇಕಾಯಿತು. ಸೇನೆ ಜಿಲ್ಲಾ ಉಪಾಧ್ಯಕ್ಷ ಶ್ರವಣಕುಮಾರ ಮೌಸಲಗಿ
ನೇತೃತ್ವದಲ್ಲಿ ಸಚಿವರಿಗೆ ಮನವಿ ಕೊಡಲು ಮುಂದಾದ ಕಾರ್ಯಕರ್ತರು, ಸ್ಥಳೀಯ ಎಸಿಸಿ ಸಿಮೆಂಟ್ ಕಂಪನಿಯಲ್ಲಿ
ಯುವಕರಿಗೆ ಉದ್ಯೋಗ ಕೊಡಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ಪೊಲೀಸರು ಪ್ರತಿಭಟನಾಕಾರರನ್ನು
ಚದುರಿಸಿದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ