ಕೊನೆಗೆ ಹಂತದಲ್ಲಿ ಜೆಡಿಎಸ್‌ ಟಿಕೆಟ್‌ ಸಿಗುವ ವಿಶ್ವಾಸ


Team Udayavani, Feb 21, 2018, 10:33 AM IST

gul-4.jpg

ಕಲಬುರಗಿ: ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಒಂದು ವರ್ಷದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿ ಹತ್ತು ಸಾವಿರಕ್ಕೂ ಹೆಚ್ಚು ಮತದಾರರನ್ನು ಸಂಘಟಿಸಲಾಗಿದೆಯಲ್ಲದೇ ಕಳೆದ 9 ತಿಂಗಳಿನಿಂದ ಕುಮಾರಣ್ಣ ಕಾರ್ಯಕ್ರಮ ಮನೆ-ಮನೆ ತಲುಪಿಸಲಾಗಿ ಪ್ರಬಲ ಆಕಾಂಕ್ಷಿಯಾಗಿರುತ್ತೇನೆ.

ಆದರೆ ಈಗ ಪಕ್ಷ ಸೇರಿದ ದಿನವೇ ಬಸವರಾಜ ಡಿಗ್ಗಾವಿ ಪಕ್ಷದ ಟಿಕೆಟ್‌ ಘೋಷಣೆ ಮಾಡಿರುವುದು ತುಂಬಾ ನೋವುಂಟಾಗಿದೆ ಎಂದು ಜೆಡಿಎಸ್‌ ರಾಜ್ಯ ಯುವ ಉಪಾಧ್ಯಕ್ಷ ಕೃಷ್ಣಾರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ದಕ್ಷಿಣದಲ್ಲಿ ತಾವು ಹಾಗೂ ಸುರೇಶ ಮಹಾಗಾಂವಕರ ಆಕಾಂಕ್ಷಿಗಳಾಗಿದ್ದೇವೆ. 

ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್‌ ನೀಡಿದ್ದರೆ ಅಸಮಾಧಾನ ಆಗುತ್ತಿರಲಿಲ್ಲ. ಜತೆಗೆ ಪಕ್ಷದ ವರಿಷ್ಠರಾದ ಎಚ್‌.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ತಮ್ಮನ್ನು ವಿಶ್ವಾಸ ತೆಗೆದುಕೊಂಡು ಟಿಕೆಟ್‌ ಘೋಷಣೆ ಮಾಡಿದ್ದರೆ ತಮ್ಮ ಮನಸ್ಸಿಗೆ ಘಾಸಿ ಉಂಟಾಗುತ್ತಿರಲಿಲ್ಲ. ಈಗ ಮುಂದೇನು ಮಾಡಬೇಕೆಂಬುದನ್ನು ಬೆಂಬಲಿಗರ ಸಭೆ ಕರೆದು ನಿರ್ಧರಿಸುತ್ತೇನೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಜರುಗಿದ ಬಹಜನ ಸಮಾಜ ಪಕ್ಷ ಹಾಗೂ ಜಾತ್ಯಾತೀತ ಜನತಾದಳದ ಸಮಾವೇಶದಲ್ಲಿ ಹಠಾತ್ತನೇ
ಕಾಣಿಸಿಕೊಂಡ ಶ್ರೀಗುರು ವಿದ್ಯಾಪೀಠದ ಬಸವರಾಜ್‌ ಡಿಗ್ಗಾವಿ ಅವರಿಗೆ ಜೆಡಿ(ಎಸ್‌) ಪಕ್ಷದಿಂದ ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್‌ ನೀಡಿದ್ದು ಸರಿಯಲ್ಲ. ಡಿಗ್ಗಾವಿ ಅವರು ಪಕ್ಷದ ಸದಸ್ಯರೂ ಅಲ್ಲ. ಅವರ ಹೆಸರನ್ನು ಈಗಲೇ ನಾನು ಕೇಳುತ್ತಿದ್ದೇನೆ. ಇನ್ನೂವರೆಗೂ ಅವರ ಮುಖ ಸಹ ನೋಡಿಲ್ಲ. ಅಂತಹ ವ್ಯಕ್ತಿಗೆ ವರಿಷ್ಠರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಟಿಕೆಟ್‌ ಕೊಟ್ಟಿದ್ದಾರೆ. 

ಡಿಗ್ಗಾವಿ ಅವರಿಗೆ ಟಿಕೆಟ್‌ ಸಿಕ್ಕ ಸುದ್ದಿ ತಿಳಿಯುತ್ತಿದ್ದಂತೆಯೇ ನನಗೆ ಹಲವಾರು ಬೆಂಬಲಿಗರು ಮೊಬೈಲ್‌ ಮೂಲಕ ಕರೆ
ಮಾಡಿ ಎಷ್ಟು ಹಣ ತೆಗೆದುಕೊಂಡು ಸುಮ್ಮನಿದ್ದೀರಿ ಎಂದು ಕೇಳುತ್ತಿದ್ದಾರೆ. ಆದ್ದರಿಂದ ಬೆಂಬಲಿಗರಿಗೆ ನಿಜವಾದ ಸಂಗತಿ ತಿಳಿಸಲು ಸಭೆ ಕರೆಯಲಾಗಿದೆಯಲ್ಲದೇ ವರಿಷ್ಠರ ಬಳಿ ತೆರಳಲು ನಿರ್ಧರಿಸಲಾಗಿದೆ ಎಂದು ವಿವರಣೆ ನೀಡಿದರು. ಶಿವಲಿಂಗಯ್ಯಸ್ವಾಮಿ ಸಾವಳಗಿ, ಸೋಮನಾಥ್‌ ರೆಡ್ಡಿ, ಲಾಲ್‌ ಮೊಹ್ಮದ್‌, ನಬಿ ಪಟೇಲ್‌, ಶಿವಲಿಂಗಪ್ಪ ಪಾಟೀಲ್‌ ಇದ್ದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.