ಸರ್ವಜ್ಞರ ವಚನ ಸಾರ್ವಕಾಲಿಕ


Team Udayavani, Feb 21, 2018, 11:05 AM IST

gul-7.jpg

ಚಿತ್ತಾಪುರ: ತ್ರಿಪದಿ ಕವಿ ಸರ್ವಜ್ಞರ ವಚನಗಳು  ಸಾರ್ವಕಾಲಿಕವಾಗಿವೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಗೌರವ ಕಾರ್ಯದರ್ಶಿ ಸಿದ್ಧಲಿಂಗ ಬಾಳಿ ಹೇಳಿದರು.

ಪಟ್ಟಣದ ತಹಶೀಲ್‌ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಮಂಗಳವಾರ ನಡೆದ ಸರ್ವಜ್ಞ ಜಯಂತಿ
ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಸರ್ವಜ್ಞರ ವಚನಗಳು ವಿಶ್ವದಲ್ಲಿ ಶ್ರೇಷ್ಠವಾಗಿವೆ. ಎಲ್ಲವನ್ನು ಬಲ್ಲವನೇ
ಸರ್ವಜ್ಞ. ಅವರು ನೇರವಾಗಿ ನುಡಿಯುವ ಕವಿಯಾಗಿದ್ದರು. ಅವರ ವಚನಗಳಲ್ಲಿ ಆರೋಗ್ಯದ ಕುರಿತು ಸೂತ್ರಗಳು
ಅಡಗಿದ್ದವು. ಮಕ್ಕಳಿಗೆ ಅವರ ವಚನಗಳು ದಾರಿ ದೀಪವಾಗಿವೆ. ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿ ಬದುಕು ನಡೆಸಬಹುದೆಂದು ಹೇಳಿದರು.

ತಾಲೂಕು ಕುಂಬಾರ ಸಮಾಜ ಅಧ್ಯಕ್ಷ ಹಾಗೂ ರಾಜ್ಯ ಕುಂಬಾರರ ಯುವ ಸೈನ್ಯ ರಾಜ್ಯಾಧ್ಯಕ್ಷ ಜಗದೇವ ಕುಂಬಾರ
ಮಾತನಾಡಿದರು. ಗ್ರೇಡ್‌-2 ತಹಶೀಲ್ದಾರ್‌ ರವೀಂದ್ರ ದಾಮಾ ಉದ್ಘಾಟಿಸಿದರು. 

ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಹೋತಿನಮಡಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೊಂಡಗಿ, ಗಂಗಾಧರ ಜೆಇ, ಭೀಮಣ್ಣ ಹೋತಿನಮಡಿ, ಶ್ರೀಮಂತ ಕುಂಬಾರ, ಲಕ್ಷ್ಮೀಕಾಂತ ಸಾಲಿ, ಮಹೇಶ ಕಾಶಿ,
ಸಿದ್ರಾಮಯ್ಯ ಗೊಂಬಿಮಠ, ಶಿವುಕುಮಾರ ಕುಂಬಾರ, ಸಾಬಣ್ಣ ಮೊಗಲಾ, ಕಾಶಿರಾಯ ನಂದೂರ, ದಶರಥ, ಮಧುಸೂಧನ ಘಾಳೆ, ಚಂದ್ರಶೇಖರ ಪಾಟೀಲ್‌ ಮಲಕೂಡ ಇದ್ದರು. ನರಸಪ್ಪ ಚಿನ್ನಕಟ್ಟಿ ನಿರೂಪಿಸಿದರು.

ಕವಿ ಸರ್ವಜ್ಞ ಅಜರಾಮರ: ಕಟ್ಟಿಮನಿ
ಶಹಾಬಾದ:
ತ್ರಿಕಾಲ ಜ್ಞಾನಿಯಾಗಿ, ವಾಸ್ತವಿಕೆ ಅರಿತು, ತ್ರಿಪದಿಗಳ ಮೂಲಕ ಕಂಡ ಸತ್ಯವನ್ನು ನೇರ ಮತ್ತು ನಿಷ್ಠುರವಾಗಿ ಹೇಳಿ ಸಮಾಜಕ್ಕೆ ಮಾರ್ಗದರ್ಶನ ನೀಡುವ ಮೂಲಕ ಕವಿ ಸರ್ವಜ್ಞ ಇಂದಿಗೂ ಅಜರಾಮರವಾಗಿದ್ದಾರೆ ಎಂದು ಶಿವಯೋಗಿಸ್ವಾಮಿ ಪ್ರೌಢಶಾಲೆ ಶಿಕ್ಷಕ ಶಿವಯೋಗಿ ಕಟ್ಟಿಮನಿ ಹೇಳಿದರು.

ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾಡಿನೆಲ್ಲಡೆ ಸಂಚರಿಸಿ ಎಲ್ಲ ಕ್ಷೇತ್ರಗಳಲ್ಲಿ ಕಂಡ ಸತ್ಯವನ್ನು ನೇರವಾಗಿ ಹೇಳುವ ಮೂಲಕ ಸಮಾಜಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿದ್ಯೆ, ಜಾತಿ, ಕೃಷಿ, ಮಾತು, ದುಶ್ಚಟಗಳ ಕುರಿತು ವಚನಗಳ ಮೂಲಕ ಜಾಗೃತಿ ಮೂಡಿಸಿದ್ದಾರೆ ಎಂದರು. ಸುಧಾಬಾಯಿ ಕುಲಕರ್ಣಿ, ಗಣೇಶ ಜಾಯಿ, ಮಹೇಂದ್ರ ದೊಡ್ಡಮನಿ, ನಾಗವೇಣಿ ಅವಿನಾಶ ಕಂಬಾನೂರ, ಸುರೇಶ ಕುಲಕರ್ಣಿ, ಸುನೀತಾ ಬಿರಾದಾರ, ಸವಿತಾ.ಆರ್‌ ಇದ್ದರು. 

ಭಂಕೂರ: ಗ್ರಾಮದ ವರ್ತೂರ ಪ್ರಕಾಶ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ತ್ರಿಪದಿ ಕವಿ ಸರ್ವಜ್ಞ ಜಯಂತಿ
ಆಚರಿಸಲಾಯಿತು. ಮುಖ್ಯಗುರು ಹಣಮಂತ ಕುಂಬಾರ ಮಾತನಾಡಿದರು. ಶಶಿಕಲಾ ಪೂಜಾರಿ, ಅರ್ಚನಾ ಚವ್ಹಾಣ,
ಗಂಗಮ್ಮ ತಿಪ್ಪಣನವರ್‌, ಕವಿತಾ ಬುರ್ಜಾ, ಶಂಕ್ರಮ್ಮ, ಶಿಕ್ಷಕರು ಹಾಗೂ ಶಾಲಾಮಕ್ಕಳು ಇದ್ದರು.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.