ಕಬ್ಬಿನ ಹಣ ಪಾವತಿಗೆ ಸೂಚನೆ


Team Udayavani, Feb 23, 2018, 10:59 AM IST

gul-5.jpg

ಕಲಬುರಗಿ: ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿರುವ ರೈತರಿಗೆ ಹಣವನ್ನು ಕೂಡಲೇ ಪಾವತಿ ಮಾಡಬೇಕು. ಹಣ ಪಾವತಿ ತಡವಾದರೆ ರೈತರ ಸಮಸ್ಯೆಗಳು ಹೆಚ್ಚುತ್ತವೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಕ್ಕರೆ ಕಾರ್ಖಾನೆ ಅಧಿಕಾರಿಗಳು ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಆದಷ್ಟು ಬೇಗ ಬಾಕಿ ಹಣ ಪಾವತಿಸಬೇಕು. ರೈತರಿಗೆ ಪಾವತಿಸಿದ ಹಣದ ವರದಿ ಪ್ರತಿದಿನ ಸಲ್ಲಿಸಬೇಕು ಎಂದು ಸೂಚಿಸಿದರು. ಉಗಾರ್‌ ಶುಗರ್ ಕಾರ್ಖಾನೆಯವರು 2725 ರೈತರಿಂದ 2.96 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ಖರೀದಿಸಿದ್ದು, ಈವರೆಗೆ 22 ಕೋಟಿ ಹಣ ಪಾವತಿಸಿದ್ದಾರೆ. ಇನ್ನು 65 ಕೋಟಿ ಪಾವತಿಸಬೇಕಿದೆ. ರೇಣುಕಾ ಶುಗರ್ ಕಾರ್ಖಾನೆಯವರು 4251 ರೈತರಿಂದ 6.31 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ಖರೀದಿ ಮಾಡಿ 41 ಕೋಟಿ ಪಾವತಿಸಿದ್ದಾರೆ. ಇನ್ನು 139 ಕೋಟಿ ಪಾವತಿಸಬೇಕು. ಎನ್‌ಎಸ್‌ಎಲ್‌ ಭೂಸನೂರ ಕಾರ್ಖಾನೆಯವರು 331 ರೈತರಿಂದ 2.26 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ಖರೀದಿಸಿದ್ದಾರೆ. 49 ಕೋಟಿ ರೂ. ಪಾವತಿಸಬೇಕಿದೆ. ಕೋರ್‌ ಗ್ರೀನ್‌ ಸಕ್ಕರೆ ಕಾರ್ಖಾನೆಯವರು
1245 ರೈತರಿಂದ 4.35 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ಖರೀದಿಸಿ 27 ಕೋಟಿ ರೂ.ಪಾವತಿಸಿದ್ದು, ಇನ್ನು 95 ಕೋಟಿ ಪಾವತಿಸಬೇಕಿದೆ. ಆದಷ್ಟು ಬೇಗ ಈ ಹಣವನ್ನು ವತಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ರೈತರು ಬೆಳೆದ ಕಬ್ಬು ನಿಗದಿತ ಅವಧಿಯಲ್ಲಿ ಕಟಾವು ಮಾಡುತ್ತಿಲ್ಲ ಎಂಬ ದೂರುಗಳಿದ್ದು, ಸಕ್ಕರೆ ಕಾರ್ಖಾನೆಯವರು 3 ದಿನಗಳಲ್ಲಿ ಕಬ್ಬು ಕಟಾವು ಮಾಡುವ ಟೋಲಿ ಹೆಚ್ಚಿಸಿ ಈಗಿರುವ ಹಾಗೂ ಹೆಚ್ಚಿಸಿರುವ ಟೋಳಿಗಳ ವರದಿ ನೀಡಬೇಕು. ಟೋಳಿ ಹೆಚ್ಚಿಸಿ ಹೆಚ್ಚಿನ ಪ್ರಮಾಣದ ಕಬ್ಬು ಕಟಾವಿಗೆ ಮುಂದಾಗಬೇಕು. 

ಕಬ್ಬು ಕಟಾವು ಮಾಡುವ ಟೋಳಿ ಜೊತೆಗೆ ರೈತರು ಸಹಾಯ ಮಾಡಿದರೆ ಅಥವಾ ರೈತರೇ ಟೋಳಿಗಳೊಂದಿಗೆ ಕಬ್ಬು ಕಟಾವು ಮಾಡಿದ್ದಲ್ಲಿ ಒಂದು ಟನ್‌ಗೆ 275 ರೂ. ನೀಡಲಾಗುವುದು. ರೈತರು ಇದರ ಲಾಭ ಪಡೆಯಬೇಕು. ಕಬ್ಬು ಬೆಳೆದ ರೈತರಿಗೆ ಸಿಹಿ ನೀಡಬೇಕು ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯಲ್ಲಿ ಸಹ ಹೆಚ್ಚು ಪ್ರಮಾಣದ ಕಬ್ಬು ಬೆಳೆಯುತ್ತಾರೆ. ಅಲ್ಲಿ ಸ್ವತಃ ರೈತರೇ ಕಟಾವು ಮಾಡಿ ಕಾರ್ಖಾನೆಗಳಿಗೆ ಸಾಗಿಸುತ್ತಾರೆ. ಆದರೆ ಈ ಭಾಗದಲ್ಲಿ ಕಬ್ಬು ಕಟಾವಿಗೆ ಮಹಾರಾಷ್ಟ್ರದ ಟೋಳಿಗಳನ್ನು ಅವಲಂಬಿಸಬೇಕಿದೆ. ರೈತರೇ ಸ್ವತಃ ಕಬ್ಬು ಕಟಾವು ಮಾಡಿಕೊಂಡಲ್ಲಿ ತುಂಬಾ ಅನುಕೂಲವಾಗಲಿದೆ ಎಂದು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಹೇಳಿದರು.

ಉಗಾರ್‌ ಶುಗರ್ನ ಕಬ್ಬು ಅಭಿವೃದ್ಧಿ ಅಧಿಕಾರಿ ಅನೀಲಕುಮಾರ ಪಾಟೀಲ, ಕೋರ್‌ ಗ್ರೀನ್‌ ಸಕ್ಕರೆ ಕಾರ್ಖಾನೆ ಮ್ಯಾನೇಜರ್‌ ಶಿವಾನಂದ ನಂದಗಿರಿ, ಎನ್‌ಎಸ್‌ಎಲ್‌ ಭೂಸನೂರ ಸಕ್ಕರೆ ಕಾರ್ಖಾನೆ ಉಪ ವ್ಯವಸ್ಥಾಪಕ ಪ್ರಭಾಕರ ರೆಡ್ಡಿ, ರೇಣುಕಾ ಸಕ್ಕರೆ
ಕಾರ್ಖಾನೆ ಉಪ ವ್ಯವಸ್ಥಾಪಕ ಅನೀಲಕುಮಾರ ಎಸ್‌. ವಾಲಿಕಾರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಅರುಣಕುಮಾರ ಸಂಗಾವಿ ಹಾಗೂ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.