ಕಟ್ಟುನಿಟ್ಟಾಗಿ ಜವಾಬ್ದಾರಿ ನಿರ್ವಹಿಸಲು ಸೂಚನೆ


Team Udayavani, Mar 2, 2018, 10:16 AM IST

gul-2.jpg

ಕಲಬುರಗಿ: ರಾಷ್ಟ್ರಕೂಟರ ರಾಜಧಾನಿ ಸೇಡಂ ತಾಲೂಕು ಮಳಖೇಡದಲ್ಲಿ ಮಾ. 4 ಮತ್ತು 5ರಂದು ನಡೆಯಲಿರುವ ರಾಷ್ಟ್ರಕೂಟ ಉತ್ಸವದ ವ್ಯವಸ್ಥಿತ ಆಯೋಜನೆಗೆ ವಿವಿಧ ಸಮಿತಿ ರಚಿಸಲಾಗಿದೆ. ಆಯಾ ಸಮಿತಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉತ್ಸವದ ನಿಮಿತ್ತ ಅಧಿಕಾರಿಗಳೊಂದಿಗೆ ನಡೆಸಿದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉತ್ಸವಕ್ಕೆ ನಿಯೋಜಿಸಲಾದ ಅಧಿಕಾರಿಗಳು ಹಾಗೂ ಸಮಿತಿಗಳ ಸದಸ್ಯರು ಕೂಡಲೇ ಮಳಖೇಡಕ್ಕೆ ಭೇಟಿ ನೀಡಿ ಸ್ಥಳೀಯ ಅಧಿಕಾರಿಗಳು, ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರೊಂದಿಗೆ ಸಮನ್ವಯತೆ ಸಾಧಿಸಿ ಪೂರ್ವಸಿದ್ಧತಾ ಕಾರ್ಯ ಪೂರ್ಣಗೊಳಿಸಬೇಕು.

ಉತ್ಸವ ಮುಗಿಯುವವರೆಗೂ ಮಳಖೇಡದಲ್ಲಿಯೆ ವಾಸ್ತವ್ಯ ಇರಬೇಕು. ಉತ್ಸವದ ಯಶಸ್ವಿಗೆ ಶ್ರಮಿಸಬೇಕು. ಈ ಬಗ್ಗೆ ಕೈಗೊಂಡ ಎಲ್ಲ ಕಾರ್ಯಗಳ ಬಗ್ಗೆ ಶುಕವಾರ ಮತ್ತೂಮ್ಮೆ ಪರಿಶೀಲಿಸಲಾಗುವುದು ಎಂದು ಹೇಳಿದರು.

ಉತ್ಸವದ ಯಶಸ್ವಿಗೆ ಸಾಂಸ್ಕೃತಿಕ, ಊಟ ಮತ್ತು ಕುಡಿಯುವ ನೀರು, ವಿಚಾರ ಸಂಕಿರಣ, ವಸ್ತು ಪ್ರದರ್ಶನ, ಸಾರಿಗೆ ವ್ಯವಸ್ಥೆ,
ವಸತಿ, ಲೆಕ್ಕ, ಪ್ರಚಾರ ಸಮಿತಿ ಹೀಗೆ ವಿವಿಧ ಸಮಿತಿ ರಚಿಸಲಾಗಿದೆ. ಎಲ್ಲ ಸಮಿತಿಗಳ ಮೇಲೆ ಮೇಲುಸ್ತುವಾರಿಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡ ಬಸವರಾಜ ಅವರ ನೇತೃತ್ವದಲ್ಲಿ ಸಂಘಟನಾ ಸಮಿತಿ ರಚಿಸಲಾಗಿದೆ. ಅವರ ಅಧೀನದಲ್ಲಿ ಉಳಿದ ಎಲ್ಲ ಸಮಿತಿಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಚಂದ್ರಶೇಖರ ಕಂಬಾರ ಮಾ. 4ರಂದು ಬೆಳಗ್ಗೆ 11:00ಕ್ಕೆ ಉತ್ಸವ ಉದ್ಘಾಟಿಸಲಿದ್ದಾರೆ.
 
ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ವಿಶೇಷ ಆಹ್ವಾನಿತರಾಗಿ, ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಶ ಪಾಟೀಲ ಸೇರಿದಂತೆ ಶಿಷ್ಟಾಚಾರದಂತೆ ಸ್ಥಳೀಯ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಎರಡು ದಿನಗಳ ವರೆಗೆ ಕವಿ ಗೋಷ್ಠಿ, ಗೀತ ಗಾಯನ, ನಾಟಕ ಕಾರ್ಯಕ್ರಮಗಳು ಸ್ಥಳೀಯ ಹಾಗೂ ನಾಡಿನ ವಿವಿಧ ಕಲಾವಿದರಿಂದ ನಡೆಯಲಿದ್ದು, ವಿವಿಧ ಮಳಿಗೆಗಳು ಸಹ ಸ್ಥಾಪನೆಯಾಗಲಿವೆ. 

ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ, ಖ್ಯಾತ ಸಂಗೀತ ನಿರ್ದೇಶಕರಾದ ನವೀನ ಸಜ್ಜು, ಅನೂಪ ಸಿಳೀನ್‌, ಅರ್ಜುನ
ಜನ್ಯಾ, ನಿರೂಪಣೆ ಖ್ಯಾತಿಯ ಅನುಶ್ರೀ ಸಾಂಸ್ಕೃತಿಕ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದಾರೆ ಎಂದು ಹೇಳಿದರು. ಉತ್ಸವಕ್ಕೆ ಹೊರಜಿಲ್ಲೆಯಿಂದ ಆಗಮಿಸುವ ಅತಿಥಿ ಗಣ್ಯರು ಮತ್ತು ಕಲಾವಿದರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಅಧಿಕಾರಿಗಳು ಗಣ್ಯರ ಮತ್ತು ಕಲಾವಿದರ ಊಟೋಪಚಾರ ಹಾಗೂ ಸಾರಿಗೆ ವ್ಯವಸ್ಥೆ ಬಗ್ಗೆ ಗಮನಹರಿಸಬೇಕು. 

ಗಣ್ಯರು, ಕಲಾವಿದರು, ಪತ್ರಕರ್ತರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಆಸನ ಮತ್ತು ಊಟದ ವ್ಯವಸ್ಥೆ ಸರಿಯಾಗಿ ಮಾಡುವಂತೆ ಹಾಗೂ ಉತ್ಸವದ ಆವರಣದಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತು ಸ್ವತ್ಛತೆ ಬಗ್ಗೆ ಹಾಗೂ ಉದ್ಘಾಟನೆ ದಿನದಂದು ಮಳಖೇಡ್‌ ಕೋಟೆಯಿಂದ ಮುಖ್ಯ ವೇದಿಕೆ ವರೆಗೆ ಬರುವ ಮೆರವಣಿಗೆ ಹಾದಿಯುದ್ದಕ್ಕೂ ಸ್ವತ್ಛತೆ ಬಗ್ಗೆ ವಿಶೇಷ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಉತ್ಸವದ ಸಂಪೂರ್ಣ ಕಾರ್ಯಕ್ರಮಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. 

ಉತ್ಸವದ ಸಂಘಟನಾ ಸಮಿತಿ ಅಧ್ಯಕ್ಷ ದೊಡ್ಡಬಸವರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಉತ್ಸವದ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ ಸೇರಿದಂತೆ ಅಧಿಕಾರಿಗಳು, ಉತ್ಸವದ ವಿವಿಧ ಸಮಿತಿಗಳ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.