ಮಳಖೇಡದಲ್ಲಿ ನಾಳೆಯಿಂದ ರಾಷ್ಟ್ರಕೂಟ ಉತ್ಸವ


Team Udayavani, Mar 3, 2018, 10:55 AM IST

gul-5.jpg

ಕಲಬುರಗಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕು ಮಳಖೇಡದಲ್ಲಿ ಮಾರ್ಚ್‌ 4 ಹಾಗೂ 5ರಂದು ರಾಷ್ಟ್ರಕೂಟ ಉತ್ಸವ-2018 ಏರ್ಪಡಿಸಲಾಗಿದೆ.

ರಾಷ್ಟ್ರಕೂಟ ಉತ್ಸವದ ಅಂಗವಾಗಿ ಮಾರ್ಚ್‌ 4ರಂದು ಬೆಳಗ್ಗೆ 9:00ಕ್ಕೆ ಮಳಖೇಡದ ಕೋಟೆಯೊಳಗೆ ಪೂಜೆ ನೆರವೇರಿಸಲಾಗುತ್ತದೆ. ಬೆಳಗ್ಗೆ 9:00ರಿಂದ 11:00ರ ವರೆಗೆ ರಾಷ್ಟ್ರಕೂಟ ಉತ್ಸವದ ವೇದಿಕೆಯಲ್ಲಿ 8 ಕಲಾ ತಂಡಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.

ಅಂದು ಬೆಳಗ್ಗೆ 11:00ಕ್ಕೆ ಜ್ಞಾನಪೀಠ ಪುರಸ್ಕೃತ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಚಂದ್ರಶೇಖರ ಕುಂಬಾರ ರಾಷ್ಟ್ರಕೂಟ ಉತ್ಸವ ಉದ್ಘಾಟಿಸುವರು. ಮಳಖೇಡ ಭಂಗೀಮಠದ ಗಂಗಾಧರ ಶಿವಾಚಾರ್ಯ ಮಹಾಸ್ವಾಮೀಜಿ, ಮಳಖೇಡ ದರ್ಗಾದ ಹಜರತ್‌ ಸೈಯದ್‌ ಶಹಾ ಮುಸ್ತಫಾ ಖಾದ್ರಿ, ಸೇಡಂ ಶಿವಶಂಕರ ಮಠದ ಶಿವಶಂಕರ ಶಿವಚಾರ್ಯ ಮಹಾಸ್ವಾಮೀಜಿ, ಸೇಡಂ ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಮಹಾಸ್ವಾಮೀಜಿ, ಸೇಡಂ ಹಾಲಪ್ಪಯ್ಯ ಮಠದ ಪಂಚಾಕ್ಷರಿ ಮಹಾಸ್ವಾಮೀಜಿ ಹಾಗೂ ಮಳಖೇಡ ಉತ್ತರಾದಿಮಠದ ವ್ಯವಸ್ಥಾಪಕ ಪಂ| ವೆಂಕಣ್ಣಚಾರ್ಯರು ಸಾನ್ನಿಧ್ಯ ವಹಿಸುವರು. ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರು ವಿಶೇಷ ಆಮಂತ್ರಿತರಾಗಿ ಆಗಮಿಸುವರು.

ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಅಧ್ಯಕ್ಷತೆ ವಹಿಸಿ ಕವಿರಾಜ ಮಾರ್ಗ ಪ್ರತಿಕೃತಿ ಮಂಟಪ ಉದ್ಘಾಟಿಸುವರು. ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ ಖರ್ಗೆ ಮಾನ್ಯಖೇಡದ ರಾಷ್ಟ್ರಕೂಟರು ಪುಸ್ತಕ ಬಿಡುಗಡೆ ಮಾಡುವರು. ಲೋಕಸಭಾ ಸದಸ್ಯ ಡಾ| ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯಸಭಾ ಸದಸ್ಯ ಡಾ| ಬಸವರಾಜ ಪಾಟೀಲ ಸೇಡಂ ಅವರು ಚಿತ್ರಕಲಾ ಪ್ರದರ್ಶನ ಉದ್ಘಾಟಿಸುವರು. ಅಂದು ಮಧ್ಯಾಹ್ನ 12:45ರಿಂದ 1:20ರ ವರೆಗೆ ರಾಷ್ಟ್ರಕೂಟರ ಇತಿವೃತ್ತ ಹಾಗೂ ರಾಷ್ಟ್ರಕೂಟರು ಮತ್ತು ಧಾರ್ಮಿಕ ಸಹಿಷ್ಣುತೆ ಕುರಿತು 1ನೇ ಗೋಷ್ಠಿ, 1:35ರಿಂದ 2:20ರ ವರೆಗೆ ಕವಿರಾಜಮಾರ್ಗದ ಕನ್ನಡ ಜಗತ್ತು ಮತ್ತು ಕವಿರಾಜಮಾರ್ಗದ ದೇಸೀ-ಮಾರ್ಗ ಕುರಿತು 2ನೇ ಗೋಷ್ಠಿ, 2:35ರಿಂದ 3:10ರ ವರೆಗೆ ಸಮಕಾಲೀನ ಕನ್ನಡ ಭಾಷೆ ಸವಾಲುಗಳು ಕುರಿತು ವಿಶೇಷ ಸಂವಾದ ಕಾರ್ಯಕ್ರಮ ಮತ್ತು 3ನೇ ಗೋಷ್ಠಿ, ನಂತರ ಮಧುರ ಹಾಡು ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 3:20ರಿಂದ ಸಂಜೆ 4:10ರ ವರೆಗೆ ಪದ್ಮಶ್ರೀ ಪುರಸ್ಕೃತ ಇಂಬ್ರಾಹಿಂ ಸುತಾರ ಅವರ ವಿಶೇಷ ಅನುಭಾವ ಕಾರ್ಯಕ್ರಮ ನಡೆಯಲಿದೆ. ಸಂಜೆ 4:25ರಿಂದ 5:00ರ ವರೆಗೆ ರಾಷ್ಟ್ರಕೂಟರ ಪರಂಪರೆ ಸೌಹಾರ್ದತೆ ನೆಲೆಗಳು ಹಾಗೂ ರಾಷ್ಟ್ರಕೂಟರ ಸಾಂಸ್ಕೃತಿಕ ಕೊಡುಗೆ ಕುರಿತು 4ನೇ ಗೋಷ್ಠಿ, ಹಾಗೂ ಸಂಜೆ 5:15ರಿಂದ 6:00ರ ವರೆಗೆ ರಾಷ್ಟ್ರಕೂಟರ ವಾಸ್ತುಶಿಲ್ಪ ಹಾಗೂ ರಾಷ್ಟ್ರಕೂಟರ ಶಾಸನಗಳು ಕುರಿತು 5ನೇ ಗೋಷ್ಠಿ ನಡೆಯಲಿದೆ.

ಮಾರ್ಚ್‌ 5ರಂದು ಬೆಳಗ್ಗೆ 8:30ರಿಂದ 9:30ರ ವರೆಗೆ ವಿವಿಧ ಎಂಟು ಜನ ಕಲಾವಿದರಿಂದ ವಿಶೇಷ ಗಾಯನ ಕಾರ್ಯಕ್ರಮಗಳು ನಡೆಯಲಿದೆ. ಬೆಳಗ್ಗೆ 9:30ರಿಂದ 10:15ರ ವರೆಗೆ ಕವಿರಾಜಮಾರ್ಗ ಪರಿಸರದ ಸಾಹಿತ್ಯ ಹಾಗೂ ರಾಷ್ಟ್ರಕೂಟರ ಕಾಲದ ಜಾನಪದ ಕುರಿತು 6ನೇ ಗೋಷ್ಠಿ, ಬೆಳಗ್ಗೆ 11:00ರಿಂದ ಮಧ್ಯಾಹ್ನ 12:5ರ ವರೆಗೆ ವಚನ, ದಾಸ, ತತ್ವಪದ ಮತ್ತು ಸೂಫಿಸಾಹಿತ್ಯ ಕುರಿತು 7ನೇ ಗೋಷ್ಠಿ ನಡೆಯಲಿದೆ. ಮಧ್ಯಾಹ್ನ 12:30ರಿಂದ 1:30ರ ವರೆಗೆ ಓಡಿಸಿ ನೃತ್ಯ ಕಾರ್ಯಕ್ರಮ, ಮಧ್ಯಾಹ್ನ 1:30ರಿಂದ 3:00ರ
ವರೆಗೆ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 3:00ರಿಂದ ಸಂಜೆ 4:30ರ ವರೆಗೆ ರಾಷ್ಟ್ರಕೂಟ ಉತ್ಸವದ ಸಮಾರೋಪ ಸಮಾರಂಭ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ| ಮಲ್ಲೇಪುರಂ ಜಿ. ವೆಂಕಟೇಶ ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಖ್ಯಾತ ಸಾಹಿತಿ ಕುಂ. ವೀರಭದ್ರಪ್ಪ ಆಗಮಿಸಲಿದ್ದಾರೆ. ನಂತರ ಸಂಜೆ 4:30ರಿಂದ ರಾತ್ರಿ 11:30ರ ವರೆಗೆ ಕಲಬುರಗಿ ರಂಗಾಯಣದಿಂದ ಜಾನಪದ ನೃತ್ಯ, ಗಂಗಾವತಿ ಪ್ರಾಣೇಶ ಮತ್ತು ತಂಡದಿಂದ ನಗೆ ಹಬ್ಬ, ಮಾನ್ಯಖೇಟದ ಮುಕುಟ ನಾಟಕ, ಬೆಂಗಳೂರಿನ ಸುಮಾ ಅವರಿಂದ ಮಾತನಾಡಿಸುವ ಗೊಂಬೆ ಮತ್ತು ಕೊನೆಯದಾಗಿ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ ಜನ್ಯಾ ಮತ್ತು ತಂಡದಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.