ಗುರುಗುಂಟಾ ಜಾತ್ರೆ: ಜಾನುವಾರು ಮಾರಾಟ ಜೋರು
Team Udayavani, Mar 5, 2018, 5:42 PM IST
ಹಟ್ಟಿ ಚಿನ್ನದ ಗಣಿ: ಸಮೀಪದ ಗುರುಗುಂಟಾ ಅಮರೇಶ್ವರ ಜಾತ್ರೆಯಲ್ಲಿ ಜಾನುವಾರುಗಳ ಮಾರಾಟ ಜೋರಾಗಿದೆ. ಜಾತ್ರೆಗೆ ಆಗಮಿಸಿದ್ದ ನೆರೆ ರಾಜ್ಯ ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಎತ್ತುಗಳು, ಕೃಷಿ ಪರಿಕರಗಳು ರೈತರನ್ನು ಆಕರ್ಷಿಸುತ್ತಿದ್ದವು.
ಒಂದು ತಿಂಗಳು ನಡೆಯುವ ಜಾತ್ರೆಯಲ್ಲಿ ರೈತರಿಗೆ ಬಿತ್ತನೆ ಮತ್ತು ಕಟಾವಿಗೆ ಅಗತ್ಯವಾದ ಕೃಷಿ ಉಪಕರಣಗಳ ಪ್ರದರ್ಶನ ಏರ್ಪಡಿಸಲಾಗಿದೆ. ಕೋಠಾ, ಯಲಗಟ್ಟಾ, ರೋಡಲಬಂಡ. ಮೇದಿನಾಪುರ, ಆನ್ವರಿ, ನಿಲೋಗಲ್ ಸೇರಿ ವಿವಿಧ ಗ್ರಾಮದ ರೈತರು ತಮ್ಮ ಎತ್ತುಗಳನ್ನು ಮಾರಾಟಕ್ಕೆ ತಂದಿದ್ದಾರೆ. ನೇಗಿಲು, ಕುಂಟಿ, ಕೂರಿಗಿ, ಬುಕ್ಕ ತಲವು, ನಗ, ಬಾನಿ ಹೂಟಿ, ಹಗ್ಗ ಕೃಷಿಗೆ ಬೇಕಾಗುವ ಪರಿಕರಗಳನ್ನು ರೈತರು ಖರೀದಿಸುತ್ತಿದ್ದಾರೆ.
ಹೆಚ್ಚಿದ ಬೇಡಿಕೆ: ಐದು ದಿನಗಳವರೆಗೆ ನಡೆಯುವ ಜಾನುವಾರು ಜಾತ್ರೆಯಲ್ಲಿ ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ, ಜಿಲ್ಲೆಗಳ ರೈತರು ಆಗಮಿಸಿ ಎತ್ತುಗಳನ್ನು ಖರೀದಿಸುತ್ತಿದ್ದರಿಂದ. ಆಯಾ ತಳಿಗನುಗುಣವಾಗಿ ಎತ್ತುಗಳಿಗೆ 25 ಸಾವಿರದಿಂದ 4 ಲಕ್ಷ ರೂ.ವರೆಗೂ ಬೆಲೆ ನಿಗದಿಪಡಿಸಲಾಗಿದೆ.
ರೈತರಿಗೆ ಸೌಲಭ್ಯ: ಜಾತ್ರಾ ಸಮಿತಿಯಿಂದ ಎತ್ತುಗಳ ಮಾರಾಟ ಮತ್ತು ಖರೀದಿಗೆ ಆಗಮಿಸಿರುವ ರೈತರಿಗೆ ಅನ್ನಸಂತರ್ಪಣೆ, ನೀರಿನ ವ್ಯವಸ್ಥೆ ಮಾಡಲಾಗಿದೆ. ಎತ್ತುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ಗುರುಗುಂಟಾ ಜಾತ್ರೆಯಲ್ಲಿ ವಿವಿಧ ತಳಿಯ ಎತ್ತುಗಳು ಮಾರಾಟಕ್ಕಿವೆ ಎಂದು ಸಂಬಂಧಿಕರು ತಿಳಿಸಿದ್ದರಿಂದ ಎತ್ತುಗಳ ಖರೀದಿಗೆ ಆಗಮಿಸಿದ್ದೇನೆ.
ಮಲ್ಲಿಕಾರ್ಜುನ, ರೈತ ಯಾದಗಿರಿ ಜಿಲ್ಲೆ.
ಎತ್ತುಗಳನ್ನು ಪಾಲನೆ ಪೋಷಣೆ ಮಾಡಿ ದಷ್ಟಪುಷ್ಟವಾಗಿ ಬೆಳಸಿದ್ದೇವೆ. ಸೂಕ್ತ ಬೆಲೆ ದೊರೆತರೆ ಅವುಗಳನ್ನು ಮಾರುತ್ತೇವೆ.
ಹನುಮಂತ ಸುರಪುರ, ರೈತ ಯಲಗಟ್ಟಾ ಗ್ರಾಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!