ಅರಿವಿಗೆ ಗುರು ಮೂಲ: ರಂಭಾಪುರಿ ಶ್ರೀ


Team Udayavani, Mar 13, 2018, 11:46 AM IST

gul-1.jpg

ಆಳಂದ: ಜಗದ ಕತ್ತಲೆ ಕಳೆಯಲು ಸೂರ್ಯಬೇಕು. ಬದುಕಿನ ಕತ್ತಲೆ ಕಳೆಯಲು ಗುರುಬೇಕು. ಗುರಿ ಮತ್ತು ಗುರುವಿನ ಮೂಲಕ ಜೀವನ ಉತ್ಕರ್ಷತೆ ಸಾಧ್ಯ. ಅಧ್ಯಾತ್ಮದ ಅರಿವಿಗೆ ಗುರು ಮೂಲ ಕಾರಣವೆಂಬುದನ್ನು ಮರೆಯಬಾರದೆಂದು ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ತಾಲೂಕಿನ ಮಾದನ ಹಿಪ್ಪರಗಿ ಗುರುಶಾಂತೇಶ್ವರ ಹಿರೇಮಠದ ಗುರುಪಟ್ಟಾಧಿಕಾರ ಮಹೋತ್ಸವ ಧರ್ಮ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ವೀರಶೈವ ಧರ್ಮದಲ್ಲಿ ತತ್ವತ್ರಯಗಳ ಪಾತ್ರ ಬಹಳ ಹಿರಿದು. ಅಷ್ಟಾವರಣ, ಪಂಚಾಚಾರ ಮತ್ತು ಷಟ್‌ಸ್ಥಲಗಳು ಜೀವನ ವಿಕಾಸಕ್ಕೆ ಸೋಪಾನ. ಅಷ್ಟಾವರಣದಲ್ಲಿ ಗುರುವಿಗೆ ಅತ್ಯಂತ ಮಹತ್ವವಿದೆ ಎಂದರು.

ಪರಶಿವನ ಸಾಕಾರ ರೂಪ ಗುರು ಎಂದು ಸಿದ್ಧಾಂತ ಶಿಖಾಮಣಿಯಲ್ಲಿ ಜಗದ್ಗುರು ರೇಣುಕಾಚಾರ್ಯರು ಸ್ಪಷ್ಟವಾಗಿ
ಉಲ್ಲೇಖೀಸಿದ್ದಾರೆ. ಸಂಸ್ಕಾರ ಸದ್ವಿಚಾರ ಮೌಲ್ಯಾಧಾರಿತ ಜೀವನ ವಿಕಾಸಕ್ಕೆ ಮೂಲವಾದ ಜ್ಞಾನವನ್ನು ಬೋಧಿ ಸುವುದೇ ಗುರು ಧರ್ಮವಾಗಿದೆ.

ಹೆತ್ತ ತಂದೆ-ತಾಯಿ ಮತ್ತು ಗುರುವನ್ನು ಮರೆಯಬಾರದೆಂದು ಶಾಸ್ತ್ರ ಹೇಳುತ್ತದೆ. ವೈಚಾರಿಕತೆಯ ಹೆಸರಿನಲ್ಲಿ ಸಭ್ಯತೆ
ಸಂಸ್ಕೃತಿ ನಾಶಗೊಳ್ಳುತ್ತಿರುವ ಇಂದಿನ ದಿನಗಳಲ್ಲಿ ಮಠಗಳ ಪಾತ್ರ ಮಹತ್ವ ಪಡೆದಿದೆ. ಅರಿವು-ಆಚಾರ ಕಲಿಸುವ ಕೇಂದ್ರಗಳಾಗಿ ಮಠಗಳು ಕಾರ್ಯ ಮಾಡಬೇಕಾಗಿದೆ. ಅವಗುಣಗಳನ್ನು ದೂರಮಾಡಿ ಲಿಂಗ ಗುಣ ಸಂಪನ್ನರನ್ನಾಗಿ ಮಾಡುವುದೇ ಗುರು ಧರ್ಮವಾಗಿದೆ ಎಂದು ಹೇಳಿದರು.

ಮಾದನಹಿಪ್ಪರಗಿ ಗುರುಶಾಂತೇಶ್ವರ್‌ ಹಿರೇಮಠವು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶಾಖಾಮಠವಾಗಿದೆ. ಈ ಮಠದ ಹಿಂದಿನ ಪಟ್ಟಾಧ್ಯಕ್ಷರು ಧರ್ಮದ ಬೆಳಕನ್ನು ಬೀರಿದ್ದನ್ನು ಮರೆಯಲಾಗದು. 46 ವರುಷಗಳಿಂದ ಖಾಲಿಯಾಗಿದ್ದ ಈ ಗುರು ಸ್ಥಾನವನ್ನು ನೂತನ ಶಾಂತವೀರ ಶಿವಾಚಾರ್ಯ ಸ್ವಾಮಿಗಳು ಪಟ್ಟಾಭಿಷಿಕ್ತರಾಗಿ ತುಂಬಿದ್ದಾರೆ. ನಾಗಠಾಣ ಹಿರೇಮಠದ ಚನ್ನಮಲ್ಲಿಕಾರ್ಜುನ  ಶಿವಾಚಾರ್ಯರು ನೂತನ ಶ್ರೀಗಳಿಗೆ ಧಾರ್ಮಿಕ ಸಂಸ್ಕಾರವಿತ್ತು ಷಟ್‌ಸ್ಥಲ ಬ್ರಹ್ಮೋಪದೇಶ ಮಾಡಿದರು. ನೂತನ ಶಾಂತವೀರ ಶಿವಾಚಾರ್ಯ ಸ್ವಾಮಿಗಳಿಗೆ ದಂಡಕ ಮಂಡಲು ಸಮೇತ ಪಂಚಮುದ್ರೆಗಳನ್ನಿತ್ತು ರಂಭಾಪುರಿ ಜಗದ್ಗುರುಗಳು ಶುಭ ಹಾರೈಸಿದರು.

ಪಟ್ಟಾಧಿಕಾರ ಸಮಾರಂಭದಲ್ಲಿ ಚಿಣಮಗೇರಾ, ಮುಖೇಡ ಕಾಸರಳ್ಳಿ, ಆತನೂರು, ಕೊಣ್ಣೂರು, ಮೈಂದರ್ಗಿ, ಹತ್ತಳ್ಳಿ, ಉಡಗೀರ್‌, ದೋರನಳ್ಳಿ, ದುಧನಿ ಶ್ರೀಗಳು ಪಾಲ್ಗೊಂಡಿದ್ದರು. ಗೌಡಗಾಂವ್‌ ಹಿರೇಮಠದ ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ನೇತೃತ್ವವನ್ನು ಶಿವಲಿಂಗೇಶ್ವರ ವಿರಕ್ತಮಠದ ಅಭಿನವ ಶಿವಲಿಂಗ ಸ್ವಾಮಿಗಳು ವಹಿಸಿದ್ದರು.

ನೂತನ ಪಟ್ಟಾಧ್ಯಕ್ಷ ಶಾಂತವೀರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿದರು. ಪಟ್ಟಾಧಿ ಕಾರದ ವೈದಿಕ ಕಾರ್ಯಗಳನ್ನು ಸೊಲ್ಲಾಪುರದ ಡಾ| ಶಿವಯೋಗಿ ಶಾಸ್ತ್ರಿಗಳು, ಮಾದನಹಿಪ್ಪರಗಿ ಸೋಮನಾಥ ಶಾಸ್ತ್ರಿಗಳು, ಕಡಗಂಚಿ ಪಶುಪತಿ ವಿಶ್ವನಾಥಮಠ ಅವರು ನೆರವೇರಿಸಿದರು. ಸಮಾರಂಭದ ನಂತರ ನೂತನ ಶ್ರೀಗಳ ಪಲ್ಲಕ್ಕಿ ಮಹೋತ್ಸವ ಜರುಗಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.