ಬಿರುಬಿಸಿಲಲ್ಲಿ ನೀರಿಗಾಗಿ ಪರದಾಟ
Team Udayavani, Apr 6, 2018, 3:05 PM IST
ಚಿಂಚೋಳಿ: ತಾಲೂಕಿನಲ್ಲಿ ಬೇಸಿಗೆ ಬಿರು ಬಿಸಿಲು ಹೆಚ್ಚಾಗ ತೊಡಗುತ್ತಿರುವುದರಿಂದ ಅನೇಕ ಗ್ರಾಮಗಳಲ್ಲಿ ಕುಡಿಯುವ
ನೀರಿನ ಸಮಸ್ಯೆ ಉಂಟಾಗಿದೆ. ಆದರೆ ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ರುಮ್ಮನಗೂಡ, ಸಾಸರಗಾಂವ, ವಜೀರಗಾಂವ, ತಾಡಪಳ್ಳಿ, ಮೋಘಾ, ಪಸ್ತಪುರ, ಹೂವಿನಬಾವಿ, ರುಸ್ತಂಪುರ ಹಾಗೂ ಸುತ್ತಲಿನ ತಾಂಡಾಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿದ್ದು, ಜನರು ಹಾಗೂ ಜನ ಜಾನುವಾರುಗಳು ಕುಡಿಯುವ ನೀರಿನ ತೊಂದರೆ ಅನುಭವಿಸಬೇಕಾಗಿದೆ.
ಬಹುಗ್ರಾಮ ಯೋಜನೆ ಅಡಿಯಲ್ಲಿ 5ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಪೈಪ್ಗ್ಳ ಕಾಮಗಾರಿ ಕಳಪೆಮಟ್ಟದಿಂದ ನಡೆದಿದ್ದು, ಅಲ್ಲಲ್ಲಿ ಪೈಪ್ಗ್ಳು ಒಡೆದು ಹೋಗಿ ನೀರು ಸೋರಿಕೆ ಆಗುತ್ತಿರುವುದರಿಂದ ಗ್ರಾಮಗಳ ಜನರಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸಬೇಕಾಗಿದೆ.
ತಾಲೂಕಿನ ಪಸ್ತಪುರ ಗ್ರಾಪಂ ವ್ಯಾಪ್ತಿಯಲ್ಲಿಯೇ ಅತಿ ಹೆಚ್ಚಿನ ಸಮಸ್ಯೆ ತಲೆದೋರಿದೆ. ಬೋರವೆಲ್ಗಳು ಕೆಟ್ಟು ಹೋಗಿವೆ, ಬಾವಿಗಳಲ್ಲಿ ನೀರು ಮಲೀನಗೊಂಡಿವೆ. ಅಲ್ಲಲ್ಲಿ ಪೈಪ್ಗಳು ಒಡೆದು ಹೋಗಿರುವುದರಿಂದ ಗ್ರಾಮಸ್ಥರಿಗೆ ಸಮರ್ಪಕವಾಗಿ ನೀರು ಸರಬರಾಜು ಆಗುತ್ತಿಲ್ಲ.
ಹೀಗಾಗಿ ರುಮ್ಮನಗೂಡ ತಾಂಡಾ, ಮೋಘಾ ತಾಂಡಾ, ವಜೀರಗಾಂವ, ಹೂವಿನಬಾವಿ ತಾಂಡಾದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಜನರು ಇರುವ ಒಂದೆರಡು ಬೋರವೆಲ್ಗಳಲ್ಲಿನ ನೀರಿಗಾಗಿ ಹಗಲು-ರಾತ್ರಿ ತಾಸುಗಟ್ಟಲೇ ಕಾಯಬೇಕಾಗಿದೆ.
ರುಮ್ಮನಗೂಡ ತಾಂಡಾಕ್ಕೆ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ದೂರದಲ್ಲಿ ಇರುವ ಹಳೇ ಬಾವಿಗೆ 2ಕಿಮೀ ದೂರ ನಡೆದುಕೊಂಡು ಎತ್ತಿನ ಬಂಡಿಯಲ್ಲಿ ನೀರು ತರಬೇಕಾಗಿದೆ. ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಬಿಸಿಲಿನ ತಾಪ ದಿನ ದಿನಕ್ಕೆ ಹೆಚ್ಚುತ್ತಿದ್ದು ಬಿಸಿಲಿನ ಪ್ರಖರತೆಯಿಂದ ಜನರು ರಸ್ತೆ ಮೇಲೆ ತಿರುಗಾಡುವುದು ಕಷ್ಟವಾಗಿದೆ.
ಚಿಂಚೋಳಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಪಿಡಿಒ ಕಾರ್ಯದರ್ಶಿಗಳು ಪಂಪ್ ಆಪರೇಟರ್ ಗಮನ ಹರಿಸುತ್ತಿಲ್ಲವೆಂದು ಗ್ರಾಮಸ್ಥರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…