ಅತ್ಯಾಚಾರ ಖಂಡಿಸಿ ಮುಸ್ಲಿಮರ ಆಕ್ರೋಶ
Team Udayavani, Apr 22, 2018, 4:21 PM IST
ವಾಡಿ: ಕಾಶ್ಮೀರದಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳ ಮೇಲೆ ನಡೆಸಲಾದ ಅತ್ಯಾಚಾರ ಹಾಗೂ ಕೊಲೆ ಕೃತ್ಯ ಖಂಡಿಸಿ ಪಟ್ಟಣ ಹಾಗೂ ರಾವೂರ ಗ್ರಾಮದಲ್ಲಿ ಮುಸ್ಲಿಂ ಸಂಘಟನೆಗಳು
ಪ್ರತಿಭಟನೆ ನಡೆಸಿದವು.
ಟಿಪ್ಪು ಸುಲ್ತಾನ್ ಸಂಯುಕ್ತ ಸಂಘದ ಕಾರ್ಯಕರ್ತರು ರಾವೂರ ಗ್ರಾಮದ ಜಾಮಿಯಾ ಮಸೀದಿಯಿಂದ ಚಿತ್ತಾಪುರ ವೃತ್ತದ ವರೆಗೆ ಮೆರವಣಿಗೆ ನಡೆಸಿ ವೃತ್ತದಲ್ಲಿ ಜಮಾಯಿಸಿದರು.
ಜಮ್ಮು ಕಾಶ್ಮೀರ ಮತ್ತು ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ದೇವಸ್ಥಾನದಂತಹ ಪವಿತ್ರ ಸ್ಥಳದಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪಾಪಿಗಳನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.
ಟಿಪ್ಪುಸುಲ್ತಾನ್ ಸಂಯುಕ್ತ ರಂಗದ ಜಿಲ್ಲಾ ಕಾರ್ಯದರ್ಶಿ ಮಲಿಕಪಾಷಾ ಮೌಜಾನ್, ತಾಲೂಕು ಅಧ್ಯಕ್ಷ ವಸೀಮ ಖಾನ್, ಗ್ರಾಪಂ ಸದಸ್ಯರಾದ ಇರ್ಫಾನ್ ಸೇಠ, ಯುನ್ಯೂಸ್ ಪ್ಯಾರೆ, ಮುಖಂಡರಾದ ಮಹೆಬೂಬ ಎಂ.ಆರ್, ಶ್ರವಣಕುಮಾರ ಮೌಸಲಗಿ, ಫೆರೋಜ್ ಮೌಜಾನ್, ರಹೆಮಾನ ಮೂಸಾವಾಲೆ, ಅಮೀರ ಪಟೇಲ, ಮಹೆಬೂಬ ಖಾನ್, ಯುಸೂಫ್, ಇರ್ಫಾನ್, ಮೌಲಾ ಅಡಕಿ, ಅಫಜಲ್ ತುನ್ನೂರ, ಮೊಹಸೀನ ಅಡಕಿ, ಸಾದಿಕ ಮಸೂಲ್ದಾರ, ಮಹ್ಮದ್ ದಿಗ್ಗಾಂವ ಪಾಲ್ಗೊಂಡಿದ್ದರು.
ಎಸ್ಡಿಪಿಐ ಪ್ರತಿಭಟನೆ: ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿಪಿಐ) ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಎಸ್ಡಿಪಿಐ ವಲಯ ಅಧ್ಯಕ್ಷ ಮಹ್ಮದ್ ಆಶೀಫ್ ಪಗಡಿವಾಲೆ, ದಲಿತ ಸೇನೆ ಜಿಲ್ಲಾ ಉಪಾಧ್ಯಕ್ಷ ಶ್ರವಣಕುಮಾರ ಮೌಸಲಗಿ, ಮುಸ್ಲಿಂ ಸಮಾಜದ ಮುಖಂಡ ಫೇರೋಜ್ ಖಾನ್, ಯುವ ಮುಖಂಡ ಝಹೂರ್ ಖಾನ್, ಮಹ್ಮದ್ ರಫೀಕ್, ಇಮ್ತಿಯಾಜ್ ಪಟೇಲ, ಮಹ್ಮದ್ ಗೌಸ್ ಸೇರಿದಂತೆ ಕಾರ್ಯಕರ್ತರು ಹೋರಾಟದಲ್ಲಿ ಪಾಲ್ಗೊಂಡಿದ್ದರು. ಪಿಎಸ್ಐ ವಿಜಯಕುಮಾರ ಎನ್ .ಭಾವಗಿ ಮನವಿ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ