ಮತದಾನ ಕೇಂದ್ರದ ಸೌಲಭ್ಯ ವರದಿ ಸಲ್ಲಿಸಿ
Team Udayavani, May 27, 2018, 12:46 PM IST
ಕಲಬುರಗಿ: ಜಿಲ್ಲೆಯಲ್ಲಿ 15 ಗ್ರಾಪಂಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಮೇ 28 ರೊಳಗಾಗಿ ವಿಧಾನಸಭಾ ಮತಕ್ಷೇತ್ರದ ಡಾಟಾ ಬೇಸ್ಗೆ ಅನುಗುಣವಾಗಿ ಮತದಾರರ ಪಟ್ಟಿ ಸಿದ್ಧಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಹಶೀಲ್ದಾರರಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈಶಾನ್ಯ ಪದವೀಧರ ಮತಕ್ಷೇತ್ರದ ಹಾಗೂ ಗ್ರಾಪಂ ಚುನಾವಣೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಪಂ ಚುನಾವಣೆಯಲ್ಲಿ ಪ್ರಪ್ರಥಮ ಬಾರಿಗೆ ಬಹು ಆಯ್ಕೆ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸಲಾಗುತ್ತಿದೆ.
ಒಂದು ಮತಯಂತ್ರದಲ್ಲಿ ಮತದಾರರು ನಾಲ್ಕು ಅಭ್ಯರ್ಥಿಗಳಿಗೆ ಮತ ಚಲಾಯಿಸಬಹುದು. ಚುನಾವಣೆ
ನಡೆಯುವ ಎಲ್ಲ ಮತಗಟ್ಟೆಗಳಲ್ಲಿ ಮತದಾರರಿಗೆ ಎಲೆಕ್ಟ್ರಾನಿಕ್ ಮತಯಂತ್ರದ ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಬೇಕೆಂದು ತಿಳಿಸಿದರು.
ಕಲಬುರಗಿ ತಾಲೂಕಿನಲ್ಲಿ-7, ಆಳಂದ-42, ಜೇವರ್ಗಿ-19, ಚಿತ್ತಾಪುರ-13 ಹಾಗೂ ಚಿಂಚೋಳಿ-10 ಸೇರಿದಂತೆ ಒಟ್ಟು 91 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಗ್ರಾಪಂ ಸಾರ್ವತ್ರಿಕ ಚುನಾವಣೆಯ ಮತದಾನವು ಜೂ. 14ರಂದು ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ನಡೆಯಲಿದೆ.
ಚುನಾವಣೆಗಾಗಿ ಮೇ 30ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಜೂ. 2 ಕೊನೆಯ ದಿನವಾಗಿದ್ದು, ಕೇವಲ 3 ದಿನಗಳ ಕಾಲಾವಕಾಶ ಮಾತ್ರ ನೀಡಲಾಗಿದೆ. ತಹಶೀಲ್ದಾರರು ತಾಲೂಕಾ
ಮಟ್ಟದಲ್ಲಿಯೇ ಮತಪತ್ರವನ್ನು ತಯಾರಿಸಿಕೊಂಡು ಎಲೆಕ್ಟ್ರಾನಿಕ್ ಮತಯಂತ್ರಗಳಿಗೆ ಅಳವಡಿಸಬೇಕು.
ಇದರಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗಬಾರದು ಎಂದರು. ಕಲಬುರಗಿ ತಾಲೂಕಿನ ಮರಗುತ್ತಿ, ಆಳಂದ ತಾಲೂಕಿನ ಮಡಕಿ, ದಣ್ಣೂರ, ನಿರಗುಡಿ, ಭೂಸನೂರ, ಹಿತ್ತಲಶಿರೂರ, ಧುತ್ತರಗಾಂವ, ಚಿಂಚೋಳಿ ತಾಲೂಕಿನ
ಕರ್ಚಖೇಡ, ಗರಗಪಳ್ಳಿ, ಚಿತ್ತಾಪುರ ತಾಲೂಕಿನ ಶಳ್ಳಗಿ, ಕೊಲ್ಲೂರ, ರಾಂಪುರಹಳ್ಳಿ, ಜೇವರ್ಗಿ ತಾಲೂಕಿನ
ಮದರಿ, ಕರಕಿಹಳ್ಳಿ, ರಂಜಣಗಿ ಗ್ರಾಪಂಗಳಿಗಾಗಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.
ಇದೇ ಅವಧಿಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಒಟ್ಟು 13 ಗ್ರಾಪಂ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಚುನಾವಣೆ ಮತಪತ್ರದ ಮುಖಾಂತರ ನಡೆಯುವುದು ಎಂದರು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಗಾಗಿ ಆಯಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಹಶೀಲ್ದಾರರು ಕರಡು ಮತದಾರರ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ಈಗಾಗಲೇ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾರ್ಡಗಳ ವಿಂಗಡಣೆ ಕೈಗೊಂಡು ಅಧಿಸೂಚನೆ ಹೊರಡಿಸಲಾಗಿದೆ.
ನೂತನವಾಗಿ ಗುರುತಿಸಲಾಗಿರುವ ವಾರ್ಡುಗಳ ವ್ಯಾಪ್ತಿಯಲ್ಲಿ ಮತದಾರರನ್ನು ಗುರುತಿಸಬೇಕು. ಮನೆ ಮನೆಗೆ ಭೇಟಿ ನೀಡಿ ಮತದಾರರನ್ನು ವಿಂಗಡಿಸಬೇಕು. ಯಾವುದೇ ಕಾರಣಕ್ಕೂ ಮತದಾರರು ಒಂದು ವಾರ್ಡ್ದಿಂದ ಇನ್ನೊಂದು ವಾರ್ಡಗೆ ಸೇರ್ಪಡೆಯಾಗದಂತೆ ಹಾಗೂ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು.
ಜೂ. 11ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಬೇಕು. ಜೂ. 17ರೊಳಗಾಗಿ ಆಕ್ಷೇಪನೆಗಳನ್ನು ಸ್ವೀಕರಿಸಿ ಜೂ. 22ರೊಳಗಾಗಿ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುವ ಮೂಲಕ ಜೂ. 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಬೇಕೆಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ