ಕಬ್ಬಿನ ಬಾಕಿ ನೀಡದಿದ್ದರೆ ಕಠಿಣ ಕ್ರಮ: ಡಿಸಿ
Team Udayavani, Jun 2, 2018, 10:48 AM IST
ಕಲಬುರಗಿ: ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವುದನ್ನು ಜೂನ್ 15ರೊಳಗೆ ಪಾವತಿಸದಿದ್ದರೆ ಕಾರ್ಖಾನೆ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಎಚ್ಚರಿಕೆ ನೀಡಿದರು.
ಶುಕ್ರವಾರ ರೈತ ಮುಖಂಡರ ಹಾಗೂ ರೇಣುಕಾ ಶುಗರ್ಸ್, ಉಗಾರ ಶುಗರ್ಸ್, ಎನ್.ಎಸ್.ಎಲ್ ಹಾಗೂ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳ ಸಭೆ ನಡೆಸಿದ ಅವರು, ಹಲವಾರು ಬಾರಿ ಈ ಕುರಿತು ಎಚ್ಚರಿಕೆ ನೀಡಲಾಗಿದೆ. ಇನ್ಮುಂದೆ ಕ್ರಮ ಜಾರಿಯಾಗುತ್ತದೆ ಎಂದರು.
ರೈತರ ಬೆಳೆ ಸಾಲ ಮನ್ನಾ ಕುರಿತು ರಾಷ್ಟ್ರೀಕೃತ ಬ್ಯಾಂಕ್ ಗಳು, ಸಹಕಾರಿ ಬ್ಯಾಂಕ್ಗಳಿಗೆ ಅನ್ವಯವಾಗುವ ಎಲ್ಲ ಸವಲತ್ತುಗಳನ್ನು ಎಚ್ಡಿಎಫ್ಸಿ, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಹಾಗೂ ಇತರ ವಾಣಿಜ್ಯ ಬ್ಯಾಂಕ್ಗಳಿಗೂ ಅನ್ವಯವಾಗುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ರೈತ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಜಗದೀಶ ಪಾಟೀಲ ರಾಜಾಪುರ, ರಾಜ್ಯ ಕಾರ್ಯದರ್ಶಿ ದತ್ತಾತ್ರೇಯ ಕುಲಕರ್ಣಿ, ಮುಖಂಡರಾದ ಶರಣಕುಮಾರ ಬಿಲ್ಲಾಡ, ರಮೇಶ ಹೂಗಾರ, ಶಾಂತವೀರಪ್ಪ ಕಲಬುರಗಿ, ನಾಗೇಂದ್ರರಾವ ದೇಶಮುಖ, ಶಾಂತವೀರ ಪಾಟೀಲ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ