ನವನಿಹಾಳದಲ್ಲಿ ಸತ್ಯಸಾಯಿ ವಿವಿ ಶುಭಾರಂಭ


Team Udayavani, Jun 4, 2018, 9:01 AM IST

gul-1.jpg

ಕಲಬುರಗಿ: ಕಲಬುರಗಿ-ಬೀದರ ರಾಷ್ಟ್ರೀಯ ಹೆದ್ದಾರಿಗೆ ಹತ್ತಿಕೊಂಡಿರುವ ನೂತನ ತಾಲೂಕು ಕಮಲಾಪುರ ಬಳಿಯ
ನವನಿಹಾಳ ಸೀಮಾಂತರದಲ್ಲಿ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ರವಿವಾರ ಶುಭಾರಂಭಗೊಂಡಿತು. 

ವಿಶಾಲವಾದ 51 ಎಕರೆ ಭೂಮಿಯಲ್ಲಿ ಏಳು ವರ್ಷಗಳ ಹಿಂದೆ ತಲೆ ಎತ್ತಿರುವ ಪುಟಪರ್ತಿ ಸಾಯಿಬಾಬಾ ಕೃಪಾಶೀರ್ವಾದದ ಪ್ರಶಾಂತಿ ಬಾಲ ಮಂದಿರ ಟ್ರಸ್ಟ್‌ ಶಾಲಾ ಆವರಣದಲ್ಲಿ ವೀಡಿಯೋ ಕಾನ್ಫರೆನ್ಸ್‌ ಮೂಲಕ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯಕ್ಕೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್‌ ಚಾಲನೆ ನೀಡಿದರು.

ನಂತರ ಮಾತನಾಡಿದ ಸಚಿವರು, ವಿಶ್ವಕ್ಕೆ ತತ್ವಜ್ಞಾನದ ಬೆಳಕು ನೀಡಿದ ಭಾರತದಲ್ಲಿ ಇಂದು ನೈತಿಕ ಶಿಕ್ಷಣದ ಕೊರತೆ ಎದ್ದು ಕಾಣುತ್ತಿದೆ. ಆದರೆ ಸತ್ಯಸಾಯಿ ವಿವಿ ಭಾರತೀಯ ಭವ್ಯ ಸಂಸ್ಕೃತಿಯನ್ನು ಮತ್ತೆ ಮರುಕಳಿಸುವತ್ತ ಮುಂದಾಗಿರುವುದು ಶ್ಲಾಘನೀಯ. ಜನತೆ ಇಂಥ ವಿವಿಗಳನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಉಚಿತ ಊಟ, ವಸತಿಸಹಿತ ಸಂಸ್ಕಾರಯುತ ಶಿಕ್ಷಣ ನೀಡುವ ಏಕೈಕ ವಿವಿ ಇದಾಗಿದೆ. ಇಂಥ ವಿವಿ ಹೈದರಾಬಾದ ಕರ್ನಾಟಕದಲ್ಲಿ ಸ್ಥಾಪಿತವಾಗುವ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಕೊಡುಗೆ ನೀಡಲಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ದೇಶದಲ್ಲಿಂದು ಇಂಥ ವಿಶ್ವವಿದ್ಯಾಲಯಗಳ ಅಗತ್ಯವಿದೆ. ಉತ್ತಮ ಶಿಕ್ಷಣ ನೀಡಿದರೆ ಸಾಲದು, ಸಂಸ್ಕಾರಯುತ ಶಿಕ್ಷಣ ನೀಡುವುದು ಇಂದಿನ ಜರೂರಿಯಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಮಾನವೀಯ ಮೌಲ್ಯ ಕಳೆದುಕೊಳ್ಳುತ್ತಿರುವ ಇಂದಿನ
ದಿನಗಳಲ್ಲಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಸ್ಥಾಪಿಸುವ ಮೂಲಕ ಶ್ರೀ ಸತ್ಯಸಾಯಿ ಟ್ರಸ್ಟ್‌ ಉತ್ತಮ ಕಾರ್ಯ ಮಾಡುತ್ತಿದೆ ಎಂದರು.

ಸತ್ಯಸಾಯಿ ಮಾನವ ಅಭ್ಯುದಯ ಕುಲಪತಿ ಡಾ| ಎ.ಆರ್‌. ಮಂಜುನಾಥ, ಕುಲಾಧಿಪತಿ ಬಿ.ಎನ್‌.ನರಸಿಂಹಮೂರ್ತಿ
ಮಾತನಾಡಿ, ಮಾನವ ಅಭ್ಯುದಯ ವಿಶ್ವವಿದ್ಯಾಲಯ ವಿಶ್ವದಲ್ಲೇ ಪ್ರಥಮ. ನಗರ ಪ್ರದೇಶ ಬಿಟ್ಟು ಗ್ರಾಮೀಣ ಭಾಗದಲ್ಲಿ ವಿವಿ ಸ್ಥಾಪಿಸುವ ಮೂಲಕ ಸಂಸ್ಥೆ ಹಳ್ಳಿ ಮಕ್ಕಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಮುಂದೆ ಬಂದಿದೆ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಈ ವಿವಿ ಹಾಗೂ ಶಾಲಾ-ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದಾಗಿದೆ. ಊಟ, ವಸತಿ ಸಹಿತ ಉಚಿತ ಶಿಕ್ಷಣ ನೀಡಲಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ಐದನೇ ತರಗತಿ ಮುಗಿಸುವ ಬಡ ಮಕ್ಕಳಿಗೆ ನಮ್ಮ ಸಂಸ್ಥೆ ಶಾಲೆಗಳಲ್ಲಿ ಆರನೇ ತರಗತಿ ಪ್ರವೇಶಕ್ಕೆ ಅವಕಾಶವಿದೆ ಎಂದು ಹೇಳಿದರು.

ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ|
ಎಚ್‌.ಎಂ.ಮಹೇಶ್ವರಯ್ಯ, ಕುಲಪತಿ ಪಿ.ಡಿ.ಎನ್‌ ಶ್ರೀನಿವಾಸ್‌, ಮಧುಸೂದನ ನಾಯ್ಡು, ಟ್ರಸ್ಟ್‌ ಆಡಳಿತಾಧಿಕಾರಿ ಶಿವಸುಬ್ರಹ್ಮಣ್ಯಂ ಸದಸ್ಯರಾದ ಇಂದುಲಾಲ್‌ ಡಾ| ಸಾಯಿಲೀಲಾ, ಡಾ| ಮಂಜುನಾಥ, ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ಎಂ.ಬಿ ಅಂಬಲಗಿ, ಉಮೇಶ ಶೆಟ್ಟಿ , ರವಿ ಬಿರಾದಾರ, ವೈಜನಾಥ ತಡಕಲ್‌, ಶರಣು ಸಲಗರ, ಶಿವಪ್ರಭು ಪಾಟೀಲ, ಯಶ್ವಂತ ಅಷ್ಟಗಿ ಮುಂತಾದವರು ಇದ್ದರು.

ಗಮನ ಸೆಳೆದ ವಿದೇಶಿಗರು
ನವನಿಹಾಳದಲ್ಲಿ ಸುಂದರವಾದ ವಿವಿ ಕಟ್ಟ ತಲೆ ಎತ್ತಲು ಸಹಾಯ ಮಾಡಿರುವ ವಿದೇಶಿಗರು ಸಮಾರಂಭದಲ್ಲಿ ಭಾಗವಹಿಸಿರುವುದು ಗಮನ ಸೆಳೆಯಿತು. ಅದರಲ್ಲೂ 20 ದೇಶಗಳಿಂದ ಆಗಮಿಸಿದ್ದ ವಿದೇಶಿ ಮಹಿಳೆಯರು ಸೀರೆ ಉಟ್ಟು, ಹಣೆಯಲ್ಲಿ ತಿಲಕವಿಟ್ಟುಕೊಂಡು ಗಮನ ಸೆಳೆದರು. ಭಾರತೀಯ ಸಂಸ್ಕೃತಿಯನ್ನು ಶ್ಲಾಘಿಸಿದರು. ವಿಶ್ವದ ಎಲ್ಲ ದೇಶದ ಮಹಿಳೆಯರು ಸೀರೆ ತೊಟ್ಟರೆ ಅತ್ಯಾಚಾರ ಪ್ರಕರಣಗಳು ನಿಯಂತ್ರಣಕ್ಕೆ ಬರುವುದರಲ್ಲಿ ಸಂದೇಹವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.