ಅನೈತಿಕ ಚಟುವಟಿಕೆಗಳ ತಾಣವಾದ ಹಳೆ ಶಾಸಕರ ಭವನ


Team Udayavani, Jun 23, 2018, 2:50 PM IST

kalabyurgi-2.jpg

„ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ: ಕ್ಷೇತ್ರಕ್ಕೊಬ್ಬರು ಶಾಸಕರು, ಅವರಿಗೊಂದು ಭವನ. ಏಕೆಂದರೆ ಜನಸಾಮಾನ್ಯರು ತಮ್ಮ ಅಹವಾಲುಗಳನ್ನು ಶಾಸಕರಿಗೆ ತಿಳಿಸಬೇಕಾದರೆ ಅವರಿಗೊಂದು ನಿರ್ಧಿಷ್ಟ ಸ್ಥಳ ಬೇಕು. ಹೀಗಾಗಿ ಶಾಸಕರ
ಭವನ ಕಟ್ಟಿರುತ್ತಾರೆ. ಆದರೆ ಪಟ್ಟಣದಲ್ಲಿನ ಶಾಸಕರ ಭವನವನ್ನು ಹುಡುಕುವಂತ ಪರಿಸ್ಥಿತಿ
ನಿರ್ಮಾಣವಾಗಿದೆ.

ಪಟ್ಟಣದ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಲೋಕೋಪಯೋಗಿ  ಇಲಾಖೆ ಕಟ್ಟಡದಲ್ಲಿರುವ ತಾತ್ಕಾಲಿಕ ಶಾಸಕರ ಭವನವೀಗ ಅಕ್ಷರಶಃ ಖಾಸಗಿ ವಾಹನಗಳ ಅಡ್ಡೆ ಮತ್ತು ಅನೈತಿಕ ಚಟುವಟಿಕೆಗಳ ತಾಣವಾಗಿ ಬದಲಾಗಿದೆ. ಈ ಭವನದ ಆವರಣದಲ್ಲಿ ಖಾಸಗಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಕಡ್ಡದ ಎದುರು ಮತ್ತು ಅಕ್ಕಪಕ್ಕದಲ್ಲಿರುವ ಚರಂಡಿಗಳು ತುಂಬಿಕೊಂಡಿದ್ದು ಚರಂಡಿ ನೀರು ರಸ್ತೆಯ ಮೇಲೆಲ್ಲ ಹರಿದಾಡಿ ಕೊಳಗೇರಿಯಂತೆ ಕಾಣುತ್ತಿದೆ.ಕೊಳಗೇರಿಯಂತೆ ಕಾಣುತ್ತಿದೆ.

ಬಯಲು ಶೌಚಕ್ಕೆ ಶಾಸಕರ ಭವನವೇ ಜಾಗ: ಸಾರ್ವಜನಿಕರು, ಖಾಸಗಿ ವಾಹನಗಳ ಚಾಲಕರು ಭವನದ ಮುಂದಿನ ಚರಂಡಿ ಬಳಿ ಶೌಚಕ್ಕೆ ಹೋಗುತ್ತಾರೆ. ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುತ್ತಾರೆ. ಇದರಿಂದ ಇಲ್ಲಿನ ವಾತಾವರಣ ಕಲುಷಿತಗೊಂಡಿದೆ.

ಹಂದಿಗಳ ತಾಣ: ತುಂಬಿಕೊಂಡ ಚರಂಡಿಗಳು, ಎಲ್ಲೆಂದರಲ್ಲಿ ಕಾಣುವ ಪ್ಲಾಸ್ಟಿಕ್‌ ಕಸ ಹಾಗೂ ಸಾರ್ವಜನಿಕರು ಖಾಸಗಿ ವಾಹನಗಳ ಚಾಲಕರು ಇಲ್ಲಿಯೇ ಶೌಚಕ್ಕೆ ಹೋಗುವುದರಿಂದ ಹಂದಿಗಳು ಶಾಸಕರ ಭವನದ ಮುಂಭಾಗ ಮತ್ತು ಆವರಣವನ್ನು ತಮ್ಮ ಕಾಯಂ ವಾಸಸ್ಥಳವನ್ನಾಗಿ ಮಾಡಿಕೊಂಡಿವೆ.

ಚರಂಡಿಯ ಕೋಳಚೆ ನೀರಲ್ಲಿ ಹಂದಿಗಳು ಒದ್ದಾಡುವುದರಿಂದ ಗಬ್ಬು ವಾಸನೆ ಬಡಾವಣೆಗೆ ವ್ಯಾಪಿಸುತ್ತಿದೆ. ಇಂತಹ ಕೊಳಚೆ ಪ್ರದೇಶದಲ್ಲಿ ಸಾರ್ವಜನಿಕರು ಓಡಾಡುವುದರಿಂದ ಸಾಂಕ್ರಾಂಮಿಕ ರೋಗದ ಭೀತಿ ಎದುರಾಗಿದೆ.

ಮುಖ್ಯ ರಸ್ತೆಗೆ ಚರಂಡಿ ಇಲ್ಲದಿರುವುದೇ ಸಮಸ್ಯೆಗೆ ಕಾರಣ: ಪಟ್ಟಣದಲ್ಲಿ ದ್ವಿಪಥ ಮುಖ್ಯ ರಸ್ತೆ ನಿರ್ಮಿಸಲಾಗಿದೆ. ಮುಖ್ಯ ರಸ್ತೆಗೆ ಎರಡೂ ಬದಿಯಲ್ಲಿ ಗುಣಮಟ್ಟದ ಮತ್ತು ಸುಸಜ್ಜಿತ ಚರಂಡಿ ನಿರ್ಮಿಸಬೇಕಾಗಿತ್ತು. ಆದರೆ ಸಂಬಂಧ ಪಟ್ಟವರು ಇತ್ತ ಕಡೆ ಗಮನ ಹರಿಸದ ಕಾರಣದಿಂದ ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ಜವಾಬ್ದಾರಿತನದಿಂದಾಗಿ ಹಳೆಯ ಚರಂಡಿಗಳನ್ನು ಹಾಗೆ ಬಿಡಲಾಗಿದೆ. ಇದರಿಂದಾಗಿ ಚರಂಡಿಗಳು ಮುಚ್ಚಿಕೊಂಡಿದ್ದು, ಚರಂಡಿ ನೀರು ರಸ್ತೆ ಮೇಲೆ ಹರಿದಾಡುತ್ತಿದೆ.ಪುರಸಭೆಯವರು ಚರಂಡಿ ಸ್ವಚ್ಚಗೊಳಿಸುವ ಗೋಜಿಗೆ ಹೋಗಿಲ್ಲ ಎಂದು ಸಾರ್ವಜನಿಕರು ದೂರುತ್ತಾರೆ.

ರಾಷ್ಟ್ರೀಯ ಹಬ್ಬಗಳಂದು ನೆನಪಾಗುವ ಭವನ: ಶಾಸಕರ ಭವನ ಎನ್ನುವುದು ಕೇವಲ ರಾಷ್ಟ್ರೀಯ ಹಬ್ಬಗಳ ದಿನ ಧ್ವಜಾರೋಹಣಕ್ಕಾಗಿ ಮಾತ್ರ ಇದೆ ಎನ್ನುವಂತಾಗಿದೆ. ಯಾರೇ ಜನಪ್ರತಿನಿಧಿಗಳಿರಲಿ, ಶಾಸಕರಾಗಿರಲಿ ಅವರು
ಕೇವಲ ಸ್ವಾತಂತ್ರ ದಿನ, ಗಣರಾಜ್ಯ ದಿನ, ಹೈ.ಕ ವಿಮೋಚನಾ ದಿನಗಳಲ್ಲಿ ಮಾತ್ರ ಭವನಕ್ಕೆ ಬಂದು ಧ್ವಜಾರೋಹಣ ನೆರವೇರಿಸಿ ಹೋಗುತ್ತಾರೆ.ಪುನಃ ಇತ್ತ ಕಡೆ ತಿರುಗಿಯೂ ನೋಡುವುದಿಲ್ಲ. ಹೀಗಾಗಿ ಶಾಸಕರ ಭವನ ಎನ್ನುವುದು ಅನೈತಿಕ ಚಟುವಟಿಕೆಗಳ ಅಡ್ಡೆಯಾಗಿ ಮಾರ್ಪಟ್ಟಿದೆ. ಈ ಕುರಿತು ನೂತನ ಶಾಸಕರು ಕ್ರಮ ಕೈಗೊಳ್ಳುವರೇ ಎಂದು ಕಾಯ್ದು ನೋಡಬೇಕಿದೆ. 

ನಾನು 2004ರಲ್ಲಿ ಶಾಸಕನಾಗಿದ್ದ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಕಟ್ಟಡವನ್ನು ಶಾಸಕರ
ಭವನವನ್ನಾಗಿ ಮಾಡಿದ್ದೆ. ಉದ್ಯಾನವನ ನಿರ್ಮಿಸಿ ಒಳ್ಳೆಯ ವಾತಾವರಣ ಸೃಷ್ಟಿಸಿದ್ದೆ. ಆದರೆ ಈ ಹಿಂದೆ ಇದ್ದ ಶಾಸಕರು ಭವನದ ಬಗ್ಗೆ ಗಮನ ಹರಿಸಿಲ್ಲ, ಹೀಗಾಗಿ ಅವ್ಯವಸ್ಥೆಗೆ ಕಾರಣವಾಗಿದೆ. ಆದರೀಗ ಈ ಕಟ್ಟಡ ಕೆಡವಿ ಹೊಸ ಭವನ ಕಟ್ಟಿಸಲಾಗುತ್ತದೆ.
ಎಂ.ವೈ. ಪಾಟೀಲ, ಶಾಸಕರು

ಶಾಸಕರ ಭವನ ಹಾಳಾಗಿದ್ದರ ಬಗ್ಗೆ ಗಮನಕ್ಕೆ ಬಂದಿದೆ. ಸ್ಥಳ ಪರಿಶೀಲಿಸಿದ್ದೇವೆ. ಶೀಘ್ರವೇ ಭವನಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ದುರಸ್ತಿ ಮಾಡಲಾಗುವುದು.
ಮಾಣಿಕ ಕನಕಟ್ಟಿ, ಪಿಡಬ್ಲ್ಯುಡಿ ಎಇಇ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.