ಯಾದಗಿರಿ-ವಾಡಿ-ಕಲಬುರಗಿ ಸಾರಿಗೆ ಸಂಪರ್ಕ ಸರಳ


Team Udayavani, Jul 5, 2018, 10:55 AM IST

gul-4.jpg

ವಾಡಿ: ತಗ್ಗು-ದಿಣ್ಣೆ , ಧೂಳಿನಿಂದ ಕೂಡಿದ್ದ ವಾಡಿ-ಕಲಬುರಗಿ ಹಾಗೂ ವಾಡಿ-ಯಾದಗಿರಿ ನಡುವಿನ ಹದಗೆಟ್ಟ ರಸ್ತೆಗಳೀಗ ರಾಷ್ಟ್ರೀಯ ಹೆದ್ದಾರಿಯಾಗಿ ಸುಧಾರಣೆ ಕಂಡಿದ್ದು, ಬಸ್‌ಗಳ ಓಡಾಟ ಹೆಚ್ಚಿದೆ. ನರಕ ಸದೃಶ್ಯವಾಗಿದ್ದ ಯಾದಗಿರಿ-ವಾಡಿ-ಕಲಬುರಗಿ ಪ್ರಯಾಣ ಸದ್ಯ ಸುಖಕರವಾಗಿದ್ದು, ಸಾರಿಗೆ ಸಂಪರ್ಕ ಸರಳಗೊಂಡಿದೆ.

ರಸ್ತೆಗಳು ವಿಪರೀತ ಹದಗೆಟ್ಟಿದ್ದರಿಂದ ಯಾದಗಿರಿ ಹಾಗೂ ಕಲಬುರಗಿ ಮಧ್ಯೆ ಸಾರಿಗೆ ಸಂಪರ್ಕವೇ ಇಲ್ಲವಾಗಿತ್ತು. ಹರಕು ರಸ್ತೆ ಮೇಲೆ ಹೊರಡುತ್ತಿದ್ದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯ ಮುರುಕು ಬಸ್‌ಗಳು ಜಲ್ಲಿ ಕಲ್ಲುಗಳ ರಸ್ತೆಯಲ್ಲಿ ಜೋಲಿ ಹೊಡೆಯುತ್ತ ಧೂಳು ಹರಡಿ ಹೈರಾಣ ಮಾಡುತ್ತಿದ್ದವು. ಮಧ್ಯದಲ್ಲಿ ಕೆಟ್ಟುನಿಂತು ಪ್ರಯಾಣಿಕರನ್ನು ಗೋಳಾಡಿಸುತ್ತಿದ್ದವು. ಸಾಕಪ್ಪೋ ಸಾಕು ಈ ಬಸ್‌ ಪ್ರಯಾಣದ ಸಹವಾಸ ಸಾಕು ಎಂದು ಪ್ರಯಾಣಿಕರು ಚುನಾಯಿತ ಜನಪ್ರತಿನಿಧಿಗಳಿಗೆ ಶಾಪ ಹಾಕುತ್ತಿದ್ದರು.

ಬಸ್‌ ಸಂಚಾರಕ್ಕೆ ಗುಡ್‌ ಬೈ ಹೇಳುವ ಮೂಲಕ ಹಲವು ದಶಕಗಳ ಕಾಲ ಜನರು ರೈಲು ಪ್ರಯಾಣದತ್ತ ಮುಖಮಾಡಿದ್ದರು. ಆದರೆ, ಈಗ ಪರಸ್ಥಿತಿ ಬದಲಾಗಿದೆ. ಜನರು ರೈಲು ಮರೆತು ಬಸ್‌ ಪ್ರಯಾಣದತ್ತ ಮುಖಮಾಡಿದ್ದಾರೆ. ಕಾರಣ, ಹದಗೆಟ್ಟ ರಸ್ತೆಗಳು ಕಣ್ಮರೆಯಾಗಿವೆ. ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಅವರ ಒತ್ತಾಸೆ ಮೇರೆಗೆ ಕಲಬುರಗಿ-ವಾಡಿ-ಯಾದಗಿರಿ ಮಧ್ಯೆ ಗುಣಮಟ್ಟದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದೆ.

ಎನ್‌ಇಕೆಆರ್‌ಟಿಸಿ ವತಿಯಿಂದ ಯಾದಗಿರಿ-ವಾಡಿ-ಕಲಬುರಗಿ ನಡುವೆ ಹತ್ತಾರು ಬಸ್‌ಗಳ ಸಂಚಾರ ಸೌಲಭ್ಯ ಒದಗಿಸಲಾಗಿದ್ದು, ಪ್ರತಿ 30 ನಿಮಿಷಕ್ಕೊಂದರಂತೆ ಬಸ್‌ಗಳು ನಿಲ್ದಾಣಕ್ಕೆ ಬರುತ್ತಿವೆ. ಹೊಚ್ಚ ಹೊಸ ಬಸ್‌ಗಳ ಸೌಲಭ್ಯ ದಕ್ಕಿದ್ದಿರಿಂದ ಈ ಭಾಗದ ಪ್ರಯಾಣಿಕರು ಸಾರಿಗೆ ಸಮಸ್ಯೆಯಿಂದ ಮುಕ್ತರಾಗಿದ್ದಾರೆ.
 
ವಾಡಿಯಿಂದ ಕಲಬುರಗಿ ಹಾಗೂ ವಾಡಿಯಿಂದ ಯಾದಗಿರಿ ಕೇವಲ 40 ನಿಮಿಷದಲ್ಲಿ ತೂಕಡಿಕೆಯಿಲ್ಲದೆ ತಲುಪಬಹುದಾಗಿದೆ. ವ್ಯಾಪಾರ ವಹಿವಾಟಿಗಾಗಿ ಹಾಗೂ ಕಾಲೇಜು ಆಸ್ಪತ್ರೆಗಳಿಗೆ ನಿತ್ಯ ಪ್ರಯಾಣ ಬೆಳೆಸುತ್ತಿದ್ದ ಸಾವಿರಾರು ಜನ ಪ್ರಯಾಣಿಕರು ರೈಲು ತಪ್ಪಿದರೆ ಚಿಂತೆಗೊಳಗಾಗದೆ ಬಸ್‌ ನಿಲ್ದಾಣದತ್ತ ಬರುತ್ತಾರೆ. ಸಾರಿಗೆ ಸಂಪರ್ಕ ನಿರೀಕ್ಷೆ ಮೀರಿ ಸರಳಗೊಂಡಿದ್ದು, ರಸ್ತೆಗಳ ಮೇಲೆ ಬಿಡುವಿಲ್ಲದ ಕೆಂಪು-ಬಿಳಿ ಬಸ್‌ಗಳ ಓಡಾಟ ಕಂಡು ಸಾರ್ವಜನಿಕರು ಹರ್ಷಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾದ ನಂತರ ಯಾದಗಿರಿ-ವಾಡಿ- ಕಲಬುರಗಿ ಮಧ್ಯೆ ಬಸ್‌ ಸಂಚಾರ ಸೌಲಭ್ಯ ಹೆಚ್ಚಿಸಿದ್ದೇವೆ. ಯಾದಗಿರಿ ಡಿಪೋದಿಂದ 23 ಹಾಗೂ ಕಲಬುರಗಿ ಡಿಪೋದಿಂದ 23, ಪ್ರತಿನಿತ್ಯ ಒಟ್ಟು 46 ಬಸ್‌ಗಳು ಸಂಚರಿಸುತ್ತಿವೆ. ಜನರ ಸ್ಪಂದನೆ ಉತ್ತಮವಾಗಿದೆ. ಇಲಾಖೆಗೆ ಉತ್ತಮ ಆದಾಯ ಬರುತ್ತಿದೆ. ಬರುವ ದಿನಗಳಲ್ಲಿ ಸಾರಿಗೆ ಸೌಲಭ್ಯ ಇನ್ನಷ್ಟು ಹೆಚ್ಚಿಸುವ ಚಿಂತನೆಯಿದೆ.  ಪ್ರಭು ಹಲಗುಂಡ, ವ್ಯವಸ್ಥಪಕರು, ಎನ್‌ಈಕೆಆರ್‌ಟಿಸಿ, ಯಾದಗಿರಿ ಡಿಪೋ

ಸಾರಿಗೆ ಇಲಾಖೆಯಿಂದ ವಾಡಿ-ಕಲಬುರಗಿ ಮಧ್ಯೆ ಸಾಕಷ್ಟು ಹೊಸ ಬಸ್‌ಗಳ ಓಡಾಟ ಆರಂಭವಾಗಿವೆ. ಇದರಿಂದ ಈ ಭಾಗದ ಜನರಿಗೆ ಅನುಕೂಲವಾಗಿದೆ. ಹಿಂದೆ ರೈಲು ತಪ್ಪಿಸಿಕೊಂಡರೆ ಮತ್ತೂಂದು ರೈಲು ಎಷ್ಟೇ ತಡವಾಗಿ ಬಂದರೂ ಅದಕ್ಕಾಗಿ ಕಾಯಬೇಕಿತ್ತು. ಆದರೆ, ಈಗ ರಸ್ತೆ ಗಣನೀಯವಾಗಿ ಸುಧಾರಣೆ ಕಂಡಿದ್ದರಿಂದ ಬಸ್‌ ಪ್ರಯಾಣ ಅತ್ಯಂತ ಸರಳವಾಗಿದೆ. ಜನರಿಗೆ ಉತ್ತಮ ಸೌಲಭ್ಯ ಒದಗಿಸಿ ಕೊಡುವುದೇ ಸರಕಾರದ ಮೂಲ ಕರ್ತವ್ಯವಾಗಿದೆ. ಜನ ಇದನ್ನು ಜನಪ್ರತಿನಿಧಿಗಳಿಂದ ನಿರೀಕ್ಷಿಸುತ್ತಾರೆ. ಸಾರಿಗೆ ವ್ಯವಸ್ಥೆಯಲ್ಲಿ ತುಸು ಪ್ರಗತಿ ಕಂಡಿದ್ದು, ಅದು ಇನ್ನಷ್ಟು ಸುಧಾರಿಸಬೇಕಿದೆ. 
 ಯೇಶಪ್ಪ ಕೇದಾರ, ಪದವೀಧರ ವಿದ್ಯಾರ್ಥಿ

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.