ಕಲ್ಯಾಣ-ಕಿತೂರು ಕರ್ನಾಟಕ ಮರು ನಾಮಕರಣಕ್ತೆ ಒತ್ಕಾಯ


Team Udayavani, Jul 16, 2018, 10:10 AM IST

gul-6.gif

ಕಲಬುರಗಿ: ಅಖಂಡ ಕರ್ನಾಟಕ ನಿರ್ಮಾಣದ ನೆಟ್ಟಿನಲ್ಲಿ ರಾಜ್ಯ ಸರ್ಕಾರ ಹೈದ್ರಾಬಾದ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು-ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಬೇಕೆಂದು ನಾಡೋಜ ಡಾ| ಎಂ. ಚಿದಾನಂದ ಮೂರ್ತಿ ಆಗ್ರಹಿಸಿದರು.

ತಾಲೂಕಿನ ಶ್ರೀನಿವಾಸ ಸರಡಗಿಯ ಶ್ರೀಗುರು ಚಿಕ್ಕವೀರೇಶ್ವರ ಸಂಸ್ಥಾನ ಹಿರೇಮಠದ ವತಿಯಿಂದ ಕರ್ನಾಟಕ ಕೇಂದ್ರೀಯ ವಿವಿಯಿಂದ ಗೌರವ ಡಾಕ್ಟರೆಟ್‌ ಪಡೆದುದ್ದರ ಪ್ರಯುಕ್ತ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ದಶಕ-ದಶಕಗಳು ಕಳೆದರೂ ಇಲ್ಲಿಯವರೆಗೂ ಹೈದ್ರಾಬಾದ ಕರ್ನಾಟಕ-ಮುಂಬೈ ಕರ್ನಾಟಕ ಎನ್ನುವ ದಾಸ್ಯದ ಮನೋಭಾವದಿಂದ ಹೊರ ಬರುವಂತಾಗಲು ಸರ್ಕಾರ ಮರು ಕೂಡಲೇ ನಾಮಕರಣ ಮಾಡುವುದು ಅಗತ್ಯವಾಗಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕದ ನೆಲ ಅತ್ಯಂತ ಪವಿತ್ರಮಯ ಮತ್ತು ಪುಣ್ಯಮಯವಾಗಿದೆ. ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ಪರಿಚಯಿಸಿದ ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿದ ವಚನ ಸಾಹಿತ್ಯ, ದಾಸ ಸಾಹಿತ್ಯ ಒದಗಿಸಿದ ಈ ನೆಲದಲ್ಲಿ ಜನಪದ ಸಾಹಿತ್ಯವೂ ಬಹುದೊಡ್ಡ ಮಟ್ಟಿಗೆ ನಾಡಿಗೆ
ಕೊಡುಗೆಯಾಗಿ ಬಂದಿದೆ. ಕನ್ನಡಿಗರ ಉದಾಸೀನತೆಯಿಂದ ಕರ್ನಾಟಕದ ಅರ್ಧದಷ್ಟು ಭಾಗವನ್ನು ಈಗಾಗಲೇ ನಾವು ಕಳೆದುಕೊಂಡಿದ್ದೇವೆ. ನಾಡು ನುಡಿಗಾಗಿ ಸದಾ ಕಾಲ ಜಾಗೃತರಾಗಿ  ಹೋರಾಡುವುದು ಅಗತ್ಯವಾಗಿದೆ ಎಂದರು.

ಪ್ರಸ್ತುತ ವೀರಶೈವ ಲಿಂಗಾಯತ ಎನ್ನುವ ಭೇದ ಮಾಡುವ ಮೂಲಕ ಸರ್ಕಾರವೇ ಅಖಂಡತೆಗೆ ಪೆಟ್ಟು ಕೊಟ್ಟಿದ್ದು, ಅತ್ಯಂತ ನೋವಿನ ಸಂಗತಿಯಾಗಿದೆ. ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಎನ್ನುವುದನ್ನು ಅನೇಕ ಉದಾಹರಣೆಗಳ ಮೂಲಕ ಸಭಿಕರ ಮುಂದೆ ತೆರೆದಿಟ್ಟ ಅವರು, ಎಲ್ಲರನ್ನು ತೆಗೆದುಕೊಂಡು ಹೋಗುವ ಸರಕಾರಗಳು ನಮಗೆ ಬೇಕೇ ಹೊರತು ಒಗ್ಗಟ್ಟನ್ನು ಒಡೆದು ರಾಜಕೀಯ ಲಾಭ ಮಾಡಿಕೊಳ್ಳುವ ಮನಸ್ಥಿತಿ ಇಂದು ಹೆಚ್ಚಾಗುತ್ತಿರುವುದು ಖೇದಕರವಾಗಿದೆ ಎಂದು ವಿಷಾದಿಸಿದರು.

ಸಾನ್ನಿಧ್ಯ ವಹಿಸಿದ್ದ ರೇವಣಸಿದ್ದ ಶಿವಾಚಾರ್ಯರು ಆಶೀರ್ವಚನ ನೀಡಿ, ಸಾಹಿತ್ಯ ಸಂಶೋಧನೆ ಕ್ಷೇತ್ರದಲ್ಲಿ ಎಂ. ಚಿದಾನಂದಮೂರ್ತಿ ಅವರ ಕೊಡುಗೆ ಅಪಾರವಾಗಿದೆ. ಹಿರಿಯ ಚೇತನದ ನಿಸ್ವಾರ್ಥ ಸೇವೆ ಗುರುತಿಸಿ ಕೇಂದ್ರೀಯ ವಿಶ್ವವಿದ್ಯಾಲಯ ಗೌರವ ಡಾಕ್ಟರೆಟ್‌ ಪ್ರದಾನ ಮಾಡಿರುವುದು ಸಂಭ್ರಮದ ಸಂಗತಿಯಾಗಿದೆ ಎಂದರು.

ಶರಣಬಸವ ವಿಶ್ವ ವಿದ್ಯಾಲಯದ ಡೀನ್‌ ಡಾ| ಲಿಂಗರಾಜ ಶಾಸ್ತ್ರೀ, ಜಿಪಂ ಮಾಜಿ ಉಪಾಧ್ಯಕ್ಷ ಸುಭಾಷ ರಾಠೊಡ, ಯೋಗ ಸಾಧಕ ಗುರುಶಾಂತಪ್ಪ ಶೀಲವಂತ ಹಾಜರಿದ್ದರು. ಶಿವಶಂಕರ ಬಿರಾದಾರ ಪ್ರಾರ್ಥಿಸಿದರು, ಹಣಮಂತರಾಯ ಅಟ್ಟೂರ ಸ್ವಾಗತಿಸಿದರು, ನಾಗಲಿಂಗಯ್ಯ ಮಠಪತಿ ನಿರೂಪಿಸಿದರು, ರವಿ ಶಹಾಪುರಕರ ವಂದಿಸಿದರು.

ಸಂತೋಷ ಆಡೆ, ಶಿವರಾಜ ಪಾಟೀಲ ಅವರಾದ, ಸಂಗಯ್ಯ ಸ್ವಾಮಿ, ಭೀಮಾಶಂಕರ ಚಕ್ಕಿ, ಶೀಲವಂತಯ್ಯ ಮಲ್ಯದ ಮಠ, ಸಂಜು ಟೆಂಗೆ, ಸುರೇಶ ತಂಗಾ, ಶ್ರವಣಕುಮಾರ ಮಠ ಹಾಗೂ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.